AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಸೆನ್ಸೆಕ್ಸ್, ನಿಫ್ಟಿ ಮೂರನೇ ಸೆಷನ್ ಏರಿಕೆ; ಇಂಡಸ್​ಇಂಡ್ ಬ್ಯಾಂಕ್ ಷೇರು 53 ರೂಪಾಯಿ ಹೆಚ್ಚಳ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಫೆಬ್ರವರಿ 2ನೇ ತಾರೀಕಿನಂದು ಸತತ ಮೂರನೇ ಸೆಷನ್ ಏರಿಕೆ ಆಗಿದೆ. ಇಂಡಸ್​ಇಂಡ್ ಬ್ಯಾಂಕ್ ಷೇರು ರೂ. 53 ಹೆಚ್ಚಳವಾಗಿದೆ.

Closing Bell: ಸೆನ್ಸೆಕ್ಸ್, ನಿಫ್ಟಿ ಮೂರನೇ ಸೆಷನ್ ಏರಿಕೆ; ಇಂಡಸ್​ಇಂಡ್ ಬ್ಯಾಂಕ್ ಷೇರು 53 ರೂಪಾಯಿ ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata

Updated on: Feb 02, 2022 | 5:11 PM

Share

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಸತತ ಮೂರನೇ ಸೆಷನ್, ಬುಧವಾರ ಕೂಡ ಏರಿಕೆಯನ್ನು ದಾಖಲಿಸಿದೆ. ಫೆಬ್ರವರಿ 2ನೇ ತಾರೀಕಿನಂದು ತುಂಬ ಆರಾಮವಾಗಿ ನಿಫ್ಟಿ ಸೂಚ್ಯಂಕವು 17,700 ಪಾಯಿಂಟ್ಸ್​ ದಾಟಿತು. ದಿನದ ಕೊನೆಗೆ ಸೆನ್ಸೆಕ್ಸ್ 695.76 ಪಾಯಿಂಟ್ಸ್ ಅಥವಾ ಶೇ 1.18ರಷ್ಟು ಮೇಲೇರಿ 59,558.33 ಪಾಯಿಂಟ್ಸ್​​ನಲ್ಲಿ ವಹಿವಾಟು ಮುಗಿಸಿದೆ. ಇನ್ನು ನಿಫ್ಟಿ 203.20 ಪಾಯಿಂಟ್ಸ್ ಅಥವಾ ಶೇ 1.16ರಷ್ಟು ಏರಿಕೆ ಕಂಡು, 17,780 ಪಾಯಿಂಟ್ಸ್​ನಲ್ಲಿ ದಿನಾಂತ್ಯದ ವ್ಯವಹಾರ ಕೊನೆಗೊಳಿಸಿದೆ. ಇಂದಿನ ವಹಿವಾಟಿನಲ್ಲಿ 2243 ಕಂಪೆನಿ ಷೇರುಗಳು ಏರಿಕೆ ದಾಖಲಿಸಿದರೆ, 1038 ಕಂಪೆನಿ ಷೇರುಗಳು ಇಳಿಕೆ ಕಂಡಿದ್ದರೆ ಹಾಗೂ 90 ಕಂಪೆನಿಯ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ಎಲ್ಲ ವಲಯದ ಸೂಚ್ಯಂಕಗಳು ಏರಿಕೆಯಲ್ಲೇ ಮುಕ್ತಾಯ ಕಂಡಿವೆ. ಬ್ಯಾಂಕ್, ರಿಯಾಲ್ಟಿ, ಫಾರ್ಮಾ, ಎಫ್​ಎಂಸಿಜಿ, ಮಾಹಿತಿ ತಂತ್ರಜ್ಞಾನ ಹಾಗೂ ಪಿಎಸ್​ಯು ಬ್ಯಾಂಕ್​ ಸೂಚ್ಯಂಕಗಳು ಶೇ 1ರಿಂದ ಶೇ 3ರಷ್ಟು ಹೆಚ್ಚಳವಾಗಿದೆ. ಬಿಎಸ್​ಇ ಮಿಡ್​ಕ್ಯಾಪ್ ಮತ್ತು ಸ್ಮಾಲ್​ಕ್ಯಾಪ್ ಸೂಚ್ಯಂಕಗಳು ಶೇ 1ರಿಂದ ಶೇ 1.5ರಷ್ಟು ಹೆಚ್ಚಳವಾಗಿದೆ. ಇಂದಿನ ವಹಿವಾಟಿನಲ್ಲಿ ಏರಿಕೆ ಹಾಗೂ ಇಳಿಕೆ ಕಂಡ ಪ್ರಮುಖ ಷೇರುಗಳ ವಿವರ ಇಲ್ಲಿದೆ.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ಇಂಡಸ್​ಇಂಡ್ ಬ್ಯಾಂಕ್ ಶೇ 5.75

ಬಜಾಜ್​ ಫಿನ್​ಸರ್ವ್​ ಶೇ 5.04

ಎಚ್​ಸಿಎಲ್​ ಟೆಕ್​ ಶೇ 3.37

ಬಜಾಜ್​ ಫೈನಾನ್ಸ್ ಶೇ 3.32

ಎಚ್​ಡಿಎಫ್​ಸಿ ಲೈಫ್​ ಶೇ 3.25

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ಟೆಕ್​ ಮಹೀಂದ್ರಾ ಶೇ -1.51

ಅಲ್ಟ್ರಾ ಟೆಕ್​ ಸಿಮೆಂಟ್ ಶೇ -1.00

ಬ್ರಿಟಾನಿಯಾ ಶೇ -0.97

ನೆಸ್ಟ್ಲೆ ಶೇ -0.92

ಹೀರೋ ಮೋಟೋಕಾರ್ಪ್ ಶೇ -0.89

ಇದನ್ನೂ ಓದಿ: Multibagger penny stocks: ಈ ಮಲ್ಟಿಬ್ಯಾಗರ್ ಪೆನ್ನಿ ಸ್ಟಾಕ್​ನಲ್ಲಿ ಹೂಡಿದ 1 ಲಕ್ಷ ರೂಪಾಯಿ 10 ವರ್ಷಗಳಲ್ಲಿ ರೂ. 4 ಕೋಟಿಗೆ

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು