AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ನೆಲ ಕಚ್ಚಿದ ಸೆನ್ಸೆಕ್ಸ್​ನ 1416 ಪಾಯಿಂಟ್ಸ್, ನಿಫ್ಟಿಯ 431 ಪಾಯಿಂಟ್ಸ್; ಕರಗಿತು ಹೂಡಿಕೆದಾರರ ಸಂಪತ್ತು

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಮೇ 19ನೇ ತಾರೀಕಿನ ಗುರುವಾರದಂದು ಭಾರೀ ಪ್ರಮಾಣದಲ್ಲಿ ಇಳಿಕೆ ದಾಖಲಿಸಿದೆ.

Closing Bell: ನೆಲ ಕಚ್ಚಿದ ಸೆನ್ಸೆಕ್ಸ್​ನ 1416 ಪಾಯಿಂಟ್ಸ್, ನಿಫ್ಟಿಯ 431 ಪಾಯಿಂಟ್ಸ್; ಕರಗಿತು ಹೂಡಿಕೆದಾರರ ಸಂಪತ್ತು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: May 19, 2022 | 5:33 PM

Share

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಮೇ 19ನೇ ತಾರೀಕಿನ ಗುರುವಾರದಂದು ಸತತ ಎರಡನೇ ದಿನ ಭಾರೀ ಇಳಿಕೆ ದಾಖಲಿಸಿತು. ನಿಫ್ಟಿ ಸೂಚ್ಯಂಕವು 15800ರ ಮಟ್ಟದ ಬಳಿ ಮುಕ್ತಾಯ ಆಗಿದೆ. ದಿನಾಂತ್ಯಕ್ಕೆ ಸೆನ್ಸೆಕ್ಸ್ 1416.30 ಪಾಯಿಂಟ್ಸ್ ಅಥವಾ ಶೇ 2.61ರಷ್ಟು ಕುಸಿದು, 52,792.23 ಪಾಯಿಂಟ್ಸ್​ನಲ್ಲಿ ಮುಕ್ತಾಯ ಆಗಿದ್ದರೆ, ನಿಫ್ಟಿ 430.90 ಪಾಯಿಂಟ್ಸ್ ಅಥವಾ ಶೇ 2.65ರಷ್ಟು ಕೆಳಗೆ ಇಳಿದು, 15,809.40 ಪಾಯಿಂಟ್ಸ್​ನಲ್ಲಿ ವಹಿವಾಟು ಮುಗಿದಿದೆ. ಇಂದಿನ ವಹಿವಾಟಿನಲ್ಲಿ 838 ಕಂಪೆನಿ ಷೇರುಗಳು ಏರಿಕೆ ಕಂಡರೆ, 2413 ಕಂಪೆನಿ ಷೇರುಗಳು ಇಳಿಕೆ ದಾಖಲಿಸಿದವು. 122 ಕಂಪೆನಿ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ಎಲ್ಲ ವಲಯವೂ ಇಳಿಕೆಯಲ್ಲೇ ಮುಕ್ತಾಯ ಆಗಿವೆ. ಲೋಹ, ಮಾಹಿತಿ ತಂತ್ರಜ್ಞಾನ ಸೂಚ್ಯಂಕಗಳು ಶೇ 4ರಿಂದ 5ರಷ್ಟು ಇಳಿಕೆ ದಾಖಲಿಸಿವೆ. ಬಿಎಸ್​ಇ ಮಿಡ್​ಕ್ಯಾಪ್ ಮತ್ತು ಸ್ಮಾಲ್ ಕ್ಯಾಪ್ ಸೂಚ್ಯಂಕಗಳು ತಲಾ ಶೇ 2ರಷ್ಟು ನೆಲ ಕಚ್ಚಿವೆ.

ನಿಫ್ಟಿಯಲ್ಲಿ ಏರಿಕೆ ಕಂಡ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ಐಟಿಸಿ ಶೇ 3.32

ಡಾ ರೆಡ್ಡೀಸ್ ಲ್ಯಾಬ್ಸ್ ಶೇ 0.61

ಪವರ್​ ಗ್ರಿಡ್ ಕಾರ್ಪೊರೇಷನ್ ಶೇ 0.18

ನಿಫ್ಟಿಯಲ್ಲಿ ಇಳಿಕೆ ಕಂಡ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ವಿಪ್ರೋ ಶೇ- 6.25

ಎಚ್​ಸಿಎಲ್​ ಟೆಕ್ ಶೇ -5.99

ಇನ್ಫೋಸಿಸ್ ಶೇ -5.44

ಟೆಕ್​ ಮಹೀಂದ್ರಾ ಶೇ -5.43

ಟಿಸಿಎಸ್ ಶೇ -5.42

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಷೇರು ಮಾರುಕಟ್ಟೆ ಬೆಲೆಗಳ ಏರಿಳಿತ ಊಹಿಸುವುದು ಹೇಗೆ ಗೊತ್ತಾ..! ಇಲ್ಲಿದೆ ಮಾಹಿತಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ