AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಸೆನ್ಸೆಕ್ಸ್ 1457 ಪಾಯಿಂಟ್ಸ್, ನಿಫ್ಟಿ 427 ಪಾಯಿಂಟ್ಸ್ ಕುಸಿತ; ಷೇರು ಹೂಡಿಕೆದಾರರಿಗೆ ಭಾರೀ ನಷ್ಟ

ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಜೂನ್ 13ನೇ ತಾರೀಕಿನ ಸೋಮವಾರದಂದು ಭಾರೀ ಪ್ರಮಾಣದಲ್ಲಿ ನೆಲ ಕಚ್ಚಿವೆ. ಆ ಬಗ್ಗೆ ಮಾಹಿತಿ ಇಲ್ಲಿದೆ.

Closing Bell: ಸೆನ್ಸೆಕ್ಸ್ 1457 ಪಾಯಿಂಟ್ಸ್, ನಿಫ್ಟಿ 427 ಪಾಯಿಂಟ್ಸ್ ಕುಸಿತ; ಷೇರು ಹೂಡಿಕೆದಾರರಿಗೆ ಭಾರೀ ನಷ್ಟ
TV9 Web
| Edited By: |

Updated on: Jun 13, 2022 | 5:59 PM

Share

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಜೂನ್ 13ನೇ ತಾರೀಕಿನ ಸೋಮವಾರದಂದು ಭಾರೀ ಕುಸಿತ ದಾಖಲಿಸಿದವು ಜಾಗತಿಕ ಮಾರುಕಟ್ಟೆಯಲ್ಲೇ ದುರ್ಬಲತೆ ಕಂಡುಬಂತು. ಈ ಹಿನ್ನೆಲೆಯಲ್ಲಿ ನಿಫ್ಟಿ ಸೂಚ್ಯಂಕವು 15,800 ಪಾಯಿಂಟ್ಸ್​ಗಿಂತ ಕೆಳಗೆ ಬಂತು. ದಿನಾಂತ್ಯಕ್ಕೆ ಸೆನ್ಸೆಕ್ಸ್ 1456.74 ಪಾಯಿಂಟ್ಸ್ ಅಥವಾ ಶೇ 2.68ರಷ್ಟು ನೆಲ ಕಚ್ಚಿ, 52,846.70 ಪಾಯಿಂಟ್ಸ್​ಗೆ ದಿನದ ವಹಿವಾಟನ್ನು ಮುಗಿಸಿತು. ನಿಫ್ಟಿ 427.40 ಪಾಯಿಂಟ್ಸ್ ಅಥವಾ ಶೇ 2.64ರಷ್ಟು ಇಳಿಕೆ ಕಂಡು, 15,774.40 ಪಾಯಿಂಟ್ಸ್​ನಲ್ಲಿ ವ್ಯವಹಾರ ಕೊನೆಗೊಳಿಸಿತು. ಇಂದಿನ ವಹಿವಾಟಿನಲ್ಲಿ 2759 ಕಂಪೆನಿಯ ಷೇರು ಇಳಿಕೆ ದಾಖಲಿಸಿದರೆ, 117 ಕಂಪೆನಿಯ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ ಮತ್ತು 650 ಕಂಪೆನಿಯ ಷೇರುಗಳು ಏರಿಕೆ ಕಂಡವು.

ಇಂದಿನ ವ್ಯವಹಾರದಲ್ಲಿ ಎಲ್ಲ ವಲಯಗಳು ಕುಸಿತ ದಾಖಲಿಸಿದವು. ಬಿಎಸ್​ಇ ಮಿಡ್​ಕ್ಯಾಪ್ ಶೇ 2.7ರಷ್ಟು ಮತ್ತು ಸ್ಮಾಲ್​ಕ್ಯಾಪ್ ಶೇ 3ರಷ್ಟು ಇಳಿಕೆ ಕಂಡವು. ಬ್ಯಾಂಕ್, ಕ್ಯಾಪಿಟಲ್ ಗೂಡ್ಸ್, ವಾಹನ, ಮಾಹಿತಿ ತಂತ್ರಜ್ಞಾನ, ಲೋಹ, ರಿಯಾಲ್ಟಿ, ಪಿಎಸ್​ಯು ಬ್ಯಾಂಕ್, ತೈಲ ಮತ್ತು ಅನಿಲ ಸೂಚ್ಯಂಕಗಳು ತಲಾ ಶೇ 2ರಿಂದ 4ರಷ್ಟು ಕುಸಿದವು.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ನೆಸ್ಟ್ಲೆ ಶೇ 0.47

ಬಜಾಜ್ ಆಟೋ ಶೇ 0.01

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ಬಜಾಜ್​ ಫಿನ್​ಸರ್ವ್ ಶೇ -7.08

ಬಜಾಜ್ ಫೈನಾನ್ಸ್ ಶೇ -5.46

ಇಂಡಸ್​ಇಂಡ್ ಬ್ಯಾಂಕ್ ಶೇ -5.23

ಟೆಕ್​ ಮಹೀಂದ್ರಾ ಶೇ -5.22

ಹಿಂಡಾಲ್ಕೋ ಶೇ -5.00

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Warren Buffett: ಷೇರುಗಳಲ್ಲಿ ಹೂಡಿಕೆ ಮಾಡುವವರು ಹೂಡಿಕೆದಾರರ ಜಗದ್ಗುರು ವಾರೆನ್ ಬಫೆಟ್ ಮಾತುಗಳನ್ನೊಮ್ಮೆ ಕೇಳಿಸಿಕೊಳ್ಳಿ

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್