AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sensex Stocks: ಷೇರು ಮಾರುಕಟ್ಟೆ ಸೂಚ್ಯಂಕಗಳಲ್ಲಿ ಭರ್ಜರಿ ಏರಿಕೆ; ಐಷರ್ ಮೋಟಾರ್ಸ್ ಷೇರು 115 ರೂಪಾಯಿ ಗಳಿಕೆ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಏಪ್ರಿಲ್ 21ನೇ ತಾರೀಕಿನ ಗುರುವಾರದಂದು ಭರ್ಜರಿ ಏರಿಕೆ ಕಂಡಿವೆ. ಪ್ರಮುಖವಾಗಿ ಏರಿಕೆ, ಇಳಿಕೆ ದಾಖಲಿಸಿದ ಷೇರುಗಳ ವಿವರ ಇಲ್ಲಿದೆ.

Sensex Stocks: ಷೇರು ಮಾರುಕಟ್ಟೆ ಸೂಚ್ಯಂಕಗಳಲ್ಲಿ ಭರ್ಜರಿ ಏರಿಕೆ; ಐಷರ್ ಮೋಟಾರ್ಸ್ ಷೇರು 115 ರೂಪಾಯಿ ಗಳಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 21, 2022 | 5:02 PM

Share

ಭಾರತೀಯ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಏಪ್ರಿಲ್ 21ನೇ ತಾರೀಕಿನ ಗುರುವಾರದಂದು ಗಳಿಕೆ ಕಂಡಿವೆ. ಎಲ್ಲ ವಲಯಗಳಲ್ಲೂ ಖರೀದಿ ಕಂಡುಬಂದಿದೆ. ಗುರುವಾರದ 874.18 ಪಾಯಿಂಟ್ಸ್ ಅಥವಾ ಶೇ 1.53ರಷ್ಟು ಮೇಲೇರಿ 57,911.68 ಪಾಯಿಂಟ್ಸ್​ನಲ್ಲಿ ದಿನಾಂತ್ಯಕ್ಕೆ ವಹಿವಾಟು ಮುಗಿಸಿತು. ಇನ್ನು ನಿಫ್ಟಿ-50 ಸೂಚ್ಯಂಕವು 256.10 ಪಾಯಿಂಟ್ಸ್ ಅಥವಾ ಶೇ 1.49ರಷ್ಟು ಗಳಿಕೆ ಕಂಡು, 17,392.60 ಪಾಯಿಂಟ್ಸ್​ನಲ್ಲಿ ವ್ಯವಹಾರ ಮುಗಿಸಿತು. ಇಂದಿನ ವಹಿವಾಟಿನಲ್ಲಿ 2252 ಕಂಪೆನಿಯ ಷೇರುಗಳು ಏರಿಕೆಯನ್ನು ದಾಖಲಿಸಿದರೆ, 1089 ಕಂಪೆನಿಯ ಷೇರುಗಳು ಕುಸಿತ ಕಂಡವು ಮತ್ತು 96 ಕಂಪೆನಿಯ ಷೇರುಗಳ ದರದಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ.

ಎಲ್ಲ ವಲಯದ ಷೇರುಗಳು ಗಳಿಕೆಯಲ್ಲೇ ಮುಕ್ತಾಯ ಕಂಡವು. ಬ್ಯಾಂಕ್, ಫಾರ್ಮಾ, ವಾಹನ, ಮಾಹಿತಿ ತಂತ್ರಜ್ಞಾನ, ವಿದ್ಯುತ್, ರಿಯಾಲ್ಟಿ ಮತ್ತು ಕ್ಯಾಪಿಟಲ್ ಗೂಡ್ಸ್ ಸೂಚ್ಯಂಕಗಳು ಶೇ 1ರಿಂದ 2ರಷ್ಟು ಹೆಚ್ಚಳ ದಾಖಲಿಸಿದವು. ಬಿಎಸ್​ಇ ಮಿಡ್​ಕ್ಯಾಪ್ ಮತ್ತು ಸ್ಮಾಲ್ ಕ್ಯಾಪ್ ಸೂಚ್ಯಂಕಗಳು ತಲಾ ಶೇ 1ರಷ್ಟು ಹೆಚ್ಚಳ ಕಂಡವು.

ನಿಫ್ಟಿಯಲ್ಲಿ ಏರಿಕೆ ಕಂಡ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಐಷರ್ ಮೋಟಾರ್ಸ್ ಶೇ 4.52 ಕೋಲ್ ಇಂಡಿಯಾ ಶೇ 3.92 ಮಹೀಂದ್ರಾ ಅಂಡ್ ಮಹೀಂದ್ರಾ ಶೇ 3.38 ಮಾರುತಿ ಸುಜುಕಿ ಶೇ 2.77 ಅದಾನಿ ಪೋರ್ಟ್ಸ್ ಶೇ 2.76

ನಿಫ್ಟಿಯಲ್ಲಿ ಇಳಿಕೆ ಕಂಡ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಸಿಪ್ಲಾ ಶೇ -1.33 ಟಾಟಾ ಸ್ಟೀಲ್ -0.92 ಹಿಂಡಾಲ್ಕೋ ಶೇ -0.87 ಒಎನ್​ಜಿಸಿ ಶೇ -0.77 ಜೆಎಸ್​ಡಬ್ಲ್ಯು ಸ್ಟೀಲ್ ಶೇ -0.63

ಇದನ್ನೂ ಓದಿ: Stock Market: ಷೇರು ಮಾರುಕಟ್ಟೆ ಬೆಳವಣಿಗೆಯಿಂದ ಜನ ಸಾಮಾನ್ಯರಿಗೇನು ಲಾಭ?

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?