AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock Market News: ಸೆನ್ಸೆಕ್ಸ್ 303 ಪಾಯಿಂಟ್ಸ್, ನಿಫ್ಟಿ 88 ಪಾಯಿಂಟ್ಸ್ ಏರಿಕೆ; ಎಲ್​ ಅಂಡ್​ ಟಿ ಷೇರು 76 ರೂಪಾಯಿ ಗಳಿಕೆ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಜುಲೈ 8ನೇ ತಾರೀಕಿನ ಶುಕ್ರವಾರದಂದು ಏರಿಕೆ ಕಂಡಿವೆ. ಪ್ರಮುಖವಾಗಿ ಏರಿಕೆ, ಇಳಿಕೆ ಕಂಡ ಷೇರುಗಳ ವಿವರ ಇಲ್ಲಿದೆ.

Stock Market News: ಸೆನ್ಸೆಕ್ಸ್ 303 ಪಾಯಿಂಟ್ಸ್, ನಿಫ್ಟಿ 88 ಪಾಯಿಂಟ್ಸ್ ಏರಿಕೆ; ಎಲ್​ ಅಂಡ್​ ಟಿ ಷೇರು 76 ರೂಪಾಯಿ ಗಳಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 08, 2022 | 4:27 PM

Share

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್ ಹಾಗೂ ನಿಫ್ಟಿ ಜುಲೈ 8ನೇ ತಾರೀಕಿನ ಶುಕ್ರವಾರದಂದು ಏರಿಕೆಯಲ್ಲೇ ಮುಕ್ತಾಯ ಕಂಡಿವೆ. ದಿನಾಂತ್ಯಕ್ಕೆ ಬಿಎಸ್​ಇ ಸೆನ್ಸೆಕ್ಸ್ ಸೂಚ್ಯಂಕವು 303.38 ಪಾಯಿಂಟ್ಸ್ ಅಥವಾ ಶೇ 0.56ರಷ್ಟು ಮೇಲೇರಿ 54,481.84 ಪಾಯಿಂಟ್ಸ್​ನಲ್ಲಿ ಮುಕ್ತಾಯ ಕಂಡಿದ್ದರೆ, ನಿಫ್ಟಿ ಸೂಚ್ಯಂಕವು 87.70 ಪಾಯಿಂಟ್ಸ್ ಅಥವಾ ಶೇ 0.54ರಷ್ಟು ಏರಿಕೆ ಕಂಡು, 16,220.60 ಪಾಯಿಂಟ್ಸ್​ನಲ್ಲಿ ವಹಿವಾಟು ಚುಕ್ತಾ ಮಾಡಿದೆ. ಇಂದಿನ ವಹಿವಾಟಿನಲ್ಲಿ 1859 ಕಂಪೆನಿಯ ಷೇರುಗಳು ಏರಿಕೆಯನ್ನು ದಾಖಲಿಸಿದರೆ, 1352 ಕಂಪೆನಿಯ ಷೇರುಗಳು ಇಳಿಕೆ ಕಂಡವು. ಇನ್ನು 146 ಕಂಪೆನಿ ಷೇರುಗಳ ಬೆಲೆಯಲ್ಲಿ ಯಾವ ಬದಲಾವಣೆಯೂ ಆಗಲಿಲ್ಲ.

ಇನ್ನು ವಲಯವಾರು ಗಮನಿಸುವುದಾದರೆ ಲೋಹವೊಂದನ್ನು ಹೊರತುಪಡಿಸಿದಂತೆ ಎಲ್ಲವೂ ಏರಿಕೆಯಲ್ಲೇ ಮುಕ್ತಾಯ ಕಂಡಿವೆ. ಕ್ಯಾಪಿಟಲ್ ಗೂಡ್ಸ್ ಮತ್ತು ವಿದ್ಯುತ್ ಸೂಚ್ಯಂಕಗಳು ಶೇ 1ರಿಂದ 2ರಷ್ಟು ಹೆಚ್ಚಳವಾದವು. ಬಿಎಸ್​ಇ ಮಿಡ್​ಕ್ಯಾಪ್ ಮತ್ತು ಸ್ಮಾಲ್​ಕ್ಯಾಪ್ ಅಲ್ಪ ಪ್ರಮಾಣದ ಗಳಿಕೆಯನ್ನು ಕಂಡವು.

ಅಮೆರಿಕ ಡಾಲರ್​ ವಿರುದ್ಧ ರೂಪಾಯಿ ಮೌಲ್ಯ 79.25ರಂತೆ ಇಳಿಕೆಯಲ್ಲೇ ದಿನಾಂತ್ಯವಾಯಿತು. ಗುರುವಾರದ ವಹಿವಾಟಿನ ಕೊನೆಗೆ ರೂಪಾಯಿ ಮೌಲ್ಯ 79.17 ಇತ್ತು.

ನಿಫ್ಟಿಯಲ್ಲಿ ಏರಿಕೆ ಕಂಡ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ಲಾರ್ಸನ್ ಶೇ 4.74

ಪವರ್​ ಗ್ರಿಡ್ ಕಾರ್ಪೊರೇಷನ್ ಶೇ 2.94

ಟಾಟಾ ಮೋಟಾರ್ಸ್ ಶೇ 2.48

ಎನ್​ಟಿಪಿಸಿ ಶೇ 2.31

ಕೋಲ್ ಇಂಡಿಯಾ ಶೇ 2.04

ನಿಫ್ಟಿಯಲ್ಲಿ ಇಳಿಕೆ ಕಂಡ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ಎಚ್​ಡಿಎಫ್​ಸಿ ಲೈಫ್ ಶೇ -1.67

ಒಎನ್​​ಜಿಸಿ ಶೇ -1.62

ಟಾಟಾ ಸ್ಟೀಲ್ ಶೇ -1.57

ಮಾರುತಿ ಸುಜುಕಿ ಶೇ -1.52

ಜೆಎಸ್​ಡಬ್ಲ್ಯು ಸ್ಟೀಲ್ ಶೇ -1.46

Published On - 4:27 pm, Fri, 8 July 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?