AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಧವಿ ಪುರಿ ವಿರುದ್ಧ ಎಫ್​ಐಆರ್ ದಾಖಲಿಸಲು ಮುಂಬೈ ಕೋರ್ಟ್ ಆದೇಶ; ಆಕ್ಷೇಪಿಸಲು ಸೆಬಿ ನಿರ್ಧಾರ

SEBI and BSE to challenge Mumbai court order: ಕೆಲ ದಿನಗಳ ಹಿಂದಷ್ಟೇ ಸೆಬಿ ಅಧ್ಯಕ್ಷ ಸ್ಥಾನದಿಂದ ಹೊರಬಂದ ಮಾಧಬಿ ಪುರಿ ಬುಚ್, ಇಬ್ಬರು ಬಿಎಸ್​ಇ ಅಧಿಕಾರಿಗಳು ಹಾಗು ಇತರ ಮೂವರ ವಿರುದ್ಧ ಎಫ್​ಐಆರ್ ದಾಖಲಿಸುವಂತೆ ಮುಂಬೈ ಕೋರ್ಟ್ ಪೊಲೀಸರಿಗೆ ಆದೇಶಿಸಿದೆ. ಮಾಧವಿ ಮತ್ತಿತರರಿಂದ ಅಧಿಕಾರ ದುರುಪಯೋಗ, ದೊಡ್ಡ ಮಟ್ಟದ ಹಣಕಾಸು ಅಕ್ರಮ, ವಂಚನೆಗಳಾಗಿವೆ ಎನ್ನುವ ದೂರಿನ ಮೇರೆಗೆ ಕೋರ್ಟ್ ಆದೇಶ ಹೊರಡಿಸಿದೆ. ಮುಂಬೈನ ವಿಶೇಷ ಭ್ರಷ್ಟಾಚಾರ ನಿಗ್ರಹ ದಳದ ಕೋರ್ಟ್​ನ ಈ ಆದೇಶವನ್ನು ಪ್ರಶ್ನಿಸಲು ಸೆಬಿ ಮತ್ತು ಬಿಎಸ್​ಇ ನಿರ್ಧರಿಸಿವೆ.

ಮಾಧವಿ ಪುರಿ ವಿರುದ್ಧ ಎಫ್​ಐಆರ್ ದಾಖಲಿಸಲು ಮುಂಬೈ ಕೋರ್ಟ್ ಆದೇಶ; ಆಕ್ಷೇಪಿಸಲು ಸೆಬಿ ನಿರ್ಧಾರ
ಸೆಬಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 03, 2025 | 10:55 AM

Share

ಮುಂಬೈ, ಮಾರ್ಚ್ 3: ಮಾಜಿ ಸೆಬಿ ಮುಖ್ಯಸ್ಥೆ ಮಾಧಬಿ ಪುರಿ ಬುಚ್ ಹಾಗೂ ಇತರ ಕೆಲವರ ವಿರುದ್ಧ ಎಫ್​ಐಆರ್ ದಾಖಲಿಸುವಂತೆ ಮುಂಬೈ ಕೋರ್ಟ್​ವೊಂದು ನೀಡಿರುವ ಆದೇಶವನ್ನು ಪ್ರಶ್ನಿಸಲು ಸೆಬಿ (SEBI) ನಿರ್ಧರಿಸಿದೆ. ಕೋರ್ಟ್​ನಲ್ಲಿ ಮಾಧವಿ ಪುರಿ ಮತ್ತಿತರರ ವಿರುದ್ಧ ಸಲ್ಲಿಕೆಯಾಗಿರುವ ದೂರು ಸಂದೇಹಾಸ್ಪದವಾಗಿದ್ದು, ಕೋರ್ಟ್ ಆದೇಶವನ್ನು ಕಾನೂನು ಮಾರ್ಗದಲ್ಲೇ ಎದುರಿಸಲು ಸೆಬಿ ಆಲೋಚಿಸಿದೆ.

ರೆಗ್ಯುಲೇಟರಿ ನಿಯಮಗಳ ಉಲ್ಲಂಘನೆ (regulatory violations) ಹಾಗೂ ಷೇರು ಮಾರುಕಟ್ಟೆ ಅಕ್ರಮ ಎಸಗಲಾಗಿದೆ ಎನ್ನುವ ಆರೋಪದ ಮೇಲೆ ಮಾಜಿ ಸೆಬಿ ಛೇರ್ಮನ್ ಮಾಧವಿ ಪುರಿ ಬುಚ್, ಇಬ್ಬರು ಬಿಎಸ್​ಇ ಅಧಿಕಾರಿಗಳು ಹಾಗೂ ಇತರ ಮೂವರ ವಿರುದ್ಧ ಎಫ್​ಐಆರ್ ದಾಖಲಿಸಿ ಎಂದು ಮುಂಬೈನ ವಿಶೇಷ ಭ್ರಷ್ಟಾಚಾರ ನಿಗ್ರಹ ದಳ ವಿಭಾಗದ ಕೋರ್ಟ್​ವೊಂದು ಮೊನ್ನೆ ಶನಿವಾರ (ಮಾ. 1) ಆದೇಶ ನೀಡಿತ್ತು.

ಇದನ್ನೂ ಓದಿ: ಬೈಜುಸ್​ನಿಂದ ವಂಚನೆ ಎಂದ ಅಮೆರಿಕದ ಕೋರ್ಟ್; ಎಲ್ಲಾ ಸೇರಿ ಸಂಚು ರೂಪಿಸಿದ್ರು, ತನಿಖೆ ಆಗಲಿ ಎಂದ ಸಿಇಒ ಬೈಜು ರವೀಂದನ್

ಪತ್ರಕರ್ತರೊಬ್ಬರು ನೀಡಿದ ದೂರಿನ ಮೇರೆಗೆ ಈ ಆದೇಶ ಬಂದಿದೆ. ಅರ್ಹತಾ ಮಾನದಂಡಗಳು ಇಲ್ಲದಿದ್ದರೂ ಕಂಪನಿಯೊಂದನ್ನು ಷೇರು ವಿನಿಮಯ ಕೇಂದ್ರದಲ್ಲಿ ಲಿಸ್ಟ್ ಮಾಡಲು ಅಕ್ರಮ ಎಸಗಲಾಗಿದೆ. ದೊಡ್ಡ ಮಟ್ಟದ ಹಣಕಾಸು ವಂಚನೆ, ಅಧಿಕಾರ ದುರುಪಯೋಗ, ಭ್ರಷ್ಟಾಚಾರ ಇವೆಲ್ಲವೂ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಈ ದೂರಿನಲ್ಲಿರುವ ವಾದವನ್ನು ಒಪ್ಪಿದ ನ್ಯಾಯಾಲಯ, ಮೇಲ್ನೋಟಕ್ಕೆ ತಪ್ಪು ಎಸಗಿರುವಂತೆ ತೋರುತ್ತಿದೆ. ಈ ಬಗ್ಗೆ ಕೋರ್ಟ್ ಕಣ್ಗಾವಲಿನಲ್ಲಿ ಪೊಲೀಸರಿಂದ ನಿಷ್ಪಕ್ಷಪಾತವಾಗಿ ತನಿಖೆ ಆಗಬೇಕು. 30 ದಿನದೊಳಗೆ ವರದಿ ಸಲ್ಲಿಕೆಯಾಗಬೇಕು ಎಂದು ವಿಶೇಷ ನ್ಯಾಯಾಧೀಶ ಶಶಿಕಾಂತ್ ಏಕನಾಥರಾವ್ ಬಂಗಾರ್ ತಮ್ಮ ಆದೇಶದಲ್ಲಿ ಸೂಚಿಸಿದ್ದಾರೆ.

ಇದನ್ನೂ ಓದಿ: 300 ಕೋಟಿ ರೂಗೆ ಖರೀದಿಸಿ 3 ವರ್ಷದಲ್ಲಿ ಕಂಪನಿ ಮುಚ್ಚಿದ ಫ್ಲಿಪ್​ಕಾರ್ಟ್

ಕೋರ್ಟ್ ಆದೇಶದ ಬಗ್ಗೆ ಸೆಬಿ ಮತ್ತು ಬಾಂಬೆ ಸ್ಟಾಕ್ ಎಕ್ಸ್​ಚೇಂಜ್ ಅಸಮಾಧಾನ

ದೂರು ದಾಖಲಾಗಿದ್ದು, ಅದರ ಮೇಲೆ ಕೋರ್ಟ್​ನಲ್ಲಿ ವಿಚಾರಣೆ ನಡೆದಿದ್ದು, ಇದರ ರೀತಿ ನೀತಿ ಬಗ್ಗೆ ಸೆಬಿ ಮತ್ತು ಬಿಎಸ್​ಇ ಅಸಮಾಧಾನಗೊಂಡಿವೆ. ‘ಈ ಅಧಿಕಾರಿಗಳು (ಮಾಧವಿ ಮತ್ತಿತರ ಆರೋಪಿಗಳು) ಆ ಸಂದರ್ಭದಲ್ಲಿ ನಿಯೋಜಿತ ಸ್ಥಾನಮಾನ ಹೊಂದಿರಲಿಲ್ಲ. ಆದಾಗ್ಯೂ ಕೂಡ ಅವರಿಗೆ ಯಾವುದೇ ನೋಟೀಸ್ ನೀಡದೇ ದೂರಿಗೆ ಕೋರ್ಟ್ ಅನುಮತಿಸಿದೆ. ಸೆಬಿಗೆ ತನ್ನ ವಿಚಾರಗಳನ್ನು ಪ್ರಸ್ತುತಪಡಿಸಲು ಕೂಡ ಅವಕಾಶ ನೀಡಲಿಲ್ಲ’ ಎಂದು ಷೇರು ಮಾರುಕಟ್ಟೆ ನಿಯಂತ್ರಣ ಪ್ರಾಧಿಕಾರ ಸಂಸ್ಥೆ ಆಕ್ಷೇಪಿಸಿದೆ.

ಈ ಪ್ರಕರಣದಲ್ಲಿ ಬಿಎಸ್​ಇ ವಿರುದ್ಧವೂ ದೂರು ದಾಖಲಾಗಿದೆ. ಬಿಎಸ್​ಇ ಕೂಡ ಸೆಬಿ ವಾದವನ್ನು ಪುನರುಚ್ಚರಿಸಿದೆ. ಈಗ ಸೆಬಿ ಮತ್ತು ಬಿಎಸ್​ಇ ಎರಡೂ ಕೂಡ ಕಾನೂನು ಮಾರ್ಗದಲ್ಲಿ ಪ್ರತಿಹೋರಾಟ ನಡೆಸಲು ನಿಶ್ಚಯಿಸಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ