AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock Market Opening Bell: ಜೂನ್ 7ರ ಆರಂಭದ ವಹಿವಾಟಿನಲ್ಲಿ ಭಾರೀ ಕುಸಿತ ಕಂಡ ಭಾರತ ಷೇರುಪೇಟೆ ಸೂಚ್ಯಂಕಗಳು

ಜೂನ್ 7ನೇ ತಾರೀಕಿನಂದು ಆರಂಭದ ವಹಿವಾಟಿನಲ್ಲಿ ಸೆನ್ಸೆಕ್ಸ್​ 500ಕ್ಕೂ ಹೆಚ್ಚು ಪಾಯಿಂಟ್ಸ್ ಹಾಗೂ ನಿಫ್ಟಿ 150 ಪಾಯಿಂಟ್ಸ್ ಇಳಿಕೆ ಕಂಡಿದೆ.

Stock Market Opening Bell: ಜೂನ್ 7ರ ಆರಂಭದ ವಹಿವಾಟಿನಲ್ಲಿ ಭಾರೀ ಕುಸಿತ ಕಂಡ ಭಾರತ ಷೇರುಪೇಟೆ ಸೂಚ್ಯಂಕಗಳು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 07, 2022 | 10:49 AM

Share

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳು ಜೂನ್ 7ನೇ ತಾರೀಕಿನ ಮಂಗಳವಾರದ ಆರಂಭದ ಸೆಷನ್​ನಲ್ಲಿ ಭಾರೀ ಪ್ರಮಾಣದಲ್ಲಿ ಕುಸಿತ ಕಂಡವು. ಇದರಲ್ಲಿ ಬಿಎಸ್‌ಇ ಸೆನ್ಸೆಕ್ಸ್ 600 ಪಾಯಿಂಟ್ಸ್​ನಷ್ಟು ಕುಸಿದು, 55,050 ಪಾಯಿಂಟ್ಸ್​ಗೆ ತಲುಪಿದರೆ, ಎನ್‌ಎಸ್‌ಇ ನಿಫ್ಟಿ 180 ಪಾಯಿಂಟ್ಸ್​ ಕಳೆದುಕೊಂಡು 16,400 ಪಾಯಿಂಟ್ಸ್​ ತಲುಪಿತು. ವಿಶಾಲವಾದ ಮಾರುಕಟ್ಟೆಗಳಲ್ಲಿ, ಬಿಎಸ್‌ಇ ಮಿಡ್‌ಕ್ಯಾಪ್ ಮತ್ತು ಸ್ಮಾಲ್‌ಕ್ಯಾಪ್ ಸೂಚ್ಯಂಕಗಳು ಸಹ ನೆಗೆಟಿವ್ ಆಗಿದ್ದು, ಶೇಕಡಾ 1ರಷ್ಟು ಕಡಿಮೆಯಾಗಿತ್ತು. ವಲಯವಾರು ಗಮನಿಸುವುದಾದರೆ, ಗ್ರಾಹಕ ಬಳಕೆ ವಸ್ತುಗಳು, ಹಣಕಾಸು, ವಾಹನ, ರಿಯಾಲ್ಟಿ ಮತ್ತು ಬ್ಯಾಂಕ್‌ಗಳು ನಿಫ್ಟಿಯಲ್ಲಿ ನಷ್ಟಕ್ಕೆ ಕಾರಣವಾಗಿದ್ದು, ಶೇಕಡಾ 2ರಷ್ಟು ಕಡಿಮೆಯಾಗಿದೆ. ನಿಫ್ಟಿ ಐಟಿ, ಮತ್ತು ಎಫ್‌ಎಂಸಿಜಿ ವಲಯಗಳು ಸಹ ಗಮನಾರ್ಹವಾದ ಕುಸಿತ ಕಂಡವು.

ಷೇರುಗಳ ಪೈಕಿ ಪಾಲಿಸಿಬಜಾರ್ ಮಾಲೀಕ ಪಿಬಿ ಫಿನ್‌ಟೆಕ್ 235.74 ಕೋಟಿ ರೂಪಾಯಿ ಮೌಲ್ಯದ 38.34 ಲಕ್ಷ ಷೇರುಗಳು (ಶೇ 0.85 ಈಕ್ವಿಟಿ) ಕೈ ಬದಲಾದ ನಂತರ ಶೇಕಡಾ 8ರಷ್ಟು ಕಡಿಮೆಯಾಗಿದೆ. ಕಂಪೆನಿಯ ಅಧ್ಯಕ್ಷರು ಕಂಪೆನಿಯ 37 ಲಕ್ಷ ಷೇರುಗಳನ್ನು ಮಾರಾಟ ಮಾಡುತ್ತಾರೆ ಎಂದು ವರದಿಗಳು ತಿಳಿಸಿವೆ. ಈ ವರದಿ ಸಿದ್ಧ ಆಗುವ ಹೊತ್ತಿಗೆ ಸೆನ್ಸೆಕ್ಸ್ 528 ಪಾಯಿಂಟ್ಸ್ ಹಾಗೂ ನಿಫ್ಟಿ 150 ಪಾಯಿಂಟ್ಸ್ ಇಳಿಕೆಯಲ್ಲಿತ್ತು.

ನಿಫ್ಟಿಯಲ್ಲಿ ಏರಿಕೆ ಕಂಡ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ಒಎನ್​ಜಿಸಿ ಶೇ 5.52

ಕೋಲ್ ಇಂಡಿಯಾ ಶೇ 2.03

ಬಿಪಿಸಿಎಲ್​ ಶೇ 0.86

ಎನ್​ಟಿಪಿಸಿ ಶೇ 0.68

ರಿಲಯನ್ಸ್ ಶೇ 0.45

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ಟೈಟಾನ್ ಕಂಪೆನಿ ಶೇ -4.30

ಡಾ ರೆಡ್ಡೀಸ್ ಲ್ಯಾಬ್ಸ್ ಶೇ -4.24

ಎಚ್​ಯುಎಲ್ ಶೇ-2.78

ಏಷ್ಯನ್ ಪೇಂಟ್ಸ್ ಶೇ -2.65

ಅಲ್ಟ್ರಾಟೆಕ್ ಸಿಮೆಂಟ್ಸ್ ಶೇ -2.53

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Stock Market Investment Tips: ಷೇರು ಮಾರುಕಟ್ಟೆ ಹೂಡಿಕೆಯ ಆರಂಭ ಹಂತದಲ್ಲಿ ಇರುವವರಿಗೆ 5 ಟಿಪ್ಸ್

Published On - 10:49 am, Tue, 7 June 22

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ