AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಭರ್ಜರಿ ಏರಿಕೆ; ಟೈಟನ್ ಕಂಪೆನಿ ಗಳಿಕೆ

ಭಾರತೀಯ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಜೂನ್ 21ನೇ ತಾರೀಕಿನ ಮಂಗಳವಾರದಂದು ಭಾರೀ ಏರಿಕೆ ದಾಖಲಿಸಿವೆ.

Closing Bell: ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಭರ್ಜರಿ ಏರಿಕೆ; ಟೈಟನ್ ಕಂಪೆನಿ ಗಳಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 21, 2022 | 5:30 PM

Share

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಜೂನ್ 21ನೇ ತಾರೀಕಿನ ಮಂಗಳವಾರದಂದು ಭಾರೀ ಏರಿಕೆ ದಾಖಲಿಸಿವೆ. ದಿನಾಂತ್ಯಕ್ಕೆ ಸೆನ್ಸೆಕ್ಸ್ 934.23 ಪಾಯಿಂಟ್ಸ್ ಅಥವಾ ಶೇ 1.81ರಷ್ಟು ಹೆಚ್ಚಳವಾಗಿ, 52,532.07 ಪಾಯಿಂಟ್ಸ್​ನೊಂದಿಗೆ ಮುಕ್ತಾಯ ಕಂಡಿದೆ. ಇನ್ನು ನಿಫ್ಟಿ 288.60 ಪಾಯಿಂಟ್ಸ್ ಅಥವಾ ಶೇ 1.88ರಷ್ಟು ಹೆಚ್ಚಳವಾಗಿ 15,638.80 ಪಾಯಿಂಟ್ಸ್​ನಲ್ಲಿ ವಹಿವಾಟು ಚುಕ್ತಾ ಮಾಡಿತು. ಇಂದಿನ ವಹಿವಾಟಿನಲ್ಲಿನ 2428 ಕಂಪೆನಿಯ ಷೇರುಗಳು ಏರಿಕೆಯನ್ನು ದಾಖಲಿಸಿದರೆ, 819 ಕಂಪೆನಿಯ ಷೇರುಗಳು ಇಳಿಕೆ ಕಂಡವು ಮತ್ತು 125 ಕಂಪೆನಿಯ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ.

ಎಲ್ಲ ವಲಯದ ಸೂಚ್ಯಂಕಗಳು ಗಳಿಕೆಯನ್ನು ದಾಖಲಿಸಿದವು. ಮಾಹಿತಿ ತಂತ್ರಜ್ಞಾನ, ಲೋಹ, ತೈಲ ಮತ್ತು ಅನಿಲ, ವಿದ್ಯುತ್, ರಿಯಾಲ್ಟಿ ಹಾಗೂ ಪಿಎಸ್​ಯು ಬ್ಯಾಂಕ್ ಸೂಚ್ಯಂಕಗಳು ಶೇ 3ರಿಂದ ಶೇ 6ರಷ್ಟು ಏರಿಕೆ ದಾಖಲಿಸಿದವು. ಇನ್ನು ಬಿಎಸ್​ಇ ಮಿಡ್​ಕ್ಯಾಪ್ ಶೇ 2.4ರಷ್ಟು ಮೇಲೇರಿದರೆ, ಸ್ಮಾಲ್​ಕ್ಯಾಪ್ ಶೇ 3ರಷ್ಟು ಹೆಚ್ಚಳವಾಯಿತು.

ಅಮೆರಿಕ ಡಾಲರ್​ ವಿರುದ್ಧ ರೂಪಾಯಿ ಮೌಲ್ಯ 10 ಪೈಸೆಯಷ್ಟು ಕುಸಿಯಿತು. ಸೋಮವಾರ ದಿನದ ಕೊನೆಗೆ 77.98 ಇದ್ದದ್ದು, ಇವತ್ತಿಗೆ 78.08ರಲ್ಲಿ ಮುಕ್ತಾಯ ಕಂಡಿತು.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ

ಟೈಟನ್ ಶೇ 5.93

ಹಿಂಡಾಲ್ಕೋ ಶೇ 5.52

ಜೆಎಸ್​ಡಬ್ಲ್ಯು ಸ್ಟೀಲ್ ಶೇ 4.70

ಕೋಲ್ ಇಂಡಿಯಾ ಶೇ 4.50

ಅದಾನಿ ಪೋರ್ಟ್ಸ್ ಶೇ 3.91

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ

ಅಪೋಲೋ ಹಾಸ್ಪಿಟಲ್ ಶೇ -0.09

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Stock Market Investment Tips: ಷೇರು ಮಾರುಕಟ್ಟೆ ಹೂಡಿಕೆಯ ಆರಂಭ ಹಂತದಲ್ಲಿ ಇರುವವರಿಗೆ 5 ಟಿಪ್ಸ್

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್