AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಸೆನ್ಸೆಕ್ಸ್ 462, ನಿಫ್ಟಿ 143 ಪಾಯಿಂಟ್ಸ್ ಏರಿಕೆ; ಮಹೀಂದ್ರಾ ಅಂಡ್ ಮಹೀಂದ್ರಾ 44 ರೂ. ಗಳಿಕೆ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಹಾಗೂ ನಿಫ್ಟಿ ಜೂನ್ 24ನೇ ತಾರೀಕಿನ ಶುಕ್ರವಾರದಂದು ಏರಿಕೆ ದಾಖಲಿಸಿವೆ. ಪ್ರಮುಖವಾಗಿ ಏರಿಕೆ, ಇಳಿಕೆ ದಾಖಲಿಸಿದ ಷೇರುಗಳ ವಿವರ ಇಲ್ಲಿದೆ.

Closing Bell: ಸೆನ್ಸೆಕ್ಸ್ 462, ನಿಫ್ಟಿ 143 ಪಾಯಿಂಟ್ಸ್ ಏರಿಕೆ; ಮಹೀಂದ್ರಾ ಅಂಡ್ ಮಹೀಂದ್ರಾ 44 ರೂ. ಗಳಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 24, 2022 | 4:40 PM

Share

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಜೂನ್ 24ನೇ ತಾರೀಕಿನ ಶುಕ್ರವಾರದಂದು ಏರಿಕೆಯಲ್ಲಿ ಕೊನೆಗೊಂಡಿವೆ. ನಿಫ್ಟಿ 15,700 ಪಾಯಿಂಟ್ಸ್​ ಬಳಿ ಇದೆ. ದಿನಾಂತ್ಯಕ್ಕೆ ಸೆನ್ಸೆಕ್ಸ್ 462.26 ಪಾಯಿಂಟ್ಸ್ ಅಥವಾ ಶೇ 0.88ರಷ್ಟು ಏರಿಕೆಯಾಗಿ 52,727.98 ಪಾಯಿಂಟ್ಸ್​ನಲ್ಲಿ ವ್ಯವಹಾರ ಮುಗಿಸಿದರೆ, ನಿಫ್ಟಿ 142.60 ಪಾಯಿಂಟ್ಸ್ ಅಥವಾ ಶೇ 0.92ರಷ್ಟು ಮೇಲೇರಿ 15,699.30 ಪಾಯಿಂಟ್ಸ್​ನಲ್ಲಿ ವಹಿವಾಟು ಚುಕ್ತಾ ಮಾಡಿತು. ಇಂದಿನ ವಹಿವಾಟಿನಲ್ಲಿ 2332 ಕಂಪೆನಿಯ ಷೇರುಗಳು ಗಳಿಕೆಯನ್ನು ಕಂಡರೆ, 899 ಕಂಪೆನಿ ಷೇರುಗಳು ಇಳಿಕೆ ಕಂಡವು. ಇನ್ನು 133 ಕಂಪೆನಿಯ ಷೇರುಗಳಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ.

ವಲಯವಾರು ಗಮನಿಸುವುದಾದರೆ ವಾಹನ, ತೈಲ ಮತ್ತು ಅನಿಲ, ವಿದ್ಯುತ್, ಬ್ಯಾಂಕ್, ಲೋಹ ಮತ್ತು ಎಫ್​ಎಂಸಿಜಿ ಸೂಚ್ಯಂಕಗಳು ತಲಾ ಶೇ 1ರಷ್ಟು ಹೆಚ್ಚಳ ಕಂಡವು. ಆದರೆ ಮಾಹಿತಿ ತಂತ್ರಜ್ಞಾನ ವಲಯದ ಕೆಲವು ಷೇರುಗಳಲ್ಲಿ ಕುಸಿತ ಕಂಡುಬಂತು. ಬಿಎಸ್​ಇ ಮಿಡ್​ಕ್ಯಾಪ್ ಮತ್ತು ಸ್ಮಾಲ್​ಕ್ಯಾಪ್ ಸೂಚ್ಯಂಕಗಳು ತಲಾ ಶೇ 1ರಷ್ಟು ಗಳಿಕೆಯನ್ನು ಕಂಡವು.

ನಿಫ್ಟಿಯಲ್ಲಿ ಏರಿಕೆ ಕಂಡ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ

ಮಹೀಂದ್ರಾ ಅಂಡ್ ಮಹೀಂದ್ರಾ ಶೇ 4.32

ಹೀರೋ ಮೋಟೋಕಾರ್ಪ್ ಶೇ 3.21

ಇಂಡಸ್​ಇಂಡ್​ ಬ್ಯಾಂಕ್ ಶೇ 2.75

ಬಜಾಜ್ ಫೈನಾನ್ಸ್ ಶೇ 2.56

ಹಿಂದೂಸ್ತಾನ್ ಯುನಿಲಿವರ್ ಶೇ 2.28

ನಿಫ್ಟಿಯಲ್ಲಿ ಇಳಿಕೆ ಕಂಡ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ

ಟೆಕ್ ಮಹೀಂದ್ರಾ ಶೇ -1.00

ಇನ್ಫೋಸಿಸ್ ಶೇ -0.78

ಟಿಸಿಎಸ್ ಶೇ -0.47

ಎಚ್​ಸಿಎಲ್​ ಟೆಕ್ ಶೇ -0.47

ಕೋಲ್ ಇಂಡಿಯಾ ಶೇ -0.47

ಇದನ್ನೂ ಓದಿ: Stock Market Investment Tips: ಷೇರು ಮಾರುಕಟ್ಟೆ ಹೂಡಿಕೆಯ ಆರಂಭ ಹಂತದಲ್ಲಿ ಇರುವವರಿಗೆ 5 ಟಿಪ್ಸ್

Published On - 4:40 pm, Fri, 24 June 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ