AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಧವಿ ಪುರಿ ವಿರುದ್ಧ ಎಫ್​ಐಆರ್ ದಾಖಲಿಸಲು ಮುಂಬೈ ಕೋರ್ಟ್ ಆದೇಶ; ಆಕ್ಷೇಪಿಸಲು ಸೆಬಿ ನಿರ್ಧಾರ

SEBI and BSE to challenge Mumbai court order: ಕೆಲ ದಿನಗಳ ಹಿಂದಷ್ಟೇ ಸೆಬಿ ಅಧ್ಯಕ್ಷ ಸ್ಥಾನದಿಂದ ಹೊರಬಂದ ಮಾಧಬಿ ಪುರಿ ಬುಚ್, ಇಬ್ಬರು ಬಿಎಸ್​ಇ ಅಧಿಕಾರಿಗಳು ಹಾಗು ಇತರ ಮೂವರ ವಿರುದ್ಧ ಎಫ್​ಐಆರ್ ದಾಖಲಿಸುವಂತೆ ಮುಂಬೈ ಕೋರ್ಟ್ ಪೊಲೀಸರಿಗೆ ಆದೇಶಿಸಿದೆ. ಮಾಧವಿ ಮತ್ತಿತರರಿಂದ ಅಧಿಕಾರ ದುರುಪಯೋಗ, ದೊಡ್ಡ ಮಟ್ಟದ ಹಣಕಾಸು ಅಕ್ರಮ, ವಂಚನೆಗಳಾಗಿವೆ ಎನ್ನುವ ದೂರಿನ ಮೇರೆಗೆ ಕೋರ್ಟ್ ಆದೇಶ ಹೊರಡಿಸಿದೆ. ಮುಂಬೈನ ವಿಶೇಷ ಭ್ರಷ್ಟಾಚಾರ ನಿಗ್ರಹ ದಳದ ಕೋರ್ಟ್​ನ ಈ ಆದೇಶವನ್ನು ಪ್ರಶ್ನಿಸಲು ಸೆಬಿ ಮತ್ತು ಬಿಎಸ್​ಇ ನಿರ್ಧರಿಸಿವೆ.

ಮಾಧವಿ ಪುರಿ ವಿರುದ್ಧ ಎಫ್​ಐಆರ್ ದಾಖಲಿಸಲು ಮುಂಬೈ ಕೋರ್ಟ್ ಆದೇಶ; ಆಕ್ಷೇಪಿಸಲು ಸೆಬಿ ನಿರ್ಧಾರ
ಸೆಬಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 03, 2025 | 10:55 AM

Share

ಮುಂಬೈ, ಮಾರ್ಚ್ 3: ಮಾಜಿ ಸೆಬಿ ಮುಖ್ಯಸ್ಥೆ ಮಾಧಬಿ ಪುರಿ ಬುಚ್ ಹಾಗೂ ಇತರ ಕೆಲವರ ವಿರುದ್ಧ ಎಫ್​ಐಆರ್ ದಾಖಲಿಸುವಂತೆ ಮುಂಬೈ ಕೋರ್ಟ್​ವೊಂದು ನೀಡಿರುವ ಆದೇಶವನ್ನು ಪ್ರಶ್ನಿಸಲು ಸೆಬಿ (SEBI) ನಿರ್ಧರಿಸಿದೆ. ಕೋರ್ಟ್​ನಲ್ಲಿ ಮಾಧವಿ ಪುರಿ ಮತ್ತಿತರರ ವಿರುದ್ಧ ಸಲ್ಲಿಕೆಯಾಗಿರುವ ದೂರು ಸಂದೇಹಾಸ್ಪದವಾಗಿದ್ದು, ಕೋರ್ಟ್ ಆದೇಶವನ್ನು ಕಾನೂನು ಮಾರ್ಗದಲ್ಲೇ ಎದುರಿಸಲು ಸೆಬಿ ಆಲೋಚಿಸಿದೆ.

ರೆಗ್ಯುಲೇಟರಿ ನಿಯಮಗಳ ಉಲ್ಲಂಘನೆ (regulatory violations) ಹಾಗೂ ಷೇರು ಮಾರುಕಟ್ಟೆ ಅಕ್ರಮ ಎಸಗಲಾಗಿದೆ ಎನ್ನುವ ಆರೋಪದ ಮೇಲೆ ಮಾಜಿ ಸೆಬಿ ಛೇರ್ಮನ್ ಮಾಧವಿ ಪುರಿ ಬುಚ್, ಇಬ್ಬರು ಬಿಎಸ್​ಇ ಅಧಿಕಾರಿಗಳು ಹಾಗೂ ಇತರ ಮೂವರ ವಿರುದ್ಧ ಎಫ್​ಐಆರ್ ದಾಖಲಿಸಿ ಎಂದು ಮುಂಬೈನ ವಿಶೇಷ ಭ್ರಷ್ಟಾಚಾರ ನಿಗ್ರಹ ದಳ ವಿಭಾಗದ ಕೋರ್ಟ್​ವೊಂದು ಮೊನ್ನೆ ಶನಿವಾರ (ಮಾ. 1) ಆದೇಶ ನೀಡಿತ್ತು.

ಇದನ್ನೂ ಓದಿ: ಬೈಜುಸ್​ನಿಂದ ವಂಚನೆ ಎಂದ ಅಮೆರಿಕದ ಕೋರ್ಟ್; ಎಲ್ಲಾ ಸೇರಿ ಸಂಚು ರೂಪಿಸಿದ್ರು, ತನಿಖೆ ಆಗಲಿ ಎಂದ ಸಿಇಒ ಬೈಜು ರವೀಂದನ್

ಪತ್ರಕರ್ತರೊಬ್ಬರು ನೀಡಿದ ದೂರಿನ ಮೇರೆಗೆ ಈ ಆದೇಶ ಬಂದಿದೆ. ಅರ್ಹತಾ ಮಾನದಂಡಗಳು ಇಲ್ಲದಿದ್ದರೂ ಕಂಪನಿಯೊಂದನ್ನು ಷೇರು ವಿನಿಮಯ ಕೇಂದ್ರದಲ್ಲಿ ಲಿಸ್ಟ್ ಮಾಡಲು ಅಕ್ರಮ ಎಸಗಲಾಗಿದೆ. ದೊಡ್ಡ ಮಟ್ಟದ ಹಣಕಾಸು ವಂಚನೆ, ಅಧಿಕಾರ ದುರುಪಯೋಗ, ಭ್ರಷ್ಟಾಚಾರ ಇವೆಲ್ಲವೂ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಈ ದೂರಿನಲ್ಲಿರುವ ವಾದವನ್ನು ಒಪ್ಪಿದ ನ್ಯಾಯಾಲಯ, ಮೇಲ್ನೋಟಕ್ಕೆ ತಪ್ಪು ಎಸಗಿರುವಂತೆ ತೋರುತ್ತಿದೆ. ಈ ಬಗ್ಗೆ ಕೋರ್ಟ್ ಕಣ್ಗಾವಲಿನಲ್ಲಿ ಪೊಲೀಸರಿಂದ ನಿಷ್ಪಕ್ಷಪಾತವಾಗಿ ತನಿಖೆ ಆಗಬೇಕು. 30 ದಿನದೊಳಗೆ ವರದಿ ಸಲ್ಲಿಕೆಯಾಗಬೇಕು ಎಂದು ವಿಶೇಷ ನ್ಯಾಯಾಧೀಶ ಶಶಿಕಾಂತ್ ಏಕನಾಥರಾವ್ ಬಂಗಾರ್ ತಮ್ಮ ಆದೇಶದಲ್ಲಿ ಸೂಚಿಸಿದ್ದಾರೆ.

ಇದನ್ನೂ ಓದಿ: 300 ಕೋಟಿ ರೂಗೆ ಖರೀದಿಸಿ 3 ವರ್ಷದಲ್ಲಿ ಕಂಪನಿ ಮುಚ್ಚಿದ ಫ್ಲಿಪ್​ಕಾರ್ಟ್

ಕೋರ್ಟ್ ಆದೇಶದ ಬಗ್ಗೆ ಸೆಬಿ ಮತ್ತು ಬಾಂಬೆ ಸ್ಟಾಕ್ ಎಕ್ಸ್​ಚೇಂಜ್ ಅಸಮಾಧಾನ

ದೂರು ದಾಖಲಾಗಿದ್ದು, ಅದರ ಮೇಲೆ ಕೋರ್ಟ್​ನಲ್ಲಿ ವಿಚಾರಣೆ ನಡೆದಿದ್ದು, ಇದರ ರೀತಿ ನೀತಿ ಬಗ್ಗೆ ಸೆಬಿ ಮತ್ತು ಬಿಎಸ್​ಇ ಅಸಮಾಧಾನಗೊಂಡಿವೆ. ‘ಈ ಅಧಿಕಾರಿಗಳು (ಮಾಧವಿ ಮತ್ತಿತರ ಆರೋಪಿಗಳು) ಆ ಸಂದರ್ಭದಲ್ಲಿ ನಿಯೋಜಿತ ಸ್ಥಾನಮಾನ ಹೊಂದಿರಲಿಲ್ಲ. ಆದಾಗ್ಯೂ ಕೂಡ ಅವರಿಗೆ ಯಾವುದೇ ನೋಟೀಸ್ ನೀಡದೇ ದೂರಿಗೆ ಕೋರ್ಟ್ ಅನುಮತಿಸಿದೆ. ಸೆಬಿಗೆ ತನ್ನ ವಿಚಾರಗಳನ್ನು ಪ್ರಸ್ತುತಪಡಿಸಲು ಕೂಡ ಅವಕಾಶ ನೀಡಲಿಲ್ಲ’ ಎಂದು ಷೇರು ಮಾರುಕಟ್ಟೆ ನಿಯಂತ್ರಣ ಪ್ರಾಧಿಕಾರ ಸಂಸ್ಥೆ ಆಕ್ಷೇಪಿಸಿದೆ.

ಈ ಪ್ರಕರಣದಲ್ಲಿ ಬಿಎಸ್​ಇ ವಿರುದ್ಧವೂ ದೂರು ದಾಖಲಾಗಿದೆ. ಬಿಎಸ್​ಇ ಕೂಡ ಸೆಬಿ ವಾದವನ್ನು ಪುನರುಚ್ಚರಿಸಿದೆ. ಈಗ ಸೆಬಿ ಮತ್ತು ಬಿಎಸ್​ಇ ಎರಡೂ ಕೂಡ ಕಾನೂನು ಮಾರ್ಗದಲ್ಲಿ ಪ್ರತಿಹೋರಾಟ ನಡೆಸಲು ನಿಶ್ಚಯಿಸಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ