AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯೂಚುವಲ್ ಫಂಡ್ ಡಿಸ್ಟ್ರಿಬ್ಯೂಟರ್ಸ್ ಮಾದರಿಯಲ್ಲಿ ಬಾಂಡ್ ವಿತರಕರ ಜಾಲ ಬೆಳೆಸಲು ಸೆಬಿ ಸಜ್ಜು

SEBI Plans Bond Distributor Model: ಮ್ಯೂಚುವಲ್ ಫಂಡ್ ವಿತರಕರ ಮಾದರಿಯಲ್ಲೇ ಸಾಲಪತ್ರಗಳ ಮಾರುಕಟ್ಟೆಯಲ್ಲೂ ಸಾಮಾನ್ಯ ಜನರು ಸುಲಭವಾಗಿ ಹೂಡಿಕೆ ಮಾಡಲು ಅನುಕೂಲವಾಗುವಂತೆ ಸೆಬಿ (SEBI) ಹೊಸ 'ಬಾಂಡ್ ವಿತರಕರ' ವ್ಯವಸ್ಥೆಯನ್ನು ತರಲು ಯೋಜಿಸುತ್ತಿದೆ. ಈ ಮಾದರಿಯು ಹೂಡಿಕೆ ಪ್ರಕ್ರಿಯೆಯನ್ನು ಸರಳಗೊಳಿಸುವ ಮೂಲಕ ಚಿಲ್ಲರೆ ಹೂಡಿಕೆದಾರರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವ ಮತ್ತು ಡಿಜಿಟಲ್ ವೇದಿಕೆಗಳಲ್ಲಿ ತಪ್ಪು ಮಾಹಿತಿ ಹರಡುವುದನ್ನು ತಡೆಯುವ ಗುರಿ ಹೊಂದಿದೆ.

ಮ್ಯೂಚುವಲ್ ಫಂಡ್ ಡಿಸ್ಟ್ರಿಬ್ಯೂಟರ್ಸ್ ಮಾದರಿಯಲ್ಲಿ ಬಾಂಡ್ ವಿತರಕರ ಜಾಲ ಬೆಳೆಸಲು ಸೆಬಿ ಸಜ್ಜು
ಸೆಬಿImage Credit source: Shutterstock
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 14, 2026 | 6:20 PM

Share

ಮುಂಬೈ, ಮೇ 14: ಷೇರು ಮಾರುಕಟ್ಟೆಯಂತೆ ಬಾಂಡ್ (ಸಾಲಪತ್ರ) ಮಾರುಕಟ್ಟೆಯಲ್ಲೂ ಸಾಮಾನ್ಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೂಡಿಕೆ ಮಾಡುವಂತೆ ಉತ್ತೇಜಿಸಲು ಸೆಕ್ಯೂರಿಟೀಸ್ ನಿಯಂತ್ರಕ ಸಂಸ್ಥೆಯಾದ ಸೆಬಿ (SEBI) ಮಹತ್ವದ ಕ್ರಮಕ್ಕೆ ಮುಂದಾಗಿದೆ. ಮ್ಯೂಚುವಲ್ ಫಂಡ್ ವಿತರಕರ ಮಾದರಿಯಲ್ಲೇ ‘ಬಾಂಡ್ ವಿತರಕರಿಗಾಗಿ’ (Bond Distributors) ಪ್ರತ್ಯೇಕ ವಿಭಾಗವೊಂದನ್ನು ಸೃಷ್ಟಿಸಲು ಸೆಬಿ ಯೋಜಿಸುತ್ತಿದೆ.

ಮುಂಬೈನಲ್ಲಿ ನಡೆದ ಎಫ್​ಐಸಿಸಿಐ (FICCI) ಹಣಕಾಸು ಉತ್ಪನ್ನಗಳ ವಿತರಣಾ ಶೃಂಗಸಭೆಯಲ್ಲಿ ಮಾತನಾಡಿದ ಸೆಬಿಯ ಪೂರ್ಣಾವಧಿ ಸದಸ್ಯ ಅಮರ್ಜೀತ್ ಸಿಂಗ್, ಈ ಕುರಿತು ಮಾಹಿತಿ ನೀಡಿದರು. ಆ ಪ್ರಕಾರ, ಮ್ಯೂಚುವಲ್ ಫಂಡ್ ವಿತರಕರಂತೆಯೇ, ಈ ಹೊಸ ಬಾಂಡ್ ವಿತರಕರು ಕೂಡ ಸಾಮಾನ್ಯ ಹೂಡಿಕೆದಾರರಿಗೆ ಕೆವೈಸಿ (KYC) ಪ್ರಕ್ರಿಯೆ, ದಾಖಲಾತಿ ಮತ್ತು ವ್ಯವಹಾರಗಳನ್ನು ನಡೆಸಲು ಸಹಾಯ ಮಾಡಲಿದ್ದಾರೆ.

ಪ್ರಸ್ತುತ ಡೆಟ್ ಮಾರ್ಕೆಟ್ ಅಥವಾ ಸಾಲಪತ್ರಗಳ ಮಾರುಕಟ್ಟೆಯಲ್ಲಿ ಸಾಂಸ್ಥಿಕ ಹೂಡಿಕೆದಾರರದ್ದೇ ಮೇಲುಗೈ ಇದೆ. ಸಾಮಾನ್ಯ ಜನರಿಗೆ ಈ ಮಾರುಕಟ್ಟೆಯನ್ನು ತಲುಪುವಂತೆ ಮಾಡುವುದು ಸರ್ಕಾರದ ಗುರಿಯಾಗಿದೆ.

ಇದನ್ನೂ ಓದಿ: ಲಿಥಿಯಂ ಮತ್ತು ವಿರಳ ಭೂಖನಿಜಗಳಿಗೆ ರಷ್ಯಾ ಜೊತೆ ಶೀಘ್ರದಲ್ಲೇ ಭಾರತದ ಮಹತ್ವದ ಒಪ್ಪಂದ

ಇತ್ತೀಚಿನ ವರ್ಷಗಳಲ್ಲಿ ಡೆಟ್ ಆಧಾರಿತ ಮ್ಯೂಚುವಲ್ ಫಂಡ್‌ಗಳ ಮೇಲಿನ ತೆರಿಗೆ ನಿಯಮಗಳು ಬದಲಾಗಿರುವುದರಿಂದ, ಚಿಲ್ಲರೆ ಹೂಡಿಕೆದಾರರು ಈ ಕಡೆಗೆ ಬರಲು ಹಿಂಜರಿಯುತ್ತಿದ್ದಾರೆ. ಇದನ್ನು ಸರಿಪಡಿಸಲು ಸುಲಭ ಹೂಡಿಕೆ ಮಾರ್ಗಗಳನ್ನು ಒದಗಿಸುವುದು ಅತ್ಯಗತ್ಯವಾಗಿದೆ ಎಂದು ಅಮರ್ಜೀತ್ ಸಿಂಗ್ ವಿವರಿಸಿದರು.

ವಿತರಕರ ಪಾತ್ರದ ಬಗ್ಗೆ ಎಚ್ಚರಿಕೆ

ವಿತರಕರ ಸಂಖ್ಯೆ ಹೆಚ್ಚಾದಂತೆ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳ ಮೂಲಕ ತಪ್ಪು ಮಾಹಿತಿ ಹರಡುವ ಸಾಧ್ಯತೆಯ ಬಗ್ಗೆಯೂ ಅಮರ್ಜೀತ್ ಸಿಂಗ್ ಎಚ್ಚರಿಸಿದ್ದಾರೆ. “ಮಾರುಕಟ್ಟೆಯಲ್ಲಿನ ಹೂಡಿಕೆಯು ಸಾಮಾಜಿಕ ಮಾಧ್ಯಮಗಳ ಟ್ರೆಂಡ್ ಅಥವಾ ಪ್ರಭಾವದಿಂದ ನಡೆಯಬಾರದು. ಬದಲಿಗೆ ಸರಿಯಾದ ಮಾಹಿತಿ ಮತ್ತು ದೀರ್ಘಕಾಲದ ಯೋಜನೆಯ ಆಧಾರದ ಮೇಲೆ ನಡೆಯಬೇಕು” ಎಂದು ಅವರು ತಿಳಿಸಿದರು.

ಅಲ್ಲದೆ, ಹಣಕಾಸು ಉತ್ಪನ್ನಗಳಲ್ಲಿ ಕೃತಕ ಬುದ್ಧಿಮತ್ತೆ (AI) ಬಳಕೆಯ ಬಗ್ಗೆಯೂ ಅವರು ಮಾತನಾಡಿದ್ದು, ಕಂಪನಿಗಳು ತಮ್ಮ ತಾಂತ್ರಿಕ ಸಾಮರ್ಥ್ಯವನ್ನು ಅತಿಶಯೋಕ್ತಿಯಾಗಿ ಬಿಂಬಿಸಬಾರದು (AI Washing) ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಕಲ್ಲಿದ್ದಲು ಅನಿಲೀಕರಣ ಯೋಜನೆಗೆ ಸಂಪುಟದಿಂದ 37,500 ರೂ ಅನುಮೋದನೆ; ಏನಿದರ ಉಪಯೋಗ?

ಮಾರುಕಟ್ಟೆ ಚಿತ್ರಣ ಹೇಗಿದೆ?

ಮಾರ್ಚ್ 2026ರ ವೇಳೆಗೆ ಭಾರತದ ಮ್ಯೂಚುವಲ್ ಫಂಡ್ ಉದ್ಯಮದ ಒಟ್ಟು ಆಸ್ತಿ ಮೌಲ್ಯ 91 ಟ್ರಿಲಿಯನ್ ರೂಪಾಯಿ ತಲುಪಿದೆ. ಅಂದರೆ ಇದರಲ್ಲಿ ಮಾಡಲಾಗಿರುವ ಹೂಡಿಕೆಯ ಮೊತ್ತ ಇಷ್ಟಿದೆ. ಇದರಲ್ಲಿ ಶೇ. 54ರಷ್ಟು ಹೂಡಿಕೆಗಳು ವಿತರಕರ ಮೂಲಕವೇ ನಡೆಯುತ್ತಿವೆ. ಈಗ ಇದೇ ಯಶಸ್ಸನ್ನು ಬಾಂಡ್ ಮಾರುಕಟ್ಟೆಯಲ್ಲೂ ಮರುಕಳಿಸಲು ಸೆಬಿ ಸನ್ನದ್ಧವಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ