AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಸೆನ್ಸೆಕ್ಸ್ 237 ಪಾಯಿಂಟ್ಸ್ ಕುಸಿತ; ಮಾರುತಿ ಸುಜುಕಿ ಷೇರು ತಲಾ 148 ರೂಪಾಯಿ ಇಳಿಕೆ

ಭಾರತದ ಷೇರು ಮಾರುಕಟ್ಟೆ ಸೂಷ್ಯಣಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಏಪ್ರಿಲ್ 13ನೇ ತಾರೀಕಿನ ಬುಧವಾರದಂದು ಇಳಿಕೆ ದಾಖಲಿಸಿದೆ.

Closing Bell: ಸೆನ್ಸೆಕ್ಸ್ 237 ಪಾಯಿಂಟ್ಸ್ ಕುಸಿತ; ಮಾರುತಿ ಸುಜುಕಿ ಷೇರು ತಲಾ 148 ರೂಪಾಯಿ ಇಳಿಕೆ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on: Apr 13, 2022 | 5:24 PM

Share

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕವಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಸತತ ಮೂರನೇ ಸೆಷನ್ ಆದ ಏಪ್ರಿಲ್ 13ನೇ ತಾರೀಕಿನ ಬುಧವಾರ ಕೂಡ ಇಳಿಕೆ ಕಂಡಿದ್ದು, ನಿಫ್ಟಿ 17,500 ಪಾಯಿಂಟ್ಸ್​ಗಿಂತ ಕೆಳಗೆ ಇಳಿದಿದೆ. ಬುಧವಾರದ ದಿನಾಂತ್ಯಕ್ಕೆ ಸೆನ್ಸೆಕ್ಸ್ 237.44 ಪಾಯಿಂಟ್ಸ್ ಅಥವಾ ಶೇ 0.41ರಷ್ಟು ಕುಸಿದು, 58,338.93 ಪಾಯಿಂಟ್ಸ್​ನಲ್ಲಿ ವ್ಯವಹಾರ ಮುಗಿಸಿದೆ. ಇನ್ನು ನಿಫ್ಟಿ 54.60 ಪಾಯಿಂಟ್ಸ್ ಅಥವಾ ಶೇ 0.31ರಷ್ಟು ಇಳಿಕೆಯಾಗಿ, 17,475.70 ಪಾಯಿಂಟ್ಸ್​ನಲ್ಲಿ ವಹಿವಾಟು ಚುಕ್ತಾ ಆಗಿದೆ. ಇಂದಿನ ಸೆಷನ್​ನಲ್ಲಿ 1811 ಕಂಪೆನಿಯ ಷೇರುಗಳು ಏರಿಕೆಯನ್ನು ದಾಖಲಿಸಿದರೆ, 1494 ಕಂಪೆನಿಯ ಷೇರುಗಳು ಇಳಿಕೆ ಕಂಡಿವೆ. ಇನ್ನು 136 ಕಂಪೆನಿಯ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ರಿಯಾಲ್ಟಿ, ವಾಹನ ಮತ್ತು ಬ್ಯಾಂಕ್ ಈ ವಲಯವನ್ನು ಹೊರತುಪಡಿಸಿ ಉಳಿದವು ಏರಿಕೆಯಲ್ಲೇ ವ್ಯವಹಾರ ಮುಗಿಸಿವೆ. ಎಫ್​ಎಂಸಿಜಿ, ಕ್ಯಾಪಿಟಲ್ ಗೂಡ್ಸ್, ಲೋಹ ಹಾಗೂ ತೈಲ ಮತ್ತು ಅನಿಲ ಸೂಚ್ಯಂಕಗಳು ತಲಾ ಶೇ 0.5ರಷ್ಟು ಮೇಲೇರಿವೆ. ಬಿಎಸ್​ಇ ಮಿಡ್​ಕ್ಯಾಪ್ ಸೂಚ್ಯಂಕವು ಶೇ 0.2ರಷ್ಟು ಕುಸಿದರೆ, ಸ್ಮಾಲ್​ಕ್ಯಾಪ್ ಸೂಚ್ಯಂಕವು ಶೇ 0.27ರಷ್ಟು ಹೆಚ್ಚಳ ಕಂಡಿದೆ.

ನಿಫ್ಟಿಯಲ್ಲಿ ಏರಿಕೆ ಕಂಡ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಒಎನ್​ಜಿಸಿ ಶೇ 2.55 ಅಪೋಲೋ ಹಾಸ್ಪಿಟಲ್ ಶೇ 2.55 ಐಟಿಸಿ ಶೇ 1.79 ಸನ್​ ಫಾರ್ಮಾ ಶೇ 1.68 ಯುಪಿಎಲ್ ಶೇ 1.61

ನಿಫ್ಟಿಯಲ್ಲಿ ಇಳಿಕೆ ಕಂಡ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಮಾರುತಿ ಸುಜುಕಿ ಶೇ -1.95 ಎಚ್​ಡಿಎಫ್​ಸಿ ಶೇ -1.95 ಎಚ್​ಡಿಎಫ್​ಸಿ ಬ್ಯಾಂಕ್ ಶೇ -1.91 ಡಾ ರೆಡ್ಡೀಸ್ ಲ್ಯಾಬ್ಸ್ ಶೇ -1.67 ಟಾಟಾ ಮೋಟಾರ್ಸ್ ಶೇ -1.65​

ಇದನ್ನೂ ಓದಿ: Stock Recommendation To Buy: ಅಲ್ಪಾವಧಿಗೆ ಷೇರು ಖರೀದಿಸಲು ಇಲ್ಲಿವೆ 6 ಶಿಫಾರಸುಗಳು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!