AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಸೆನ್ಸೆಕ್ಸ್ 1457 ಪಾಯಿಂಟ್ಸ್, ನಿಫ್ಟಿ 427 ಪಾಯಿಂಟ್ಸ್ ಕುಸಿತ; ಷೇರು ಹೂಡಿಕೆದಾರರಿಗೆ ಭಾರೀ ನಷ್ಟ

ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಜೂನ್ 13ನೇ ತಾರೀಕಿನ ಸೋಮವಾರದಂದು ಭಾರೀ ಪ್ರಮಾಣದಲ್ಲಿ ನೆಲ ಕಚ್ಚಿವೆ. ಆ ಬಗ್ಗೆ ಮಾಹಿತಿ ಇಲ್ಲಿದೆ.

Closing Bell: ಸೆನ್ಸೆಕ್ಸ್ 1457 ಪಾಯಿಂಟ್ಸ್, ನಿಫ್ಟಿ 427 ಪಾಯಿಂಟ್ಸ್ ಕುಸಿತ; ಷೇರು ಹೂಡಿಕೆದಾರರಿಗೆ ಭಾರೀ ನಷ್ಟ
TV9 Web
| Updated By: Srinivas Mata|

Updated on: Jun 13, 2022 | 5:59 PM

Share

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಜೂನ್ 13ನೇ ತಾರೀಕಿನ ಸೋಮವಾರದಂದು ಭಾರೀ ಕುಸಿತ ದಾಖಲಿಸಿದವು ಜಾಗತಿಕ ಮಾರುಕಟ್ಟೆಯಲ್ಲೇ ದುರ್ಬಲತೆ ಕಂಡುಬಂತು. ಈ ಹಿನ್ನೆಲೆಯಲ್ಲಿ ನಿಫ್ಟಿ ಸೂಚ್ಯಂಕವು 15,800 ಪಾಯಿಂಟ್ಸ್​ಗಿಂತ ಕೆಳಗೆ ಬಂತು. ದಿನಾಂತ್ಯಕ್ಕೆ ಸೆನ್ಸೆಕ್ಸ್ 1456.74 ಪಾಯಿಂಟ್ಸ್ ಅಥವಾ ಶೇ 2.68ರಷ್ಟು ನೆಲ ಕಚ್ಚಿ, 52,846.70 ಪಾಯಿಂಟ್ಸ್​ಗೆ ದಿನದ ವಹಿವಾಟನ್ನು ಮುಗಿಸಿತು. ನಿಫ್ಟಿ 427.40 ಪಾಯಿಂಟ್ಸ್ ಅಥವಾ ಶೇ 2.64ರಷ್ಟು ಇಳಿಕೆ ಕಂಡು, 15,774.40 ಪಾಯಿಂಟ್ಸ್​ನಲ್ಲಿ ವ್ಯವಹಾರ ಕೊನೆಗೊಳಿಸಿತು. ಇಂದಿನ ವಹಿವಾಟಿನಲ್ಲಿ 2759 ಕಂಪೆನಿಯ ಷೇರು ಇಳಿಕೆ ದಾಖಲಿಸಿದರೆ, 117 ಕಂಪೆನಿಯ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ ಮತ್ತು 650 ಕಂಪೆನಿಯ ಷೇರುಗಳು ಏರಿಕೆ ಕಂಡವು.

ಇಂದಿನ ವ್ಯವಹಾರದಲ್ಲಿ ಎಲ್ಲ ವಲಯಗಳು ಕುಸಿತ ದಾಖಲಿಸಿದವು. ಬಿಎಸ್​ಇ ಮಿಡ್​ಕ್ಯಾಪ್ ಶೇ 2.7ರಷ್ಟು ಮತ್ತು ಸ್ಮಾಲ್​ಕ್ಯಾಪ್ ಶೇ 3ರಷ್ಟು ಇಳಿಕೆ ಕಂಡವು. ಬ್ಯಾಂಕ್, ಕ್ಯಾಪಿಟಲ್ ಗೂಡ್ಸ್, ವಾಹನ, ಮಾಹಿತಿ ತಂತ್ರಜ್ಞಾನ, ಲೋಹ, ರಿಯಾಲ್ಟಿ, ಪಿಎಸ್​ಯು ಬ್ಯಾಂಕ್, ತೈಲ ಮತ್ತು ಅನಿಲ ಸೂಚ್ಯಂಕಗಳು ತಲಾ ಶೇ 2ರಿಂದ 4ರಷ್ಟು ಕುಸಿದವು.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ನೆಸ್ಟ್ಲೆ ಶೇ 0.47

ಬಜಾಜ್ ಆಟೋ ಶೇ 0.01

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ಬಜಾಜ್​ ಫಿನ್​ಸರ್ವ್ ಶೇ -7.08

ಬಜಾಜ್ ಫೈನಾನ್ಸ್ ಶೇ -5.46

ಇಂಡಸ್​ಇಂಡ್ ಬ್ಯಾಂಕ್ ಶೇ -5.23

ಟೆಕ್​ ಮಹೀಂದ್ರಾ ಶೇ -5.22

ಹಿಂಡಾಲ್ಕೋ ಶೇ -5.00

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Warren Buffett: ಷೇರುಗಳಲ್ಲಿ ಹೂಡಿಕೆ ಮಾಡುವವರು ಹೂಡಿಕೆದಾರರ ಜಗದ್ಗುರು ವಾರೆನ್ ಬಫೆಟ್ ಮಾತುಗಳನ್ನೊಮ್ಮೆ ಕೇಳಿಸಿಕೊಳ್ಳಿ

ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಪುಣೆಯಲ್ಲಿ 2 ಟ್ರಕ್‌ಗಳ ನಡುವೆ ಸಿಕ್ಕಿ ಸುಟ್ಟು ಕರಕಲಾದ ಕಾರು; 8 ಜನ ಸಾವು
ಪುಣೆಯಲ್ಲಿ 2 ಟ್ರಕ್‌ಗಳ ನಡುವೆ ಸಿಕ್ಕಿ ಸುಟ್ಟು ಕರಕಲಾದ ಕಾರು; 8 ಜನ ಸಾವು
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; MLC ಸುನಿಲ್ ಸಿಂಗ್
ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; MLC ಸುನಿಲ್ ಸಿಂಗ್