AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರ ಮತ್ತು ಅವ್ಯವಹಾರ ಆರೋಪಗಳಿಗೆ ಸಿಡಿದುಬಿದ್ದ ಸೆಬಿ ಮುಖ್ಯಸ್ಥೆ ಮತ್ತು ಅದಾನಿ ಗ್ರೂಪ್

SEBI chief Madhabi Puri Buch refutes allegations: ಸೆಬಿಯಲ್ಲಿ ಇದ್ದೂ ಐಸಿಐಸಿಐನಿಂದ ಆದಾಯ ಪಡೆಯುವ ಮೂಲಕ ಹಿತಾಸಕ್ತಿ ಘರ್ಷಣೆ ಮಾಡುತ್ತಿದ್ದಾರೆ ಎಂದು ಸೆಬಿ ಮುಖ್ಯಸ್ಥೆ ವಿರುದ್ಧ ಇತ್ತೀಚೆಗೆ ಆರೋಪ ಕೇಳಿಬಂದಿದೆ. ಮಾಧವಿ ಪುರಿ ಬುಚ್ ಮತ್ತವರ ಪತಿ ಧವಳ್ ಬುಚ್ ಈ ಆರೋಪಗಳನ್ನು ಸ್ಪಷ್ಟವಾಗಿ ಅಲ್ಲಗಳೆದಿದ್ದಾರೆ. ಅತ್ತ, ಸ್ವಿಟ್ಜರ್​ಲ್ಯಾಂಡ್ ಮಾಧ್ಯಮವೊಂದು ತಮ್ಮ ವಿರುದ್ಧ ಮಾಡಿರುವ ಆರೋಪವನ್ನು ಅದಾನಿ ಗ್ರೂಪ್ ಸಾರಾಸಗಟಾಗಿ ತಿರಸ್ಕರಿಸಿದೆ.

ಭ್ರಷ್ಟಾಚಾರ ಮತ್ತು ಅವ್ಯವಹಾರ ಆರೋಪಗಳಿಗೆ ಸಿಡಿದುಬಿದ್ದ ಸೆಬಿ ಮುಖ್ಯಸ್ಥೆ ಮತ್ತು ಅದಾನಿ ಗ್ರೂಪ್
ಮಾಧವಿ ಪುರಿ ಬುಚ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 13, 2024 | 5:19 PM

Share

ನವದೆಹಲಿ, ಸೆಪ್ಟೆಂಬರ್ 13: ಸೆಬಿ ಮುಖ್ಯಸ್ಥೆಯಾಗಿ ಬೇರೆ ಸಂಸ್ಥೆಗಳಿಂದ ಇನ್ನೂ ಆದಾಯ ಪಡೆಯುವ ಮೂಲಕ ಭ್ರಷ್ಟಾಚಾರ ಮತ್ತು ಹಿತಾಸಕ್ತಿ ಘರ್ಷಣೆ ಮಾಡುತ್ತಿದ್ದಾರೆ ಎಂದು ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳನ್ನು ಮಾಧವಿ ಪುರಿ ಬುಚ್ ಸಂಪೂರ್ಣವಾಗಿ ಅಲ್ಲಗಳೆದಿದ್ದಾರೆ. ಈ ಆರೋಪಗಳ ಬಗ್ಗೆ ಬಹಳ ಗಟ್ಟಿ ಧ್ವನಿಯಲ್ಲಿ ಮಾತನಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಅದರ ಹೆಸರೆತ್ತದೆಯೇ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಆರೋಪದಲ್ಲಿ ಯಾವ ಹುರುಳಿಲ್ಲ. ಉದ್ದೇಶಪೂರ್ವಕವಾಗಿ ಸುಳ್ಳು ಅಭಿಪ್ರಾಯ ಸೃಷ್ಟಿಸಲು ಈ ಆರೋಪಗಳನ್ನು ಮಾಡಲಾಗುತ್ತಿದೆ. ಈ ವಿಚಾರದಲ್ಲಿ ಕಾನೂನು ಕ್ರಮ ಬೇಕಾದರೂ ಜರುಗಿಸುತ್ತೇವೆ ಎಂದು ಮಾಧವಿ ಪುರಿ ಬುಚ್ ಮತ್ತು ಅವರ ಪತಿ ಧವಳ್ ಬುಚ್ ಹೇಳಿದ್ದಾರೆ.

ಮಾಧಬಿ ಪುರಿ ಬುಚ್ ಮೇಲಿನ ಆರೋಪಗಳೇನು?

ಮಾಧವಿ ಪುರಿ ಬುಚ್ ಮತ್ತು ಪತಿ ಧವಳ್ ಬುಚ್ ಅವರಿಗೆ ಸೇರಿದ ಅಗೋರಾ ಅಡ್ವೈಸರಿ ಎಂಬ ಕನ್ಸಲ್ಟಿಂಗ್ ಏಜೆನ್ಸಿ ಹೊಂದಿದ್ದಾರೆ. ಮಾಧವಿ ಅವರು ಸೆಬಿ ಸದಸ್ಯೆಯಾಗುವ ಮುನ್ನ ಐಸಿಐಸಿಐ ಸಂಸ್ಥೆಯಲ್ಲಿದ್ದರು. ಸೆಬಿ ಸದಸ್ಯೆಯಾದ ಬಳಿಕವೂ ಅವರಿಗೆ ಐಸಿಐಸಿಐ ಗ್ರೂಪ್​ನಿಂದ ಸಂಭಾವನೆ ಬರುತ್ತಿದೆ. ಅಗೋರಾ ಅಡ್ವೈಸರಿ ಸಂಸ್ಥೆ ಮೂಲಕ ಬೇರೆ ಬೇರೆ ಸಂಸ್ಥೆಗಳಿಂದಲೂ ಆದಾಯ ಬರುತ್ತಿದೆ ಎಂಬ ಆರೋಪ ಇತ್ತೀಚೆಗೆ ಕೇಳಿಬಂದಿದೆ. ವಿಪಕ್ಷವಾದ ಕಾಂಗ್ರೆಸ್ ಈ ವಿಚಾರ ಇಟ್ಟುಕೊಂಡು ಭಾರತದ ಷೇರು ಮಾರುಕಟ್ಟೆಯಲ್ಲಿ ಅತಿದೊಡ್ಡ ಸ್ಕ್ಯಾಮ್ ಆಗುತ್ತಿದೆ. ಸೆಬಿ ಮುಖ್ಯಸ್ಥೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತಿದೆ.

ಇದನ್ನೂ ಓದಿ: ಕ್ರೀಮ್ ಬನ್ ಮೂಲಕ ಹಣಕಾಸು ಸಚಿವೆಗೆ ಜಿಎಸ್​ಟಿ ಟಾಂಟ್ ಕೊಟ್ಟ ಹೋಟೆಲ್ ಉದ್ಯಮಿ; ನಿರ್ಮಲಾ ಕೊಟ್ಟ ಉತ್ತರ ಇದು

ಮಾಧವಿ ಪುರಿ ಬುಚ್ ನೀಡಿರುವ ಸ್ಪಷ್ಟನೆಗಳೇನು?

2017ರಲ್ಲಿ ಸೆಬಿಗೆ ಪೂರ್ಣಾವಧಿ ಸದಸ್ಯೆಯಾಗಿ ನೇಮಕವಾದಾಗಿನಿಂದಲೂ ತಮ್ಮ ಕನ್ಸಲ್ಟೆನ್ಸಿ ಸಂಸ್ಥೆ, ಆಸ್ತಿ, ಆದಾಯ ಇವೆಲ್ಲಾ ವಿವರಗಳನ್ನು ಸೆಬಿಗೆ ಸಲ್ಲಿಸುತ್ತಾ ಬಂದಿರುವುದಾಗಿ ಮಾಧವಿ ಪುರಿ ಬುಚ್ ಅವರು ಹೇಳುತ್ತಿದ್ದಾರೆ. ಅಲ್ಲದೇ, ತಮ್ಮ ಅವಧಿಯಲ್ಲಿ ಐಸಿಐಸಿಐ ಗ್ರೂಪ್ ಕಂಪನಿಗಳಿಗೆ ಸಂಬಂಧಿಸಿದ ಯಾವುದೇ ಫೈಲ್​ಗಳ ವಿಲೇವಾರಿ ಮಾಡಿಲ್ಲ ಎಂದೂ ಸೆಬಿ ಮುಖ್ಯಸ್ಥೆ ಸ್ಪಷ್ಟಪಡಿಸಿದ್ದಾರೆ.

ಅದಾನಿ ಗ್ರೂಪ್ ಕೂಡ ಕಿಡಿ

ಅದಾನಿ ಪ್ರತಿನಿಧಿಸುವ ವ್ಯಕ್ತಿಯೊಬ್ಬರು ರಹಸ್ಯ ನಿಧಿಗಳಲ್ಲಿ ಹೂಡಿಕೆ ಮಾಡಿದ್ಧಾರೆ. ಆ ಫಂಡ್​ಗಳು ಅದಾನಿ ಗ್ರೂಪ್​ನ ಷೇರುಗಳನ್ನು ಹೊಂದಿವೆ ಎಂದು ಸ್ವಿಟ್ಜರ್​ಲ್ಯಾಂಡ್​ನ ಗೋಥಾಮ್ ಸಿಟಿ ಎನ್ನುವ ಪತ್ರಿಕೆಯೊಂದರಲ್ಲಿ ವರದಿ ಮಾಡಲಾಗಿದೆ. ಹಿಂಡನ್ಬರ್ಗ್ ರಿಸರ್ಚ್ ಸಂಸ್ಥೆ ಈ ವಿಚಾರವನ್ನು ತನ್ನ ಎಕ್ಸ್ ಪೋಸ್ಟ್​ನಲ್ಲಿ ಹೇಳಿದೆ.

ಇದನ್ನೂ ಓದಿ: ನವರತ್ನದಿಂದ ಮಹಾರತ್ನ ಸ್ಥಾನಮಾನ ಪಡೆಯಲಿರುವ ಬೆಂಗಳೂರಿನ ಎಚ್​ಎಎಲ್

ಅದಾನಿ ಗ್ರೂಪ್ ಈ ಬೆಳವಣಿಗೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅದೇ ಸಂಚುಕೋರರು ಒಟ್ಟಾಗಿ ಸೇರಿ ಅದಾನಿ ಗ್ರೂಪ್​ನ ಘನತೆ ಕುಂದಿಸಲು ಮತ್ತು ಮಾರುಕಟ್ಟೆ ಮೌಲ್ಯ ಕುಸಿಯುವಂತೆ ಮಾಡಲು ಪಿತೂರಿ ನಡೆಸಿದ್ದಾರೆ ಎಂದು ಹೇಳಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ