AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಮಧ್ಯರಾತ್ರಿ ನಂತರ ಎಸ್​ಬಿಐನ ಯುಪಿಐ ಕೆಲಸ ಮಾಡೋದಿಲ್ಲ; ಎಷ್ಟು ಹೊತ್ತು ಸರ್ವಿಸ್ ಡೌನ್ ಆಗಿರುತ್ತೆ, ಏನು ಕಾರಣ, ನೋಡಿ ಮಾಹಿತಿ

SBI UPI Transaction Down: ನವೆಂಬರ್ 26ರಂದು ರಾತ್ರಿ 12:30ರಿಂದ ಮುಂಜಾವು 3ರವರೆಗೆ ನಾವು ಯುಪಿಐನಲ್ಲಿ ಟೆಕ್ನಾಲಜಿ ಅಪ್​ಗ್ರೇಡ್ ಮಾಡುತ್ತಿದ್ದೇವೆ. ಈ ಅವಧಿಯಲ್ಲಿ ಯುಪಿಐ ಹೊರತುಪಡಿಸಿ ಇಂಟರ್ನೆಟ್ ಬ್ಯಾಂಕಿಂಗ್, ಯೋನೋ, ಯೋನೋ ಲೈಟ್ ಮತ್ತು ಎಟಿಎಂ ಮೊದಲಾದ ಡಿಜಿಟಲ್ ಚಾನಲ್​ಗಳು ಲಭ್ಯ ಇರುತ್ತವೆ ಎಂದು ಎಸ್​ಬಿಐ ಶನಿವಾರ ಟ್ವೀಟ್ ಮಾಡಿದೆ.

ಇಂದು ಮಧ್ಯರಾತ್ರಿ ನಂತರ ಎಸ್​ಬಿಐನ ಯುಪಿಐ ಕೆಲಸ ಮಾಡೋದಿಲ್ಲ; ಎಷ್ಟು ಹೊತ್ತು ಸರ್ವಿಸ್ ಡೌನ್ ಆಗಿರುತ್ತೆ, ಏನು ಕಾರಣ, ನೋಡಿ ಮಾಹಿತಿ
ಎಸ್​ಬಿಐ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Nov 25, 2023 | 6:26 PM

Share

ನವದೆಹಲಿ, ನವೆಂಬರ್ 25: ನಿಮ್ಮ ಯುಪಿಐ ಆ್ಯಪ್​ನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (SBI) ಬ್ಯಾಂಕ್ ಖಾತೆಯನ್ನು ಬಳಸುತ್ತಿದ್ದೀರಾ? ನವೆಂಬರ್ 26, ಅಂದರೆ ನಾಳೆ ಭಾನುವಾರದಂದು ಎಸ್​ಬಿಐನ ಯುಪಿಐ ವಹಿವಾಟುಗಳು ಸಾಧ್ಯವಾಗುವುದಿಲ್ಲ. ಎಸ್​ಬಿಐನ ಯುಪಿಐ ಪ್ಲಾಟ್​ಫಾರ್ಮ್​ನಲ್ಲಿ ಟೆಕ್ನಾಲಜಿ ಅಪ್​ಗ್ರೇಡ್ ಮಾಡಲಾಗುತ್ತಿರುವುದರಿಂದ ಭಾನುವಾರ ಹಲವು ಹೊತ್ತು ಅದರ ವಹಿವಾಟು ಸ್ಥಗಿತಗೊಂಡಿರುತ್ತದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ಅಲರ್ಟ್ ಮಾಡಿದೆ. ಅದರ ಪ್ರಕಾರ ಶನಿವಾರ ರಾತ್ರಿಯಿಂದ ಭಾನುವಾರ ಮುಂಜಾವಿನ ಮಧ್ಯೆ ಎರಡೂವರೆ ಗಂಟೆ ಕಾಲ ಸರ್ವಿಸ್ ಡೌನ್ ಅಗಿರುತ್ತದೆ.

‘26-11-2023ರಂದು 00:30ರಿಂದ 3:00 ಗಂಟೆಯವರೆಗೆ ನಾವು ಯುಪಿಐನಲ್ಲಿ ಟೆಕ್ನಾಲಜಿ ಅಪ್​ಗ್ರೇಡ್ ಮಾಡುತ್ತಿದ್ದೇವೆ. ಈ ಅವಧಿಯಲ್ಲಿ ಯುಪಿಐ ಹೊರತುಪಡಿಸಿ ಇಂಟರ್ನೆಟ್ ಬ್ಯಾಂಕಿಂಗ್, ಯೋನೋ, ಯೋನೋ ಲೈಟ್ ಮತ್ತು ಎಟಿಎಂ ಮೊದಲಾದ ಡಿಜಿಟಲ್ ಚಾನಲ್​ಗಳು ಲಭ್ಯ ಇರುತ್ತವೆ,’ ಎಂದು ಎಸ್​ಬಿಐ ಇಂದು ಟ್ವೀಟ್ ಮಾಡಿದೆ.

ಅಂದರೆ, ಶನಿವಾರ ಮಧ್ಯರಾತ್ರಿ 12:30ರಿಂದ ಮುಂಜಾವು 3 ಗಂಟೆಯವರೆಗೆ ಅದರ ಯುಪಿಐ ವಹಿವಾಟು ಕೆಲಸ ಮಾಡುವುದಿಲ್ಲ. ಆ ಸಮಯದಲ್ಲಿ ಹಣದ ವಹಿವಾಟು ಮಾಡಬೇಕೆನ್ನುವವರಿಗೆ ಇತರ ಅವಕಾಶಗಳು ಇದ್ದೇ ಇವೆ. ಎಟಿಎಂ, ಇಂಟರ್ನನೆಟ್ ಬ್ಯಾಂಕಿಂಗ್, ಯೋನೋ ಬ್ಯಾಂಕಿಂಗ್ ಆ್ಯಪ್ ಇತ್ಯಾದಿಯನ್ನು ಬಳಸಬಹುದು. ಫೋನ್ ಬ್ಯಾಂಕಿಂಗ್ ಕೂಡ ನಡೆಯುತ್ತದೆ.

ಇದನ್ನೂ ಓದಿ: ಟಾಟಾನಾ, ಬಿರ್ಲಾನಾ?; ದೇಶದ ಅತಿದೊಡ್ಡ ಸಾಲಗಾರರು ಯಾರು? ಇಲ್ಲಿದೆ ಟಾಪ್-10 ಪಟ್ಟಿ

ಭಾರತದಲ್ಲಿ ಯುಪಿಐ ಅತಿಹೆಚ್ಚು ಬಳಸಲಾಗುತ್ತಿರುವ ಡಿಜಿಟಲ್ ಪೇಮೆಂಟ್ ಪ್ಲಾಟ್​ಫಾರ್ಮ್. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಯುಪಿಐ ಪ್ಲಾಟ್​ಫಾರ್ಮ್ ಸರಿಯಾಗಿ ಕೆಲಸ ಮಾಡುವುದಿಲ್ಲ ಎಂಬ ದೂರು ಸಾಕಷ್ಟು ಕೇಳಿಬಂದಿದೆ. 44 ಕೋಟಿ ಗ್ರಾಹಕರ ಬಳಗ ಹೊಂದಿರುವ ಎಸ್​ಬಿಐಗೆ ಇದನ್ನು ಸರಿಪಡಿಸುವುದು ಅತ್ಯಗತ್ಯವಾಗಿದೆ. ಈ ಕಾರಣಕ್ಕೆ ತಂತ್ರಜ್ಞಾನ ಉನ್ನತೀಕರಣ ಮಾಡುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:24 pm, Sat, 25 November 23

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?