AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: 700 ಪಾಯಿಂಟ್ಸ್ ಏರಿಕೆ ಕಂಡ ಸೆನ್ಸೆಕ್ಸ್ ಸೂಚ್ಯಂಕ; ಏಷ್ಯನ್ ಪೇಂಟ್ಸ್ ಷೇರಿಗೆ 100 ರೂ. ಹೆಚ್ಚಳ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಏಪ್ರಿಲ್ 28ನೇ ತಾರೀಕಿನ ಗುರುವಾರದಂದು ಭಾರೀ ಏರಿಕೆ ದಾಖಲಿಸಿವೆ. ಏರಿಕೆ, ಇಳಿಕೆ ಕಂಡ ಪ್ರಮುಖ ಷೇರುಗಳ ವಿವರ ಇಲ್ಲಿದೆ.

Closing Bell: 700 ಪಾಯಿಂಟ್ಸ್ ಏರಿಕೆ ಕಂಡ ಸೆನ್ಸೆಕ್ಸ್ ಸೂಚ್ಯಂಕ; ಏಷ್ಯನ್ ಪೇಂಟ್ಸ್ ಷೇರಿಗೆ 100 ರೂ. ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 28, 2022 | 7:04 PM

Share

ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಏಪ್ರಿಲ್ 28ನೇ ತಾರೀಕಿನ ಗುರುವಾರದಂದು ಮತ್ತೆ ಗಳಿಕೆಯನ್ನು ಕಂಡಿದೆ. ಈ ಏರಿಕೆಯಲ್ಲಿ ಎಲ್ಲ ವಲಯಗಳೂ ಪಾಲ್ಗೊಂಡವು. ಎಫ್​ಐಐ (ವಿದೇಶೀ ಸಾಂಸ್ಥಿಕ ಹೂಡಿಕೆದಾರರು) ನಿರಂತರವಾಗಿ ಮಾರಾಟದಲ್ಲಿ ತೊಡಗಿದ್ದರ ಹೊರತಾಗಿಯೂ ಈ ಬೆಳವಣಿಗೆ ಆಗಿದೆ. ಆದರೆ ಒಟ್ಟಾರೆಯಾಗಿ ಕಳೆದ ಕೆಲ ವಾರಗಳಿಂದಲೇ ಮಾರುಕಟ್ಟೆಯು ಇಂತಿಷ್ಟೇ ಪಾಯಿಂಟ್ಸ್​ಗಳ ಮಧ್ಯೆ ಹೊಯ್ದಾಡುತ್ತಿದೆ. ಗುರುವಾರದ ವಹಿವಾಟಿನಲ್ಲಿ ಸೆನ್ಸೆಕ್ಸ್ 702 ಪಾಯಿಂಟ್ಸ್ ಅಥವಾ ಶೇ 1.23ರಷ್ಟು ಹೆಚ್ಚಳವನ್ನು ದಾಖಲಿಸಿದರೆ, ನಿಫ್ಟಿ-50 ಸೂಚ್ಯಂಕವು 207 ಪಾಯಿಂಟ್ಸ್ ಅಥವಾ ಶೇ 1.21ರಷ್ಟು ಮೇಲೇರಿ 17,245 ಪಾಯಿಂಟ್ಸ್​ನಲ್ಲಿ ವ್ಯವಹಾರ ಮುಗಿಸಿತು. ಇಂದಿನ ವ್ಯವಹಾರದಲ್ಲಿ ಎಲ್ಲ ವಲಯಗಳು ಏರಿಕೆ ಕಂಡವು.

ನಿಫ್ಟಿ ಎಫ್​ಎಂಸಿಜಿ ಸೂಚ್ಯಂಕ ಶೇ 2ಕ್ಕೂ ಹೆಚ್ಚೆ ಏರಿಕೆ ದಾಖಲಿಸಿದ್ದು, ಹಿಂದೂಸ್ತಾನ್ ಯುನಿಲಿವರ್ ಮುಂಚೂಣಿಯಲ್ಲಿತ್ತು. ನಿಫ್ಟಿ ಬ್ಯಾಂಕ್, ಹಣಕಾಸು ಸೇವೆಗಳು, ಮಾಹಿತಿ ತಂತ್ರಜ್ಞಾನ, ತೈಲ ಮತ್ತು ಅನಿಲ ಹಾಗೂ ಫಾರ್ಮಾಸ್ಯುಟಿಕಲ್ಸ್ ಸೂಚ್ಯಂಕಗಳು ಹತ್ತಿರ ಹತ್ತಿರ ಶೇಕಡಾ 1ರಷ್ಟು ಗಳಿಕೆ ಕಂಡವು. ವಾಹನ ಸೂಚ್ಯಂಕ ಶೇ 0.3ರಷ್ಟು ಮೇಲೇರಿತು. ಎನ್​ಎಸ್​ಇಯಲ್ಲಿ ಇಂದು 922 ಕಂಪೆನಿ ಷೇರುಗಳು ಹೆಚ್ಚಳವನ್ನು ದಾಖಲಿಸಿದರೆ, 1014 ಕಂಪೆನಿ ಷೇರುಗಳು ಕುಸಿತ ಕಂಡವು.

ನಿಫ್ಟಿಯಲ್ಲಿ ಗಳಿಕೆ ಕಂಡ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಎಚ್​ಯುಎಲ್​ ಶೇ 4.51 ಎಚ್​ಡಿಎಫ್​ಸಿ ಲೈಫ್ ಶೇ 4.34 ಎಸ್​ಬಿಐ ಲೈಫ್ ಇನ್ಷೂರೆನ್ಸ್ ಶೇ 3.97 ಯುಪಿಎಲ್ ಶೇ 3.24 ಏಷ್ಯನ್ ಪೇಂಟ್ಸ್ ಶೇ 3.16

ನಿಫ್ಟಿಯಲ್ಲಿ ಇಳಿಕೆ ಕಂಡ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಬಜಾಜ್ ಆಟೋ ಶೇ -1.82 ಹಿಂಡಾಲ್ಕೋ ಶೇ -0.75 ಭಾರ್ತಿ ಏರ್​ಟೆಲ್ ಶೇ -0.68 ಮಹೀಂದ್ರಾ ಅಂಡ್ ಮಹೀಂದ್ರಾ ಶೇ -0.43 ಎಚ್​ಸಿಎಲ್​ ಟೆಕ್ ಶೇ -0.28

ಇದನ್ನೂ ಓದಿ: ಷೇರು ಮಾರುಕಟ್ಟೆ ಬೆಲೆಗಳ ಏರಿಳಿತ ಊಹಿಸುವುದು ಹೇಗೆ ಗೊತ್ತಾ..! ಇಲ್ಲಿದೆ ಮಾಹಿತಿ

Published On - 6:14 pm, Thu, 28 April 22

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?