AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPI Payment: ರೀಟೇಲ್ ಹೂಡಿಕೆದಾರರು ಐಪಿಒಗಳಿಗೆ ರೂ 5 ಲಕ್ಷದವರೆಗಿನ ಪಾವತಿಗೆ ಯುಪಿಐ ಬಳಕೆ

ಐಪಿಒಗೆ ಅರ್ಜಿ ಹಾಕುವ ರೀಟೇಲ್ ಹೂಡಿಕೆದಾರರು ಯುಪಿಐ ಬಳಸಬಹುದು ಎಂದು ಸೆಕ್ಯೂರಿಟೀಸ್ ಎಕ್ಸ್​ಚೇಂಜ್ ಬೋರ್ಡ್ ಆಫ್ ಇಂಡಿಯಾ ಹೇಳಿದೆ.

UPI Payment: ರೀಟೇಲ್ ಹೂಡಿಕೆದಾರರು ಐಪಿಒಗಳಿಗೆ ರೂ 5 ಲಕ್ಷದವರೆಗಿನ ಪಾವತಿಗೆ ಯುಪಿಐ ಬಳಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 06, 2022 | 8:36 AM

Share

ಬಂಡವಾಳ ಮಾರುಕಟ್ಟೆ ನಿಯಂತ್ರಕ ಸೆಬಿ (SEBI) ಮಂಗಳವಾರದಂದು ಹೇಳಿರುವ ಪ್ರಕಾರ, ಈಕ್ವಿಟಿ ಷೇರುಗಳು ಮತ್ತು ಕನ್ವರ್ಟಿಬಲ್‌ಗಳ ಸಾರ್ವಜನಿಕ ಐಪಿಒಗಳಲ್ಲಿ ಅರ್ಜಿ ಸಲ್ಲಿಸುವ ವೈಯಕ್ತಿಕ ಹೂಡಿಕೆದಾರರು 5 ಲಕ್ಷ ರೂಪಾಯಿವರೆಗಿನ ಅರ್ಜಿ ಮೊತ್ತಕ್ಕಾಗಿ ಏಕೀಕೃತ ಪಾವತಿ ಇಂಟರ್​ಫೇಸ್ (ಯುಪಿಐ) ಬಳಸಬಹುದು. ಅಲ್ಲದೆ, ಸಿಂಡಿಕೇಟ್ ಸದಸ್ಯ, ಸ್ಟಾಕ್ ಬ್ರೋಕರ್, ಡೆಪಾಸಿಟರಿ ಪಾರ್ಟಿಸಿಪೆಂಟ್ಸ್ ಮತ್ತು ರಿಜಿಸ್ಟ್ರಾರ್ ಹಾಗೂ ಷೇರು ವರ್ಗಾವಣೆ ಏಜೆಂಟ್‌ಗೆ ಈ ಯಾವುದೇ ಘಟಕಗಳೊಂದಿಗೆ ಸಲ್ಲಿಸಿದ ಬಿಡ್-ಕಮ್-ಅರ್ಜಿ ನಮೂನೆಯಲ್ಲಿ ತಮ್ಮ ಯುಪಿಐ ಐಡಿಯನ್ನು ಒದಗಿಸಲು ಕೇಳಲಾಗಿದೆ.

ಮೇ 1, 2022ರಂದು ಅಥವಾ ನಂತರ ತೆರೆಯುವ ಸಾರ್ವಜನಿಕ ವಿತರಣೆಗಳಿಗೆ ಹೊಸ ಮಾರ್ಗಸೂಚಿಗಳು ಜಾರಿಗೆ ಬರುತ್ತವೆ ಎಂದು ಸೆಬಿ ಸುತ್ತೋಲೆಯಲ್ಲಿ ತಿಳಿಸಿದೆ. ಹೆಚ್ಚಿದ ಯುಪಿಐ ಮಿತಿಯೊಂದಿಗೆ ಅರ್ಜಿಗಳ ಪ್ರಕ್ರಿಯೆಗೆ ಅನುಕೂಲವಾಗುವಂತೆ ವಿವಿಧ ಮಧ್ಯವರ್ತಿಗಳಲ್ಲಿ ಅಗತ್ಯವಿರುವ ವ್ಯವಸ್ಥಿತ ಸಿದ್ಧತೆಯನ್ನು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಪರಿಶೀಲಿಸಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಮಾರ್ಚ್ 30, 2022ರಂತೆ, ಶೇಕಡಾ 80ಕ್ಕಿಂತ ಹೆಚ್ಚು ಸ್ವಯಂ ಪ್ರಮಾಣೀಕೃತ ಸಿಂಡಿಕೇಟ್ ಬ್ಯಾಂಕ್‌ಗಳು (SCSBಗಳು)/ಪ್ರಾಯೋಜಕ ಬ್ಯಾಂಕ್‌ಗಳು/ಯುಪಿಐ ಅಪ್ಲಿಕೇಷನ್‌ಗಳು ಸಿಸ್ಟಮ್ ಬದಲಾವಣೆಗಳನ್ನು ನಡೆಸಿವೆ ಮತ್ತು ಎನ್​ಪಿಸಿಐ ನಿಯಮಾವಳಿಗಳನ್ನು ಅನುಸರಿಸಿವೆ. ಯುಪಿಐ-ಆಧಾರಿತ ಅಪ್ಲಿಕೇಷನ್‌ನಿಂದ ಬೆಂಬಲಿತವಾದ (ASBA) ಆರಂಭಿಕ ಸಾರ್ವಜನಿಕ ಕೊಡುಗೆಗಳಲ್ಲಿ (ಐಪಿಒಗಳು) ಎನ್​ಪಿಸಿಐನಿಂದ 2021ರ ಡಿಸೆಂಬರ್​ನಲ್ಲಿ ಯುಪಿಐನ ಪ್ರತಿ ವಹಿವಾಟು ಮಿತಿಯನ್ನು ರೂ. 2 ಲಕ್ಷದಿಂದ ರೂ. 5 ಲಕ್ಷಕ್ಕೆ ಹೆಚ್ಚಿಸಿದೆ.

ಇದನ್ನೂ ಓದಿ: UPI For Feature Phones: ಫೀಚರ್​ ಫೋನ್​ ಯುಪಿಐಗೆ ಚಾಲನೆ ನೀಡಿದ ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!