AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing bell: ಎರಡು ದಿನಗಳ ನಷ್ಟದ ಹಾದಿಯಿಂದ ಲಾಭಕ್ಕೆ ಮರಳಿದ ಸೆನ್ಸೆಕ್ಸ್, ನಿಫ್ಟಿ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಮಂಗಳವಾರದಂದು ಏರಿಕೆ ದಾಖಲಿಸುವ ಮೂಲಕ ಎರಡು ದಿನಗಳ ನಷ್ಟದ ಸರಪಳಿಯನ್ನು ಮುರಿದಿದೆ.

Closing bell: ಎರಡು ದಿನಗಳ ನಷ್ಟದ ಹಾದಿಯಿಂದ ಲಾಭಕ್ಕೆ ಮರಳಿದ ಸೆನ್ಸೆಕ್ಸ್, ನಿಫ್ಟಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 21, 2021 | 5:13 PM

Share

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಡಿಸೆಂಬರ್ 21ನೇ ತಾರೀಕಿನ ಮಂಗಳವಾರದ ವಹಿವಾಟಿನಲ್ಲಿ ಎರಡು ದಿನಗಳ ನಷ್ಟದ ಸರಪಳಿಯನ್ನು ಮುರಿದಿದ್ದು, ಗಳಿಕೆಯನ್ನು ದಾಖಲಿಸಿವೆ. ಮಂಗಳವಾರದ ದಿನಾಂತ್ಯಕ್ಕೆ ಸೆನ್ಸೆಕ್ಸ್ 497 ಪಾಯಿಂಟ್ಸ್ ಅಥವಾ ಶೇ 0.89ರಷ್ಟು ಏರಿಕೆ ಕಂಡು, 56,319.01 ಪಾಯಿಂಟ್​ನೊಂದಿಗೆ ವ್ಯವಹಾರವನ್ನು ಮುಗಿಸಿದೆ. ಇನ್ನು ನಿಫ್ಟಿ 156.60 ಪಾಯಿಂಟ್ಸ್ ಅಥವಾ ಶೇ 0.94ರಷ್ಟು ಏರಿಕೆ ಕಂಡು, 16,780.80 ಪಾಯಿಂಟ್ಸ್​ನಲ್ಲಿ ವಹಿವಾಟು ಚುಕ್ತಾ ಆಗಿದೆ. ಇಂದಿನ ವಹಿವಾಟಿನಲ್ಲಿ 2204 ಕಂಪೆನಿಯ ಷೇರುಗಳು ಏರಿಕೆಯನ್ನು ದಾಖಲಿಸಿದರೆ, 1033 ಕಂಪೆನಿಯ ಷೇರುಗಳು ಇಳಿಕೆ ಕಂಡವು. 111 ಕಂಪೆನಿಯ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ಎಲ್ಲ ವಲಯದ ಸೂಚ್ಯಂಕಗಳು ಏರಿಕೆಯಲ್ಲೇ ಮುಕ್ತಾಯ ಆದವು. ರಿಯಾಲ್ಟಿ, ಕ್ಯಾಪಿಟಲ್ ಗೂಡ್ಸ್, ಫಾರ್ಮಾ, ಎನರ್ಜಿ, ಮಾಹಿತಿ ತಂತ್ರಜ್ಞಾನ ಮತ್ತು ಲೋಹದ ಸೂಚ್ಯಂಕಗಳು ಶೇ 1ರಿಂದ 3ರಷ್ಟು ಏರಿಕೆ ದಾಖಲಿಸಿದವು. ಇನ್ನು ದಿನಾಂತ್ಯಕ್ಕೆ ಭಾರತದ ರೂಪಾಯಿ ಮೌಲ್ಯ ಡಾಲರ್ ವಿರುದ್ಧ 31 ಪೈಸೆ ಗಳಿಕೆ ಕಂಡಿದೆ. ಹಿಂದಿನ ದಿನದ ಕೊನೆಗೆ 75.91ಕ್ಕೆ ವಹಿವಾಟು ಮುಕ್ತಾಯಗೊಂಡಿತ್ತು.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳ ಹಾಗೂ ಶೇಕಡಾವಾರು ಪ್ರಮಾಣ ಎಚ್​ಸಿಎಲ್ ಟೆಕ್ ಶೇ 3.89 ವಿಪ್ರೋ ಶೇ 3.73 ಯುಪಿಎಲ್ ಶೇ 3.58 ಅದಾನಿ ಪೋರ್ಟ್ಸ್ ಶೇ 3.58 ಟಾಟಾ ಸ್ಟೀಲ್ ಶೇ 3.00

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳ ಹಾಗೂ ಶೇಕಡಾವಾರು ಪ್ರಮಾಣ ಪವರ್​ಗ್ರಿಡ್ ಕಾರ್ಪೊರೇಷನ್ ಶೇ -1.55 ಆಕ್ಸಿಸ್ ಬ್ಯಾಂಕ್ ಶೇ -1.26 ಬಜಾಜ್ ಫೈನಾನ್ಸ್ ಶೇ -0.85 ಸಿಪ್ಲಾ ಶೇ -0.79 ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶೇ -0.71

ಇದನ್ನೂ ಓದಿ: Multibagger stock: ಒಂದು ವಾರದಲ್ಲಿ ಶೇ 95ರಷ್ಟು ರಿಟರ್ನ್ಸ್​ ನೀಡಿದೆ ಈ ಮಲ್ಟಿಬ್ಯಾಗರ್ ಸ್ಟಾಕ್

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ