AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock Market News: ಸೆನ್ಸೆಕ್ಸ್ 777 ಪಾಯಿಂಟ್ಸ್, ನಿಫ್ಟಿ 247 ಪಾಯಿಂಟ್ಸ್ ಏರಿಕೆ ; ಅದಾನಿ ಪೋರ್ಟ್ಸ್ ಷೇರು 50 ರೂ. ಗಳಿಕೆ

ಭಾರತದ ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಎರಡು ದಿನಗಳ ಇಳಿಕೆ ಹಾದಿಯಿಂದ ಮರಳಿ ಏರಿಕೆಯತ್ತ ಹೊರಳಿದೆ. ಪ್ರಮುಖವಾಗಿ ಏರಿಕೆ, ಇಳಿಕೆ ಕಂಡ ಷೇರುಗಳ ವಿವರ ಇಲ್ಲಿದೆ.

Stock Market News: ಸೆನ್ಸೆಕ್ಸ್ 777 ಪಾಯಿಂಟ್ಸ್, ನಿಫ್ಟಿ 247 ಪಾಯಿಂಟ್ಸ್ ಏರಿಕೆ ; ಅದಾನಿ ಪೋರ್ಟ್ಸ್ ಷೇರು 50 ರೂ. ಗಳಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 26, 2022 | 4:55 PM

Share

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಸತತ ಎರಡು ದಿನಗಳ ಇಳಿಕೆಯ ಸರಪಳಿಯನ್ನು ಏಪ್ರಿಲ್ 26ನೇ ತಾರೀಕಿನ ಮಂಗಳವಾರದಂದು ಕಳಚಿಕೊಂಡಿದೆ. ನಿಫ್ಟಿ ಮತ್ತೆ 17,200 ಪಾಯಿಂಟ್ಸ್​ಗಳಿಗೆ ಮರಳಿದೆ. ಮಂಗಳವಾರದ ದಿನಾಂತ್ಯಕ್ಕೆ ಸೆನ್ಸೆಕ್ಸ್ 776.72 ಪಾಯಿಂಟ್ಸ್ ಅಥವಾ ಶೇ 1.37ರಷ್ಟು ಮೇಲೇರಿ 57,356.61 ಪಾಯಿಂಟ್ಸ್ ಮತ್ತು ನಿಫ್ಟಿ 246.80 ಪಾಯಿಂಟ್ಸ್ ಅಥವಾ ಶೇ 1.46ರಷ್ಟು ಹೆಚ್ಚಳವಾಗಿ, 17,200.80 ಪಾಯಿಂಟ್ಸ್​ನೊಂದಿಗೆ ವ್ಯವಹಾರ ಮುಕ್ತಾಯ ಆಗಿದೆ. ಇಂದಿನ ವಹಿವಾಟಿನಲ್ಲಿ 1886 ಕಂಪೆನಿಯ ಷೇರುಗಳಲ್ಲಿ ಏರಿಕೆ ಕಂಡುಬಂದರೆ, 1422 ಕಂಪೆನಿಯ ಷೇರುಗಳಲ್ಲಿ ಇಳಿಕೆ ಆಯಿತು. 108 ಕಂಪೆನಿಯ ಷೇರುಗಳ ದರದಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ.

ಎಲ್ಲ ವಲಯದ ಸೂಚ್ಯಂಕಗಳು ಏರಿಕೆಯಲ್ಲೇ ಮುಕ್ತಾಯ ಆಗಿವೆ. ವಾಹನ, ರಿಯಾಲ್ಟಿ ಮತ್ತು ವಿದ್ಯುತ್ ಸೂಚ್ಯಂಕಗಳು ಶೇ 2ರಿಂದ 3ರಷ್ಟು ಮೇಲೇರಿದವು. ಬಿಎಸ್​ಇ ಮಿಡ್​ಕ್ಯಾಪ್ ಮತ್ತು ಸ್ಮಾಲ್​ಕ್ಯಾಪ್ ಸೂಚ್ಯಂಕಗಳು ಶೇ 0.7ರಿಂದ 1.6ರ ತನಕ ಗಳಿಕೆ ಕಂಡವು.

ನಿಫ್ಟಿಯಲ್ಲಿ ಏರಿಕೆ ಕಂಡ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಅದಾನಿ ಪೋರ್ಟ್ಸ್ ಶೇ 5.81 ಬಜಾಜ್ ಆಟೋ ಶೇ 5.68 ಹೀರೋ ಮೋಟೋಕಾರ್ಪ್ ಶೇ 5.18 ಮಹೀಂದ್ರಾ ಅಂಡ್ ಮಹೀಂದ್ರಾ ಶೇ 4 ಪವರ್​ ಗ್ರಿಡ್ ಕಾರ್ಪೊರೇಷನ್ ಶೇ 3.93

ನಿಫ್ಟಿಯಲ್ಲಿ ಇಳಿಕೆ ಕಂಡ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಒಎನ್​ಜಿಸಿ ಶೇ -1.59 ಅಪೋಲೊ ಆಸ್ಪತ್ರೆ ಶೇ -1.11 ಆಕ್ಸಿಸ್ ಬ್ಯಾಂಕ್ ಶೇ -0.73 ಹಿಂಡಾಲ್ಕೋ ಶೇ -0.41 ಏಷ್ಯನ್ ಪೇಂಟ್ಸ್ ಶೇ -0.16

ಇದನ್ನೂ ಓದಿ: Stock Market Investment Tips: ಷೇರು ಮಾರುಕಟ್ಟೆ ಹೂಡಿಕೆಯ ಆರಂಭ ಹಂತದಲ್ಲಿ ಇರುವವರಿಗೆ 5 ಟಿಪ್ಸ್

Published On - 4:54 pm, Tue, 26 April 22

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್