AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sensex Stocks: ಷೇರು ಮಾರುಕಟ್ಟೆ ಸೂಚ್ಯಂಕಗಳಲ್ಲಿ ಭರ್ಜರಿ ಏರಿಕೆ; ಐಷರ್ ಮೋಟಾರ್ಸ್ ಷೇರು 115 ರೂಪಾಯಿ ಗಳಿಕೆ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಏಪ್ರಿಲ್ 21ನೇ ತಾರೀಕಿನ ಗುರುವಾರದಂದು ಭರ್ಜರಿ ಏರಿಕೆ ಕಂಡಿವೆ. ಪ್ರಮುಖವಾಗಿ ಏರಿಕೆ, ಇಳಿಕೆ ದಾಖಲಿಸಿದ ಷೇರುಗಳ ವಿವರ ಇಲ್ಲಿದೆ.

Sensex Stocks: ಷೇರು ಮಾರುಕಟ್ಟೆ ಸೂಚ್ಯಂಕಗಳಲ್ಲಿ ಭರ್ಜರಿ ಏರಿಕೆ; ಐಷರ್ ಮೋಟಾರ್ಸ್ ಷೇರು 115 ರೂಪಾಯಿ ಗಳಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 21, 2022 | 5:02 PM

Share

ಭಾರತೀಯ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಏಪ್ರಿಲ್ 21ನೇ ತಾರೀಕಿನ ಗುರುವಾರದಂದು ಗಳಿಕೆ ಕಂಡಿವೆ. ಎಲ್ಲ ವಲಯಗಳಲ್ಲೂ ಖರೀದಿ ಕಂಡುಬಂದಿದೆ. ಗುರುವಾರದ 874.18 ಪಾಯಿಂಟ್ಸ್ ಅಥವಾ ಶೇ 1.53ರಷ್ಟು ಮೇಲೇರಿ 57,911.68 ಪಾಯಿಂಟ್ಸ್​ನಲ್ಲಿ ದಿನಾಂತ್ಯಕ್ಕೆ ವಹಿವಾಟು ಮುಗಿಸಿತು. ಇನ್ನು ನಿಫ್ಟಿ-50 ಸೂಚ್ಯಂಕವು 256.10 ಪಾಯಿಂಟ್ಸ್ ಅಥವಾ ಶೇ 1.49ರಷ್ಟು ಗಳಿಕೆ ಕಂಡು, 17,392.60 ಪಾಯಿಂಟ್ಸ್​ನಲ್ಲಿ ವ್ಯವಹಾರ ಮುಗಿಸಿತು. ಇಂದಿನ ವಹಿವಾಟಿನಲ್ಲಿ 2252 ಕಂಪೆನಿಯ ಷೇರುಗಳು ಏರಿಕೆಯನ್ನು ದಾಖಲಿಸಿದರೆ, 1089 ಕಂಪೆನಿಯ ಷೇರುಗಳು ಕುಸಿತ ಕಂಡವು ಮತ್ತು 96 ಕಂಪೆನಿಯ ಷೇರುಗಳ ದರದಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ.

ಎಲ್ಲ ವಲಯದ ಷೇರುಗಳು ಗಳಿಕೆಯಲ್ಲೇ ಮುಕ್ತಾಯ ಕಂಡವು. ಬ್ಯಾಂಕ್, ಫಾರ್ಮಾ, ವಾಹನ, ಮಾಹಿತಿ ತಂತ್ರಜ್ಞಾನ, ವಿದ್ಯುತ್, ರಿಯಾಲ್ಟಿ ಮತ್ತು ಕ್ಯಾಪಿಟಲ್ ಗೂಡ್ಸ್ ಸೂಚ್ಯಂಕಗಳು ಶೇ 1ರಿಂದ 2ರಷ್ಟು ಹೆಚ್ಚಳ ದಾಖಲಿಸಿದವು. ಬಿಎಸ್​ಇ ಮಿಡ್​ಕ್ಯಾಪ್ ಮತ್ತು ಸ್ಮಾಲ್ ಕ್ಯಾಪ್ ಸೂಚ್ಯಂಕಗಳು ತಲಾ ಶೇ 1ರಷ್ಟು ಹೆಚ್ಚಳ ಕಂಡವು.

ನಿಫ್ಟಿಯಲ್ಲಿ ಏರಿಕೆ ಕಂಡ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಐಷರ್ ಮೋಟಾರ್ಸ್ ಶೇ 4.52 ಕೋಲ್ ಇಂಡಿಯಾ ಶೇ 3.92 ಮಹೀಂದ್ರಾ ಅಂಡ್ ಮಹೀಂದ್ರಾ ಶೇ 3.38 ಮಾರುತಿ ಸುಜುಕಿ ಶೇ 2.77 ಅದಾನಿ ಪೋರ್ಟ್ಸ್ ಶೇ 2.76

ನಿಫ್ಟಿಯಲ್ಲಿ ಇಳಿಕೆ ಕಂಡ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಸಿಪ್ಲಾ ಶೇ -1.33 ಟಾಟಾ ಸ್ಟೀಲ್ -0.92 ಹಿಂಡಾಲ್ಕೋ ಶೇ -0.87 ಒಎನ್​ಜಿಸಿ ಶೇ -0.77 ಜೆಎಸ್​ಡಬ್ಲ್ಯು ಸ್ಟೀಲ್ ಶೇ -0.63

ಇದನ್ನೂ ಓದಿ: Stock Market: ಷೇರು ಮಾರುಕಟ್ಟೆ ಬೆಳವಣಿಗೆಯಿಂದ ಜನ ಸಾಮಾನ್ಯರಿಗೇನು ಲಾಭ?

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು