AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock Market News: ಸೆನ್ಸೆಕ್ಸ್ 777 ಪಾಯಿಂಟ್ಸ್, ನಿಫ್ಟಿ 247 ಪಾಯಿಂಟ್ಸ್ ಏರಿಕೆ ; ಅದಾನಿ ಪೋರ್ಟ್ಸ್ ಷೇರು 50 ರೂ. ಗಳಿಕೆ

ಭಾರತದ ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಎರಡು ದಿನಗಳ ಇಳಿಕೆ ಹಾದಿಯಿಂದ ಮರಳಿ ಏರಿಕೆಯತ್ತ ಹೊರಳಿದೆ. ಪ್ರಮುಖವಾಗಿ ಏರಿಕೆ, ಇಳಿಕೆ ಕಂಡ ಷೇರುಗಳ ವಿವರ ಇಲ್ಲಿದೆ.

Stock Market News: ಸೆನ್ಸೆಕ್ಸ್ 777 ಪಾಯಿಂಟ್ಸ್, ನಿಫ್ಟಿ 247 ಪಾಯಿಂಟ್ಸ್ ಏರಿಕೆ ; ಅದಾನಿ ಪೋರ್ಟ್ಸ್ ಷೇರು 50 ರೂ. ಗಳಿಕೆ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on:Apr 26, 2022 | 4:55 PM

Share

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಸತತ ಎರಡು ದಿನಗಳ ಇಳಿಕೆಯ ಸರಪಳಿಯನ್ನು ಏಪ್ರಿಲ್ 26ನೇ ತಾರೀಕಿನ ಮಂಗಳವಾರದಂದು ಕಳಚಿಕೊಂಡಿದೆ. ನಿಫ್ಟಿ ಮತ್ತೆ 17,200 ಪಾಯಿಂಟ್ಸ್​ಗಳಿಗೆ ಮರಳಿದೆ. ಮಂಗಳವಾರದ ದಿನಾಂತ್ಯಕ್ಕೆ ಸೆನ್ಸೆಕ್ಸ್ 776.72 ಪಾಯಿಂಟ್ಸ್ ಅಥವಾ ಶೇ 1.37ರಷ್ಟು ಮೇಲೇರಿ 57,356.61 ಪಾಯಿಂಟ್ಸ್ ಮತ್ತು ನಿಫ್ಟಿ 246.80 ಪಾಯಿಂಟ್ಸ್ ಅಥವಾ ಶೇ 1.46ರಷ್ಟು ಹೆಚ್ಚಳವಾಗಿ, 17,200.80 ಪಾಯಿಂಟ್ಸ್​ನೊಂದಿಗೆ ವ್ಯವಹಾರ ಮುಕ್ತಾಯ ಆಗಿದೆ. ಇಂದಿನ ವಹಿವಾಟಿನಲ್ಲಿ 1886 ಕಂಪೆನಿಯ ಷೇರುಗಳಲ್ಲಿ ಏರಿಕೆ ಕಂಡುಬಂದರೆ, 1422 ಕಂಪೆನಿಯ ಷೇರುಗಳಲ್ಲಿ ಇಳಿಕೆ ಆಯಿತು. 108 ಕಂಪೆನಿಯ ಷೇರುಗಳ ದರದಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ.

ಎಲ್ಲ ವಲಯದ ಸೂಚ್ಯಂಕಗಳು ಏರಿಕೆಯಲ್ಲೇ ಮುಕ್ತಾಯ ಆಗಿವೆ. ವಾಹನ, ರಿಯಾಲ್ಟಿ ಮತ್ತು ವಿದ್ಯುತ್ ಸೂಚ್ಯಂಕಗಳು ಶೇ 2ರಿಂದ 3ರಷ್ಟು ಮೇಲೇರಿದವು. ಬಿಎಸ್​ಇ ಮಿಡ್​ಕ್ಯಾಪ್ ಮತ್ತು ಸ್ಮಾಲ್​ಕ್ಯಾಪ್ ಸೂಚ್ಯಂಕಗಳು ಶೇ 0.7ರಿಂದ 1.6ರ ತನಕ ಗಳಿಕೆ ಕಂಡವು.

ನಿಫ್ಟಿಯಲ್ಲಿ ಏರಿಕೆ ಕಂಡ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಅದಾನಿ ಪೋರ್ಟ್ಸ್ ಶೇ 5.81 ಬಜಾಜ್ ಆಟೋ ಶೇ 5.68 ಹೀರೋ ಮೋಟೋಕಾರ್ಪ್ ಶೇ 5.18 ಮಹೀಂದ್ರಾ ಅಂಡ್ ಮಹೀಂದ್ರಾ ಶೇ 4 ಪವರ್​ ಗ್ರಿಡ್ ಕಾರ್ಪೊರೇಷನ್ ಶೇ 3.93

ನಿಫ್ಟಿಯಲ್ಲಿ ಇಳಿಕೆ ಕಂಡ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಒಎನ್​ಜಿಸಿ ಶೇ -1.59 ಅಪೋಲೊ ಆಸ್ಪತ್ರೆ ಶೇ -1.11 ಆಕ್ಸಿಸ್ ಬ್ಯಾಂಕ್ ಶೇ -0.73 ಹಿಂಡಾಲ್ಕೋ ಶೇ -0.41 ಏಷ್ಯನ್ ಪೇಂಟ್ಸ್ ಶೇ -0.16

ಇದನ್ನೂ ಓದಿ: Stock Market Investment Tips: ಷೇರು ಮಾರುಕಟ್ಟೆ ಹೂಡಿಕೆಯ ಆರಂಭ ಹಂತದಲ್ಲಿ ಇರುವವರಿಗೆ 5 ಟಿಪ್ಸ್

Published On - 4:54 pm, Tue, 26 April 22

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ