AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock Market: ಷೇರುಪೇಟೆ ಸೂಚ್ಯಂಕಗಳಾದ ನಿಫ್ಟಿ 330 ಪಾಯಿಂಟ್ಸ್, ಸೆನ್ಸೆಕ್ಸ್​ 1200 ಪಾಯಿಂಟ್ಸ್​ಗೂ ಜಾಸ್ತಿ ಹೆಚ್ಚಳ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಮಾರ್ಚ್ 9ನೇ ತಾರೀಕಿನ ಬುಧವಾರದಂದು ಭಾರೀ ಏರಿಕೆಯನ್ನು ದಾಖಲಿಸಿವೆ. ಪ್ರಮುಖವಾಗಿ ಏರಿಕೆ, ಇಳಿಕೆ ಕಂಡ ನಿಫ್ಟಿಯ ಷೇರುಗಳ ವಿವರ ಇಲ್ಲಿದೆ.

Stock Market: ಷೇರುಪೇಟೆ ಸೂಚ್ಯಂಕಗಳಾದ ನಿಫ್ಟಿ 330 ಪಾಯಿಂಟ್ಸ್, ಸೆನ್ಸೆಕ್ಸ್​ 1200 ಪಾಯಿಂಟ್ಸ್​ಗೂ ಜಾಸ್ತಿ ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on: Mar 09, 2022 | 2:43 PM

Share

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಮಾರ್ಚ್ 9ನೇ ತಾರೀಕಿನ ಬುಧವಾರದಂದು ಭಾರೀ ಏರಿಕೆ ಕಂಡಿದೆ. ಈ ಸುದ್ದಿ ಪ್ರಕಟವಾಗುವ ಹೊತ್ತಿಗೆ ಬಿಎಸ್​ಇ ಸೆನ್ಸೆಕ್ಸ್ 1203.76 ಪಾಯಿಂಟ್ಸ್ ಹಾಗೂ ನಿಫ್ಟಿ 329.70 ಪಾಯಿಂಟ್ಸ್​ನಷ್ಟು ಹೆಚ್ಚಳ ಆಗಿತ್ತು. ಜಾಗತಿಕ ಸೂಚ್ಯಂಕಗಳು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿತ್ತು. ವಾಹನ, ಬ್ಯಾಂಕ್, ಕ್ಯಾಪಿಟಲ್ ಗೂಡ್ಸ್, ಫಾರ್ಮಾ, ಐಟಿ ಹಾಗೂ ರಿಯಾಲ್ಟಿ ಸೂಚ್ಯಂಕಗಳು ತಲಾ ಶೇ 2ರಷ್ಟು ಮೇಲೇರಿದ್ದವು. ಈ ಮಧ್ಯೆ ಲೋಹ ಸೂಚ್ಯಂಕ ಶೇ 0.5ರಷ್ಟು ಇಳಿಕೆ ಕಂಡಿದ್ದು, ಬಿಎಸ್​ಇ ಸ್ಮಾಲ್​ಕ್ಯಾಪ್​ ಮತ್ತು ಮಿಡ್​ಕ್ಯಾಪ್ ಸೂಚ್ಯಂಕಗಳು ತಲಾ ಶೇ 2ರಷ್ಟು ಮೇಲೇರಿವೆ. ನಿಫ್ಟಿ ಬ್ಯಾಂಕ್ ಸೂಚ್ಯಂಕವು 517.50 ಪಾಯಿಂಟ್ಸ್ ಮೇಲೇರಿದೆ. ಇಂಟ್ರಾಡೇಯಲ್ಲಿ ಝೈಡಸ್ ಲೈಫ್​ಸೈನ್ಸಸ್ ಷೇರು ದರವು ಶೇ 5ಕ್ಕಿಂತ ಹೆಚ್ಚು ಮೇಲೇರಿತ್ತು.

ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್​ನಿಂದ ಷೇರು ಮರುಖರೀದಿ ಇಂದಿನಿಂದ (ಮಾರ್ಚ್ 9, 2022) ಪ್ರಾರಂಭ ಆಗಿದೆ. 18 ಸಾವಿರ ಕೋಟಿ ರೂಪಾಯಿ ಮೊತ್ತದ ಷೇರು ಮರುಖರೀದಿಯನ್ನು ಬುಧವಾರದಿಂದ ಶುರು ಮಾಡಿದೆ. ಟಿಸಿಎಸ್​ ಸಾಮಾನ್ಯ ವರ್ಗದಿಂದ 3,40,00,000 ಷೇರುಗಳನ್ನು ಮತ್ತು ಕಾಯ್ದಿರಿಸಿದ ವರ್ಗದಿಂದ 60,00,000 ಷೇರುಗಳನ್ನು ಖರೀದಿಸುವುದಾಗಿ ಘೋಷಿಸಿತು. ಈ ಕೊಡುಗೆಯು ಎಲ್ಲ ರೀತಿ ಷೇರುದಾರರಿಗೆ ಮುಕ್ತವಾಗಿದೆ.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಬಜಾಜ್ ಫೈನಾನ್ಸ್ ಶೇ 4.86

ರಿಲಯನ್ಸ್ ಶೇ 4.77

ಬಜಾಜ್ ಫಿನ್​ಸರ್ವ್ ಶೇ 4.67

ಮಹೀಂದ್ರಾ ಅಂಡ್ ಮಹೀಂದ್ರಾ ಶೇ 4.56

ಅದಾನಿ ಪೋರ್ಟ್ಸ್ ಶೇ 4.01

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಶ್ರೀ ಸಿಮೆಂಟ್ಸ್ ಶೇ -2.62

ಪವರ್​ ಗ್ರಿಡ್ ಕಾರ್ಪೊರೇಷನ್ ಶೇ -1.95

ಎನ್​ಟಿಪಿಸಿ ಶೇ -1.79

ಒಎನ್​ಜಿಸಿ ಶೇ -1.34

ಟಾಟಾ ಸ್ಟೀಲ್ ಶೇ -0.93

ಇದನ್ನೂ ಓದಿ: TCS Shares Buyback: ಮಾರ್ಚ್​ 9ರಿಂದ 23ರ ಮಧ್ಯೆ 18 ಸಾವಿರ ಕೋಟಿ ರೂ. ಮೊತ್ತದ ಟಿಸಿಎಸ್​ ಷೇರು ಮರುಖರೀದಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್