AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಷೇರುಪೇಟೆಯಲ್ಲಿ ಹೂಡಿಕೆದಾರರ ಸಂಪತ್ತು 3 ದಿನದಲ್ಲಿ 6.39 ಲಕ್ಷ ಕೋಟಿ ರೂಪಾಯಿ ಹೆಚ್ಚಳ

ಕಳೆದ ಮೂರು ದಿನದಲ್ಲಿ ಷೇರು ಮಾರುಕಟ್ಟೆ ಹೂಡಿಕೆದಾರರ ಸಂಪತ್ತು ರೂ. 6.39 ಲಕ್ಷ ಕೋಟಿ ಹೆಚ್ಚಳವಾಗಿದೆ. ಜಾಗತಿಕ ಪ್ರಭಾವದಿಂದ ಈ ಬೆಳವಣಿಗೆ ಆಗಿದೆ.

ಷೇರುಪೇಟೆಯಲ್ಲಿ ಹೂಡಿಕೆದಾರರ ಸಂಪತ್ತು 3 ದಿನದಲ್ಲಿ 6.39 ಲಕ್ಷ ಕೋಟಿ ರೂಪಾಯಿ ಹೆಚ್ಚಳ
ಸಾಂದರ್ಭಿಕ ಚಿತ್ರ
Srinivas Mata
|

Updated on: Apr 28, 2021 | 8:32 PM

Share

ಕೊರೊನಾ ಪ್ರಕರಣಗಳನ್ನು ನಿಯಂತ್ರಿಸಲು ತೆಗೆದುಕೊಂಡ ಕ್ರಮಗಳು ಹಾಗೂ ಲಸಿಕೆ ಹಾಕುವುದಕ್ಕೆ ವೇಗ ನೀಡಿರುವುದರಿಂದ ಜಾಗತಿಕ ಬೆಂಬಲ ಸಿಕ್ಕಿದ್ದರಿಂದಾಗಿ ಕಳೆದ ಮೂರು ದಿನದಲ್ಲಿ ಹೂಡಿಕೆದಾರರ ಸಂಪತ್ತು 6.39 ಲಕ್ಷ ಕೋಟಿ ರೂಪಾಯಿ ಹೆಚ್ಚಳವಾಗಿದೆ. ಕಳೆದ ಮೂರು ದಿನದಲ್ಲಿ ಬೆಂಚ್​ಮಾರ್ಕ್​ ಸೂಚ್ಯಂಕ ಸೆನ್ಸೆಕ್ಸ್ 1855.39 ಪಾಯಿಂಟ್ಸ್ ಅಥವಾ ಶೇ 3.88 ಹೆಚ್ಚಳವಾಗಿ 49,733.84 ಪಾಯಿಂಟ್​ನೊಂದಿಗೆ ವಹಿವಾಟು ಮುಗಿದಿದೆ. ಇನ್ನು ನಿಫ್ಟಿ 532.2 ಪಾಯಿಂಟ್ಸ್ ಅಥವಾ ಶೇ 3.65ರಷ್ಟು ಮೇಲೇರಿ 14,864.55 ಪಾಯಿಂಟ್ಸ್​ನೊಂದಿಗೆ ವ್ಯವಹಾರವನ್ನು ಚುಕ್ತಾ ಮಾಡಿದೆ. ಈ ಏರಿಕೆ ಕಾರಣಕ್ಕೆ ಮೂರು ದಿನಗಳಲ್ಲಿ ಬಿಎಸ್​ಇ- ಲಿಸ್ಟೆಡ್ ಕಂಪೆನಿಗಳ ಮಾರುಕಟ್ಟೆ ಬಂಡವಾಳ ಮೌಲ್ಯವು 6.39 ಲಕ್ಷ ಕೋಟಿ ರೂಪಾಯಿ ಏರಿಕೆಯಾಗಿ, 208.76 ಲಕ್ಷ ಕೋಟಿ ರೂಪಾಯಿಯನ್ನು ಮುಟ್ಟಿದೆ.

“ಸತತ ಮೂರು ಸೆಷನ್​ಗಳ ಏರಿಕೆಯಿಂದಾಗಿ ಮಾರುಕಟ್ಟೆಯು ಗಳಿಕೆ ವಿಸ್ತರಿಸಿಕೊಂಡಿದೆ. ಇದು ಕಂಪೆನಿಗಳ ಆದಾಯಗಳ ಫಲಿತಾಂಶ ಘೋಷಣೆ ಋತುವಾದ್ದರಿಂದ ಅದರ ಬೆಂಬಲ ಸಿಕ್ಕಿದೆ. ಜಾಗತಿಕ ಮಾರ್ಕೆಟ್​ಗಳು ಎಚ್ಚರಿಕೆ ಹೆಜ್ಜೆಯ ಹೊರತಾಗಿ ಫೆಡರಲ್ ಓಪನ್ ಮಾರ್ಕೆಟ್ ಕಮಿಟಿ (FOMC)ಸಭೆಯ ಪೂರ್ವಭಾವಿಯಾಗಿ ಬೆಂಚ್​ಮಾರ್ಕ್ ಸೂಚ್ಯಂಕ ಏರಿಕೆಯೊಂದಿಗೆ ದಿನದ ಆರಂಭ ಮಾಡಿದೆ ಮತ್ತು ಅದೇ ಹೆಚ್ಚಳ ಮುಂದುವರಿದಿದೆ. ಗುರುವಾರದಂದು ಮೊದಲಿಗೆ ಮಾರುಕಟ್ಟೆಯು FOMC ಸಭೆಗೆ ಪ್ರತಿಕ್ರಿಯಿಸಲಿದೆ. ಆ ನಂತರ ತಿಂಗಳ ಡೆರಿವೇಟಿವ್ಸ್ ಎಕ್ಸ್​ಪೈರಿ (ಅವಧಿ ಮುಕ್ತಾಯ) ಮತ್ತು ಗಳಿಕೆಗೆ ಪ್ರತಿಕ್ರಿಯಿಸಲು ಬದಲಾಗಲಿದೆ,” ಎಂದು ರೆಲಿಗೇರ್ ಬ್ರೋಕಿಂಗ್ ಲಿ. ಹೇಳಿದೆ.

ಸೆನ್ಸೆಕ್ಸ್​ನಲ್ಲಿ ಬಜಾಜ್ ಫೈನಾನ್ಸ್ ಪ್ರಮುಖ ಗೇಯ್ನರ್ ಆಗಿತ್ತು. ಶೇ 8.32ರಷ್ಟು ಏರಿಕೆ ಕಂಡಿತು. ಇಂಡಸ್ ಇಂಡ್​ ಬ್ಯಾಂಕ್ ಶೇ 5.08, ಬಜಾಜ್ ಫಿನ್​ಸರ್ವ್ (ಶೇ 4.03), ಐಸಿಐಸಿಐ ಬ್ಯಾಂಕ್ (ಶೇ 3.72) ಹಾಗೂ ಕೊಟಕ್ ಮಹೀಂದ್ರಾ ಬ್ಯಾಂಕ್ (ಶೇ 3.52) ಕಂಪೆನಿ ಷೇರುಗಳು ಏರಿಕೆ ಕಂಡವು. ಮತ್ತೊಂದು ಕಡೆ ನೆಸ್ಟ್ಲೆ ಇಂಡಿಯಾ, ಎಚ್​ಸಿಎಲ್ ಟೆಕ್, ಲಾರ್ಸನ್ ಅಂಡ್ ಟೂಬ್ರೋ, ಟಿಸಿಎಸ್, ಡಾ ರೆಡ್ಡೀಸ್ ಮತ್ತು ಐಟಿಸಿ ಇಳಿಕೆ ಕಂಡಿವೆ. ಬಿಎಸ್​ಇ ಮಿಡ್​ಕ್ಯಾಪ್ ಮತ್ತು ಸ್ಮಾಲ್​ಕ್ಯಾಪ್ ಕ್ರಮವಾಗಿ ಶೇ 0.99 ಮತ್ತು ಶೇ 0.71ರಷ್ಟು ಇಳಿಕೆಯಾಗಿವೆ.

ಇದನ್ನೂ ಓದಿ: ಷೇರು ಮಾರ್ಕೆಟ್​ನಲ್ಲಿ ಹಣ ಮಾಡುವುದು ಹೇಗೆ ಎಂಬುದಕ್ಕೆ ಇಲ್ಲಿವೆ 10 ಸಿಂಪಲ್ ಟಿಪ್ಸ್

(Indian stock market investors wealth increased by Rs 6.39 lakh crore in 3 days)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ