AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಂಖ್ ಏರ್; ಭಾರತದಲ್ಲಿ ಪದಾರ್ಪಣೆ ಮಾಡಲಿದೆ ಹೊಸ ಏರ್​ಲೈನ್ಸ್ ಸಂಸ್ಥೆ

Shankh Air in India: ಶರ್ವಣ್ ವಿಶ್ವಕರ್ಮ ಎನ್ನುವ ಯುವ ಉದ್ಯಮಿಯೊಬ್ಬರು ಸ್ಥಾಪಿಸಿರುವ ಶಂಖ್ ಏವಿಯೇಶನ್ ಪ್ರೈ ಲಿ ಸಂಸ್ಥೆಗೆ ವಿಮಾನ ಹಾರಾಟ ಸೇವೆ ಆರಂಭಿಸಲು ಕೇಂದ್ರ ವಿಮಾನಯಾನ ಸಚಿವಾಲಯ ಒಪ್ಪಿಗೆ ನೀಡಿದೆ. ಡಿಜಿಸಿಎ ಅನುಮೋದನೆ ದೊರೆತ ಬಳಿಕ ಶಂಖ್ ಏರ್​ನಿಂದ ಸೇವೆ ಆರಂಭವಾಗಬಹುದು. ಶಂಖ್ ಏರ್ ಉತ್ತರಪ್ರದೇಶವನ್ನು ಕೇಂದ್ರವನ್ನಾಗಿಸಿಕೊಂಡು ಕಾರ್ಯಾಚರಿಸಬಹುದು.

ಶಂಖ್ ಏರ್; ಭಾರತದಲ್ಲಿ ಪದಾರ್ಪಣೆ ಮಾಡಲಿದೆ ಹೊಸ ಏರ್​ಲೈನ್ಸ್ ಸಂಸ್ಥೆ
ವಿಮಾನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 24, 2024 | 1:03 PM

Share

ನವದೆಹಲಿ, ಸೆಪ್ಟೆಂಬರ್ 24: ಭಾರತದ ವಿಮಾನಯಾನ ಕ್ಷೇತ್ರದಲ್ಲಿ ಒಂದರ ಹಿಂದೆ ಒಂದು ಕಂಪನಿಗಳು ಸಂಕಷ್ಟಕ್ಕೆ ಸಿಲುಕುತ್ತಿರುವ ಮಧ್ಯೆ ಹೊಸ ಕಂಪನಿಗಳು ಜನ್ಮ ತಾಳುವುದು ಮುಂದುವರಿದಿದೆ. ಇದೀಗ ಶಂಖ್ ಏರ್ ಎಂಬ ಏರ್ಲೈನ್ ಸಂಸ್ಥೆಗೆ ಕೇಂದ್ರ ವಿಮಾನಯಾನ ಸಚಿವಾಲಯ ಅನುಮೋದನೆ ನೀಡಿದೆ. ವಿಮಾನಯಾನ ಮಹಾ ನಿರ್ದೇಶನಾಲಯದಿಂದ (ಡಿಸಿಸಿಎ) ಒಪ್ಪಿಗೆ ಮುದ್ರೆ ಪಡೆದ ಬಳಿಕ ಶಂಖ್ ಏರ್ ವಿಮಾನ ಹಾರಾಟ ಕಾರ್ಯಾರಂಭಿಸಬಹುದು.

ಉತ್ತರ ಪ್ರದೇಶ ಮೂಲದ ಶಂಖ್ ಏರ್, ಆ ರಾಜ್ಯದ ಮೊದಲ ಶ್ಕೆಡ್ಯೂಲ್ಡ್ ಏರ್ಲೈನ್ ಎನಿಸಿದೆ. ದೇಶಾದ್ಯಂತ ಪ್ರಮುಖ ನಗರಗಳ ಮಧ್ಯೆ ಇದು ಕಾರ್ಯಾಚರಿಸಲಿದೆ. ಅಂತರರಾಜ್ಯ ಮಾತ್ರವಲ್ಲದೆ, ರಾಜ್ಯದೊಳಗಿನ ಪ್ರಮುಖ ಮಾರ್ಗಗಳಿಗೆ ಇದು ಸೇವೆ ನೀಡಲಿದೆ.

ಶಂಖ್ ಏರ್ ಸಂಸ್ಥೆಗೆ ವಿಮಾನ ಹಾರಾಟ ನಡೆಸಲು ಮೂರು ವರ್ಷಗಳಿಗೆ ನಿರಾಕ್ಷೇಪಣ ಪತ್ರ (ಎನ್​ಒಸಿ) ನೀಡಲಾಗಿದೆ. ಹಾಗೆಯೇ, ವಿದೇಶೀ ನೇರ ಹೂಡಿಕೆಯ ನಿಯಮಗಳು, ಸೆಬಿ ನಿಬಂಧನೆಗಳು ಸೇರಿದಂತೆ ವಿವಿಧ ಕಾನೂನುಗಳಿಗೆ ಬದ್ಧವಾಗಿರಬೇಕು ಎನ್ನುವ ಷರತ್ತನ್ನು ಶಂಖ್ ಏರ್​ಗೆ ನೀಡಾಗಿದೆ. ಆ ಷರತ್ತಿನ ಮೇರೆಗೆ ನಾಗರಿಕ ವಿಮಾನ ಯಾನ ಸಚಿವಾಲಯದಿಂದ ಅನುಮೋದನೆಯ ಪತ್ರ ನೀಡಲಾಗಿದೆ.

ಇದನ್ನೂ ಓದಿ: ಭಾರತದ ಶಕ್ತಿ..! ಅಮೆರಿಕದ ಸಹಭಾಗಿತ್ವದಲ್ಲಿ ಮೊದಲ ರಾಷ್ಟ್ರೀಯ ಭದ್ರತಾ ಸೆಮಿಕಂಡಕ್ಟರ್ ಫ್ಯಾಬ್ ಘಟಕ

ಶರ್ವಣ್ ವಿಶ್ವಕರ್ಮ ಅವರಿಂದ ಸ್ಥಾಪಿತವಾಗಿರುವ ಶಂಖ್ ಏವಿಯೇಶನ್ ಪ್ರೈ ಲಿ ಸಂಸ್ಥೆ ಬೋಯಿಂಗ್ 737-800 ಎನ್​ಜಿ ವಿಮಾನಗಳನ್ನು ಸೇವೆಗೆ ಬಳಸಲಿದೆ. ಕಡಿಮೆ ಬೆಲೆಗೆ ವಿಮಾನ ಸೇವೆ ನೀಡುವ ಗುರಿ ಇದೆ. ಅದರ ವೆಬ್​ಸೈಟ್​ನಲ್ಲಿ ಇರುವ ಮಾಹಿತಿ ಪ್ರಕಾರ ಉತ್ತರಪ್ರದೇಶದೊಳಗಿನ ವಿವಿಧ ಪ್ರದೇಶಗಳ ಕನೆಕ್ಟಿವಿಟಿಗೆ ಹೆಚ್ಚಿನ ಆದ್ಯತೆ ಇರುತ್ತದೆ. ಹಾಗೆಯೇ ದೇಶದ ಬೇರೆ ಬೇರೆ ಪ್ರಮುಖ ನಗರಗಳಿಗೂ ಸೇವೆ ವ್ಯಾಪಿಸಲಿದೆ. ಹೆಚ್ಚು ಬೇಡಿಕೆ ಇದ್ದರೂ ಸಾಕಷ್ಟು ಕನೆಕ್ಟಿವಿಟಿ ಇಲ್ಲದ ಪ್ರದೇಶಗಳ ನಡುವೆ ವಿಮಾನ ಹಾರಾಟಕ್ಕೆ ಇದು ಪ್ರಾಮುಖ್ಯತೆ ನೀಡಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್