AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಸೆನ್ಸೆಕ್ಸ್ 1457 ಪಾಯಿಂಟ್ಸ್, ನಿಫ್ಟಿ 427 ಪಾಯಿಂಟ್ಸ್ ಕುಸಿತ; ಷೇರು ಹೂಡಿಕೆದಾರರಿಗೆ ಭಾರೀ ನಷ್ಟ

ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಜೂನ್ 13ನೇ ತಾರೀಕಿನ ಸೋಮವಾರದಂದು ಭಾರೀ ಪ್ರಮಾಣದಲ್ಲಿ ನೆಲ ಕಚ್ಚಿವೆ. ಆ ಬಗ್ಗೆ ಮಾಹಿತಿ ಇಲ್ಲಿದೆ.

Closing Bell: ಸೆನ್ಸೆಕ್ಸ್ 1457 ಪಾಯಿಂಟ್ಸ್, ನಿಫ್ಟಿ 427 ಪಾಯಿಂಟ್ಸ್ ಕುಸಿತ; ಷೇರು ಹೂಡಿಕೆದಾರರಿಗೆ ಭಾರೀ ನಷ್ಟ
TV9 Web
| Edited By: |

Updated on: Jun 13, 2022 | 5:59 PM

Share

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಜೂನ್ 13ನೇ ತಾರೀಕಿನ ಸೋಮವಾರದಂದು ಭಾರೀ ಕುಸಿತ ದಾಖಲಿಸಿದವು ಜಾಗತಿಕ ಮಾರುಕಟ್ಟೆಯಲ್ಲೇ ದುರ್ಬಲತೆ ಕಂಡುಬಂತು. ಈ ಹಿನ್ನೆಲೆಯಲ್ಲಿ ನಿಫ್ಟಿ ಸೂಚ್ಯಂಕವು 15,800 ಪಾಯಿಂಟ್ಸ್​ಗಿಂತ ಕೆಳಗೆ ಬಂತು. ದಿನಾಂತ್ಯಕ್ಕೆ ಸೆನ್ಸೆಕ್ಸ್ 1456.74 ಪಾಯಿಂಟ್ಸ್ ಅಥವಾ ಶೇ 2.68ರಷ್ಟು ನೆಲ ಕಚ್ಚಿ, 52,846.70 ಪಾಯಿಂಟ್ಸ್​ಗೆ ದಿನದ ವಹಿವಾಟನ್ನು ಮುಗಿಸಿತು. ನಿಫ್ಟಿ 427.40 ಪಾಯಿಂಟ್ಸ್ ಅಥವಾ ಶೇ 2.64ರಷ್ಟು ಇಳಿಕೆ ಕಂಡು, 15,774.40 ಪಾಯಿಂಟ್ಸ್​ನಲ್ಲಿ ವ್ಯವಹಾರ ಕೊನೆಗೊಳಿಸಿತು. ಇಂದಿನ ವಹಿವಾಟಿನಲ್ಲಿ 2759 ಕಂಪೆನಿಯ ಷೇರು ಇಳಿಕೆ ದಾಖಲಿಸಿದರೆ, 117 ಕಂಪೆನಿಯ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ ಮತ್ತು 650 ಕಂಪೆನಿಯ ಷೇರುಗಳು ಏರಿಕೆ ಕಂಡವು.

ಇಂದಿನ ವ್ಯವಹಾರದಲ್ಲಿ ಎಲ್ಲ ವಲಯಗಳು ಕುಸಿತ ದಾಖಲಿಸಿದವು. ಬಿಎಸ್​ಇ ಮಿಡ್​ಕ್ಯಾಪ್ ಶೇ 2.7ರಷ್ಟು ಮತ್ತು ಸ್ಮಾಲ್​ಕ್ಯಾಪ್ ಶೇ 3ರಷ್ಟು ಇಳಿಕೆ ಕಂಡವು. ಬ್ಯಾಂಕ್, ಕ್ಯಾಪಿಟಲ್ ಗೂಡ್ಸ್, ವಾಹನ, ಮಾಹಿತಿ ತಂತ್ರಜ್ಞಾನ, ಲೋಹ, ರಿಯಾಲ್ಟಿ, ಪಿಎಸ್​ಯು ಬ್ಯಾಂಕ್, ತೈಲ ಮತ್ತು ಅನಿಲ ಸೂಚ್ಯಂಕಗಳು ತಲಾ ಶೇ 2ರಿಂದ 4ರಷ್ಟು ಕುಸಿದವು.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ನೆಸ್ಟ್ಲೆ ಶೇ 0.47

ಬಜಾಜ್ ಆಟೋ ಶೇ 0.01

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ಬಜಾಜ್​ ಫಿನ್​ಸರ್ವ್ ಶೇ -7.08

ಬಜಾಜ್ ಫೈನಾನ್ಸ್ ಶೇ -5.46

ಇಂಡಸ್​ಇಂಡ್ ಬ್ಯಾಂಕ್ ಶೇ -5.23

ಟೆಕ್​ ಮಹೀಂದ್ರಾ ಶೇ -5.22

ಹಿಂಡಾಲ್ಕೋ ಶೇ -5.00

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Warren Buffett: ಷೇರುಗಳಲ್ಲಿ ಹೂಡಿಕೆ ಮಾಡುವವರು ಹೂಡಿಕೆದಾರರ ಜಗದ್ಗುರು ವಾರೆನ್ ಬಫೆಟ್ ಮಾತುಗಳನ್ನೊಮ್ಮೆ ಕೇಳಿಸಿಕೊಳ್ಳಿ

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ