AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock Market: ಷೇರುಪೇಟೆ ಸೂಚ್ಯಂಕಗಳಾದ ನಿಫ್ಟಿ 330 ಪಾಯಿಂಟ್ಸ್, ಸೆನ್ಸೆಕ್ಸ್​ 1200 ಪಾಯಿಂಟ್ಸ್​ಗೂ ಜಾಸ್ತಿ ಹೆಚ್ಚಳ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಮಾರ್ಚ್ 9ನೇ ತಾರೀಕಿನ ಬುಧವಾರದಂದು ಭಾರೀ ಏರಿಕೆಯನ್ನು ದಾಖಲಿಸಿವೆ. ಪ್ರಮುಖವಾಗಿ ಏರಿಕೆ, ಇಳಿಕೆ ಕಂಡ ನಿಫ್ಟಿಯ ಷೇರುಗಳ ವಿವರ ಇಲ್ಲಿದೆ.

Stock Market: ಷೇರುಪೇಟೆ ಸೂಚ್ಯಂಕಗಳಾದ ನಿಫ್ಟಿ 330 ಪಾಯಿಂಟ್ಸ್, ಸೆನ್ಸೆಕ್ಸ್​ 1200 ಪಾಯಿಂಟ್ಸ್​ಗೂ ಜಾಸ್ತಿ ಹೆಚ್ಚಳ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Mar 09, 2022 | 2:43 PM

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಮಾರ್ಚ್ 9ನೇ ತಾರೀಕಿನ ಬುಧವಾರದಂದು ಭಾರೀ ಏರಿಕೆ ಕಂಡಿದೆ. ಈ ಸುದ್ದಿ ಪ್ರಕಟವಾಗುವ ಹೊತ್ತಿಗೆ ಬಿಎಸ್​ಇ ಸೆನ್ಸೆಕ್ಸ್ 1203.76 ಪಾಯಿಂಟ್ಸ್ ಹಾಗೂ ನಿಫ್ಟಿ 329.70 ಪಾಯಿಂಟ್ಸ್​ನಷ್ಟು ಹೆಚ್ಚಳ ಆಗಿತ್ತು. ಜಾಗತಿಕ ಸೂಚ್ಯಂಕಗಳು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿತ್ತು. ವಾಹನ, ಬ್ಯಾಂಕ್, ಕ್ಯಾಪಿಟಲ್ ಗೂಡ್ಸ್, ಫಾರ್ಮಾ, ಐಟಿ ಹಾಗೂ ರಿಯಾಲ್ಟಿ ಸೂಚ್ಯಂಕಗಳು ತಲಾ ಶೇ 2ರಷ್ಟು ಮೇಲೇರಿದ್ದವು. ಈ ಮಧ್ಯೆ ಲೋಹ ಸೂಚ್ಯಂಕ ಶೇ 0.5ರಷ್ಟು ಇಳಿಕೆ ಕಂಡಿದ್ದು, ಬಿಎಸ್​ಇ ಸ್ಮಾಲ್​ಕ್ಯಾಪ್​ ಮತ್ತು ಮಿಡ್​ಕ್ಯಾಪ್ ಸೂಚ್ಯಂಕಗಳು ತಲಾ ಶೇ 2ರಷ್ಟು ಮೇಲೇರಿವೆ. ನಿಫ್ಟಿ ಬ್ಯಾಂಕ್ ಸೂಚ್ಯಂಕವು 517.50 ಪಾಯಿಂಟ್ಸ್ ಮೇಲೇರಿದೆ. ಇಂಟ್ರಾಡೇಯಲ್ಲಿ ಝೈಡಸ್ ಲೈಫ್​ಸೈನ್ಸಸ್ ಷೇರು ದರವು ಶೇ 5ಕ್ಕಿಂತ ಹೆಚ್ಚು ಮೇಲೇರಿತ್ತು.

ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್​ನಿಂದ ಷೇರು ಮರುಖರೀದಿ ಇಂದಿನಿಂದ (ಮಾರ್ಚ್ 9, 2022) ಪ್ರಾರಂಭ ಆಗಿದೆ. 18 ಸಾವಿರ ಕೋಟಿ ರೂಪಾಯಿ ಮೊತ್ತದ ಷೇರು ಮರುಖರೀದಿಯನ್ನು ಬುಧವಾರದಿಂದ ಶುರು ಮಾಡಿದೆ. ಟಿಸಿಎಸ್​ ಸಾಮಾನ್ಯ ವರ್ಗದಿಂದ 3,40,00,000 ಷೇರುಗಳನ್ನು ಮತ್ತು ಕಾಯ್ದಿರಿಸಿದ ವರ್ಗದಿಂದ 60,00,000 ಷೇರುಗಳನ್ನು ಖರೀದಿಸುವುದಾಗಿ ಘೋಷಿಸಿತು. ಈ ಕೊಡುಗೆಯು ಎಲ್ಲ ರೀತಿ ಷೇರುದಾರರಿಗೆ ಮುಕ್ತವಾಗಿದೆ.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಬಜಾಜ್ ಫೈನಾನ್ಸ್ ಶೇ 4.86

ರಿಲಯನ್ಸ್ ಶೇ 4.77

ಬಜಾಜ್ ಫಿನ್​ಸರ್ವ್ ಶೇ 4.67

ಮಹೀಂದ್ರಾ ಅಂಡ್ ಮಹೀಂದ್ರಾ ಶೇ 4.56

ಅದಾನಿ ಪೋರ್ಟ್ಸ್ ಶೇ 4.01

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಶ್ರೀ ಸಿಮೆಂಟ್ಸ್ ಶೇ -2.62

ಪವರ್​ ಗ್ರಿಡ್ ಕಾರ್ಪೊರೇಷನ್ ಶೇ -1.95

ಎನ್​ಟಿಪಿಸಿ ಶೇ -1.79

ಒಎನ್​ಜಿಸಿ ಶೇ -1.34

ಟಾಟಾ ಸ್ಟೀಲ್ ಶೇ -0.93

ಇದನ್ನೂ ಓದಿ: TCS Shares Buyback: ಮಾರ್ಚ್​ 9ರಿಂದ 23ರ ಮಧ್ಯೆ 18 ಸಾವಿರ ಕೋಟಿ ರೂ. ಮೊತ್ತದ ಟಿಸಿಎಸ್​ ಷೇರು ಮರುಖರೀದಿ

ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ