AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಭರ್ಜರಿ ಏರಿಕೆ; ಟೈಟನ್ ಕಂಪೆನಿ ಗಳಿಕೆ

ಭಾರತೀಯ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಜೂನ್ 21ನೇ ತಾರೀಕಿನ ಮಂಗಳವಾರದಂದು ಭಾರೀ ಏರಿಕೆ ದಾಖಲಿಸಿವೆ.

Closing Bell: ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಭರ್ಜರಿ ಏರಿಕೆ; ಟೈಟನ್ ಕಂಪೆನಿ ಗಳಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 21, 2022 | 5:30 PM

Share

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಜೂನ್ 21ನೇ ತಾರೀಕಿನ ಮಂಗಳವಾರದಂದು ಭಾರೀ ಏರಿಕೆ ದಾಖಲಿಸಿವೆ. ದಿನಾಂತ್ಯಕ್ಕೆ ಸೆನ್ಸೆಕ್ಸ್ 934.23 ಪಾಯಿಂಟ್ಸ್ ಅಥವಾ ಶೇ 1.81ರಷ್ಟು ಹೆಚ್ಚಳವಾಗಿ, 52,532.07 ಪಾಯಿಂಟ್ಸ್​ನೊಂದಿಗೆ ಮುಕ್ತಾಯ ಕಂಡಿದೆ. ಇನ್ನು ನಿಫ್ಟಿ 288.60 ಪಾಯಿಂಟ್ಸ್ ಅಥವಾ ಶೇ 1.88ರಷ್ಟು ಹೆಚ್ಚಳವಾಗಿ 15,638.80 ಪಾಯಿಂಟ್ಸ್​ನಲ್ಲಿ ವಹಿವಾಟು ಚುಕ್ತಾ ಮಾಡಿತು. ಇಂದಿನ ವಹಿವಾಟಿನಲ್ಲಿನ 2428 ಕಂಪೆನಿಯ ಷೇರುಗಳು ಏರಿಕೆಯನ್ನು ದಾಖಲಿಸಿದರೆ, 819 ಕಂಪೆನಿಯ ಷೇರುಗಳು ಇಳಿಕೆ ಕಂಡವು ಮತ್ತು 125 ಕಂಪೆನಿಯ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ.

ಎಲ್ಲ ವಲಯದ ಸೂಚ್ಯಂಕಗಳು ಗಳಿಕೆಯನ್ನು ದಾಖಲಿಸಿದವು. ಮಾಹಿತಿ ತಂತ್ರಜ್ಞಾನ, ಲೋಹ, ತೈಲ ಮತ್ತು ಅನಿಲ, ವಿದ್ಯುತ್, ರಿಯಾಲ್ಟಿ ಹಾಗೂ ಪಿಎಸ್​ಯು ಬ್ಯಾಂಕ್ ಸೂಚ್ಯಂಕಗಳು ಶೇ 3ರಿಂದ ಶೇ 6ರಷ್ಟು ಏರಿಕೆ ದಾಖಲಿಸಿದವು. ಇನ್ನು ಬಿಎಸ್​ಇ ಮಿಡ್​ಕ್ಯಾಪ್ ಶೇ 2.4ರಷ್ಟು ಮೇಲೇರಿದರೆ, ಸ್ಮಾಲ್​ಕ್ಯಾಪ್ ಶೇ 3ರಷ್ಟು ಹೆಚ್ಚಳವಾಯಿತು.

ಅಮೆರಿಕ ಡಾಲರ್​ ವಿರುದ್ಧ ರೂಪಾಯಿ ಮೌಲ್ಯ 10 ಪೈಸೆಯಷ್ಟು ಕುಸಿಯಿತು. ಸೋಮವಾರ ದಿನದ ಕೊನೆಗೆ 77.98 ಇದ್ದದ್ದು, ಇವತ್ತಿಗೆ 78.08ರಲ್ಲಿ ಮುಕ್ತಾಯ ಕಂಡಿತು.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ

ಟೈಟನ್ ಶೇ 5.93

ಹಿಂಡಾಲ್ಕೋ ಶೇ 5.52

ಜೆಎಸ್​ಡಬ್ಲ್ಯು ಸ್ಟೀಲ್ ಶೇ 4.70

ಕೋಲ್ ಇಂಡಿಯಾ ಶೇ 4.50

ಅದಾನಿ ಪೋರ್ಟ್ಸ್ ಶೇ 3.91

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ

ಅಪೋಲೋ ಹಾಸ್ಪಿಟಲ್ ಶೇ -0.09

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Stock Market Investment Tips: ಷೇರು ಮಾರುಕಟ್ಟೆ ಹೂಡಿಕೆಯ ಆರಂಭ ಹಂತದಲ್ಲಿ ಇರುವವರಿಗೆ 5 ಟಿಪ್ಸ್

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ