AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: 700 ಪಾಯಿಂಟ್ಸ್ ಏರಿಕೆ ಕಂಡ ಸೆನ್ಸೆಕ್ಸ್ ಸೂಚ್ಯಂಕ; ಏಷ್ಯನ್ ಪೇಂಟ್ಸ್ ಷೇರಿಗೆ 100 ರೂ. ಹೆಚ್ಚಳ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಏಪ್ರಿಲ್ 28ನೇ ತಾರೀಕಿನ ಗುರುವಾರದಂದು ಭಾರೀ ಏರಿಕೆ ದಾಖಲಿಸಿವೆ. ಏರಿಕೆ, ಇಳಿಕೆ ಕಂಡ ಪ್ರಮುಖ ಷೇರುಗಳ ವಿವರ ಇಲ್ಲಿದೆ.

Closing Bell: 700 ಪಾಯಿಂಟ್ಸ್ ಏರಿಕೆ ಕಂಡ ಸೆನ್ಸೆಕ್ಸ್ ಸೂಚ್ಯಂಕ; ಏಷ್ಯನ್ ಪೇಂಟ್ಸ್ ಷೇರಿಗೆ 100 ರೂ. ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on:Apr 28, 2022 | 7:04 PM

Share

ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಏಪ್ರಿಲ್ 28ನೇ ತಾರೀಕಿನ ಗುರುವಾರದಂದು ಮತ್ತೆ ಗಳಿಕೆಯನ್ನು ಕಂಡಿದೆ. ಈ ಏರಿಕೆಯಲ್ಲಿ ಎಲ್ಲ ವಲಯಗಳೂ ಪಾಲ್ಗೊಂಡವು. ಎಫ್​ಐಐ (ವಿದೇಶೀ ಸಾಂಸ್ಥಿಕ ಹೂಡಿಕೆದಾರರು) ನಿರಂತರವಾಗಿ ಮಾರಾಟದಲ್ಲಿ ತೊಡಗಿದ್ದರ ಹೊರತಾಗಿಯೂ ಈ ಬೆಳವಣಿಗೆ ಆಗಿದೆ. ಆದರೆ ಒಟ್ಟಾರೆಯಾಗಿ ಕಳೆದ ಕೆಲ ವಾರಗಳಿಂದಲೇ ಮಾರುಕಟ್ಟೆಯು ಇಂತಿಷ್ಟೇ ಪಾಯಿಂಟ್ಸ್​ಗಳ ಮಧ್ಯೆ ಹೊಯ್ದಾಡುತ್ತಿದೆ. ಗುರುವಾರದ ವಹಿವಾಟಿನಲ್ಲಿ ಸೆನ್ಸೆಕ್ಸ್ 702 ಪಾಯಿಂಟ್ಸ್ ಅಥವಾ ಶೇ 1.23ರಷ್ಟು ಹೆಚ್ಚಳವನ್ನು ದಾಖಲಿಸಿದರೆ, ನಿಫ್ಟಿ-50 ಸೂಚ್ಯಂಕವು 207 ಪಾಯಿಂಟ್ಸ್ ಅಥವಾ ಶೇ 1.21ರಷ್ಟು ಮೇಲೇರಿ 17,245 ಪಾಯಿಂಟ್ಸ್​ನಲ್ಲಿ ವ್ಯವಹಾರ ಮುಗಿಸಿತು. ಇಂದಿನ ವ್ಯವಹಾರದಲ್ಲಿ ಎಲ್ಲ ವಲಯಗಳು ಏರಿಕೆ ಕಂಡವು.

ನಿಫ್ಟಿ ಎಫ್​ಎಂಸಿಜಿ ಸೂಚ್ಯಂಕ ಶೇ 2ಕ್ಕೂ ಹೆಚ್ಚೆ ಏರಿಕೆ ದಾಖಲಿಸಿದ್ದು, ಹಿಂದೂಸ್ತಾನ್ ಯುನಿಲಿವರ್ ಮುಂಚೂಣಿಯಲ್ಲಿತ್ತು. ನಿಫ್ಟಿ ಬ್ಯಾಂಕ್, ಹಣಕಾಸು ಸೇವೆಗಳು, ಮಾಹಿತಿ ತಂತ್ರಜ್ಞಾನ, ತೈಲ ಮತ್ತು ಅನಿಲ ಹಾಗೂ ಫಾರ್ಮಾಸ್ಯುಟಿಕಲ್ಸ್ ಸೂಚ್ಯಂಕಗಳು ಹತ್ತಿರ ಹತ್ತಿರ ಶೇಕಡಾ 1ರಷ್ಟು ಗಳಿಕೆ ಕಂಡವು. ವಾಹನ ಸೂಚ್ಯಂಕ ಶೇ 0.3ರಷ್ಟು ಮೇಲೇರಿತು. ಎನ್​ಎಸ್​ಇಯಲ್ಲಿ ಇಂದು 922 ಕಂಪೆನಿ ಷೇರುಗಳು ಹೆಚ್ಚಳವನ್ನು ದಾಖಲಿಸಿದರೆ, 1014 ಕಂಪೆನಿ ಷೇರುಗಳು ಕುಸಿತ ಕಂಡವು.

ನಿಫ್ಟಿಯಲ್ಲಿ ಗಳಿಕೆ ಕಂಡ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಎಚ್​ಯುಎಲ್​ ಶೇ 4.51 ಎಚ್​ಡಿಎಫ್​ಸಿ ಲೈಫ್ ಶೇ 4.34 ಎಸ್​ಬಿಐ ಲೈಫ್ ಇನ್ಷೂರೆನ್ಸ್ ಶೇ 3.97 ಯುಪಿಎಲ್ ಶೇ 3.24 ಏಷ್ಯನ್ ಪೇಂಟ್ಸ್ ಶೇ 3.16

ನಿಫ್ಟಿಯಲ್ಲಿ ಇಳಿಕೆ ಕಂಡ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಬಜಾಜ್ ಆಟೋ ಶೇ -1.82 ಹಿಂಡಾಲ್ಕೋ ಶೇ -0.75 ಭಾರ್ತಿ ಏರ್​ಟೆಲ್ ಶೇ -0.68 ಮಹೀಂದ್ರಾ ಅಂಡ್ ಮಹೀಂದ್ರಾ ಶೇ -0.43 ಎಚ್​ಸಿಎಲ್​ ಟೆಕ್ ಶೇ -0.28

ಇದನ್ನೂ ಓದಿ: ಷೇರು ಮಾರುಕಟ್ಟೆ ಬೆಲೆಗಳ ಏರಿಳಿತ ಊಹಿಸುವುದು ಹೇಗೆ ಗೊತ್ತಾ..! ಇಲ್ಲಿದೆ ಮಾಹಿತಿ

Published On - 6:14 pm, Thu, 28 April 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!