AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock Market Opening Bell: ಜೂನ್ 7ರ ಆರಂಭದ ವಹಿವಾಟಿನಲ್ಲಿ ಭಾರೀ ಕುಸಿತ ಕಂಡ ಭಾರತ ಷೇರುಪೇಟೆ ಸೂಚ್ಯಂಕಗಳು

ಜೂನ್ 7ನೇ ತಾರೀಕಿನಂದು ಆರಂಭದ ವಹಿವಾಟಿನಲ್ಲಿ ಸೆನ್ಸೆಕ್ಸ್​ 500ಕ್ಕೂ ಹೆಚ್ಚು ಪಾಯಿಂಟ್ಸ್ ಹಾಗೂ ನಿಫ್ಟಿ 150 ಪಾಯಿಂಟ್ಸ್ ಇಳಿಕೆ ಕಂಡಿದೆ.

Stock Market Opening Bell: ಜೂನ್ 7ರ ಆರಂಭದ ವಹಿವಾಟಿನಲ್ಲಿ ಭಾರೀ ಕುಸಿತ ಕಂಡ ಭಾರತ ಷೇರುಪೇಟೆ ಸೂಚ್ಯಂಕಗಳು
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on:Jun 07, 2022 | 10:49 AM

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳು ಜೂನ್ 7ನೇ ತಾರೀಕಿನ ಮಂಗಳವಾರದ ಆರಂಭದ ಸೆಷನ್​ನಲ್ಲಿ ಭಾರೀ ಪ್ರಮಾಣದಲ್ಲಿ ಕುಸಿತ ಕಂಡವು. ಇದರಲ್ಲಿ ಬಿಎಸ್‌ಇ ಸೆನ್ಸೆಕ್ಸ್ 600 ಪಾಯಿಂಟ್ಸ್​ನಷ್ಟು ಕುಸಿದು, 55,050 ಪಾಯಿಂಟ್ಸ್​ಗೆ ತಲುಪಿದರೆ, ಎನ್‌ಎಸ್‌ಇ ನಿಫ್ಟಿ 180 ಪಾಯಿಂಟ್ಸ್​ ಕಳೆದುಕೊಂಡು 16,400 ಪಾಯಿಂಟ್ಸ್​ ತಲುಪಿತು. ವಿಶಾಲವಾದ ಮಾರುಕಟ್ಟೆಗಳಲ್ಲಿ, ಬಿಎಸ್‌ಇ ಮಿಡ್‌ಕ್ಯಾಪ್ ಮತ್ತು ಸ್ಮಾಲ್‌ಕ್ಯಾಪ್ ಸೂಚ್ಯಂಕಗಳು ಸಹ ನೆಗೆಟಿವ್ ಆಗಿದ್ದು, ಶೇಕಡಾ 1ರಷ್ಟು ಕಡಿಮೆಯಾಗಿತ್ತು. ವಲಯವಾರು ಗಮನಿಸುವುದಾದರೆ, ಗ್ರಾಹಕ ಬಳಕೆ ವಸ್ತುಗಳು, ಹಣಕಾಸು, ವಾಹನ, ರಿಯಾಲ್ಟಿ ಮತ್ತು ಬ್ಯಾಂಕ್‌ಗಳು ನಿಫ್ಟಿಯಲ್ಲಿ ನಷ್ಟಕ್ಕೆ ಕಾರಣವಾಗಿದ್ದು, ಶೇಕಡಾ 2ರಷ್ಟು ಕಡಿಮೆಯಾಗಿದೆ. ನಿಫ್ಟಿ ಐಟಿ, ಮತ್ತು ಎಫ್‌ಎಂಸಿಜಿ ವಲಯಗಳು ಸಹ ಗಮನಾರ್ಹವಾದ ಕುಸಿತ ಕಂಡವು.

ಷೇರುಗಳ ಪೈಕಿ ಪಾಲಿಸಿಬಜಾರ್ ಮಾಲೀಕ ಪಿಬಿ ಫಿನ್‌ಟೆಕ್ 235.74 ಕೋಟಿ ರೂಪಾಯಿ ಮೌಲ್ಯದ 38.34 ಲಕ್ಷ ಷೇರುಗಳು (ಶೇ 0.85 ಈಕ್ವಿಟಿ) ಕೈ ಬದಲಾದ ನಂತರ ಶೇಕಡಾ 8ರಷ್ಟು ಕಡಿಮೆಯಾಗಿದೆ. ಕಂಪೆನಿಯ ಅಧ್ಯಕ್ಷರು ಕಂಪೆನಿಯ 37 ಲಕ್ಷ ಷೇರುಗಳನ್ನು ಮಾರಾಟ ಮಾಡುತ್ತಾರೆ ಎಂದು ವರದಿಗಳು ತಿಳಿಸಿವೆ. ಈ ವರದಿ ಸಿದ್ಧ ಆಗುವ ಹೊತ್ತಿಗೆ ಸೆನ್ಸೆಕ್ಸ್ 528 ಪಾಯಿಂಟ್ಸ್ ಹಾಗೂ ನಿಫ್ಟಿ 150 ಪಾಯಿಂಟ್ಸ್ ಇಳಿಕೆಯಲ್ಲಿತ್ತು.

ನಿಫ್ಟಿಯಲ್ಲಿ ಏರಿಕೆ ಕಂಡ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ಒಎನ್​ಜಿಸಿ ಶೇ 5.52

ಕೋಲ್ ಇಂಡಿಯಾ ಶೇ 2.03

ಬಿಪಿಸಿಎಲ್​ ಶೇ 0.86

ಎನ್​ಟಿಪಿಸಿ ಶೇ 0.68

ರಿಲಯನ್ಸ್ ಶೇ 0.45

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ಟೈಟಾನ್ ಕಂಪೆನಿ ಶೇ -4.30

ಡಾ ರೆಡ್ಡೀಸ್ ಲ್ಯಾಬ್ಸ್ ಶೇ -4.24

ಎಚ್​ಯುಎಲ್ ಶೇ-2.78

ಏಷ್ಯನ್ ಪೇಂಟ್ಸ್ ಶೇ -2.65

ಅಲ್ಟ್ರಾಟೆಕ್ ಸಿಮೆಂಟ್ಸ್ ಶೇ -2.53

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Stock Market Investment Tips: ಷೇರು ಮಾರುಕಟ್ಟೆ ಹೂಡಿಕೆಯ ಆರಂಭ ಹಂತದಲ್ಲಿ ಇರುವವರಿಗೆ 5 ಟಿಪ್ಸ್

Published On - 10:49 am, Tue, 7 June 22

Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ