AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಷೇರುಪೇಟೆಯಲ್ಲಿ ಹೂಡಿಕೆದಾರರ ಸಂಪತ್ತು 3 ದಿನದಲ್ಲಿ 6.39 ಲಕ್ಷ ಕೋಟಿ ರೂಪಾಯಿ ಹೆಚ್ಚಳ

ಕಳೆದ ಮೂರು ದಿನದಲ್ಲಿ ಷೇರು ಮಾರುಕಟ್ಟೆ ಹೂಡಿಕೆದಾರರ ಸಂಪತ್ತು ರೂ. 6.39 ಲಕ್ಷ ಕೋಟಿ ಹೆಚ್ಚಳವಾಗಿದೆ. ಜಾಗತಿಕ ಪ್ರಭಾವದಿಂದ ಈ ಬೆಳವಣಿಗೆ ಆಗಿದೆ.

ಷೇರುಪೇಟೆಯಲ್ಲಿ ಹೂಡಿಕೆದಾರರ ಸಂಪತ್ತು 3 ದಿನದಲ್ಲಿ 6.39 ಲಕ್ಷ ಕೋಟಿ ರೂಪಾಯಿ ಹೆಚ್ಚಳ
ಸಾಂದರ್ಭಿಕ ಚಿತ್ರ
Srinivas Mata
|

Updated on: Apr 28, 2021 | 8:32 PM

Share

ಕೊರೊನಾ ಪ್ರಕರಣಗಳನ್ನು ನಿಯಂತ್ರಿಸಲು ತೆಗೆದುಕೊಂಡ ಕ್ರಮಗಳು ಹಾಗೂ ಲಸಿಕೆ ಹಾಕುವುದಕ್ಕೆ ವೇಗ ನೀಡಿರುವುದರಿಂದ ಜಾಗತಿಕ ಬೆಂಬಲ ಸಿಕ್ಕಿದ್ದರಿಂದಾಗಿ ಕಳೆದ ಮೂರು ದಿನದಲ್ಲಿ ಹೂಡಿಕೆದಾರರ ಸಂಪತ್ತು 6.39 ಲಕ್ಷ ಕೋಟಿ ರೂಪಾಯಿ ಹೆಚ್ಚಳವಾಗಿದೆ. ಕಳೆದ ಮೂರು ದಿನದಲ್ಲಿ ಬೆಂಚ್​ಮಾರ್ಕ್​ ಸೂಚ್ಯಂಕ ಸೆನ್ಸೆಕ್ಸ್ 1855.39 ಪಾಯಿಂಟ್ಸ್ ಅಥವಾ ಶೇ 3.88 ಹೆಚ್ಚಳವಾಗಿ 49,733.84 ಪಾಯಿಂಟ್​ನೊಂದಿಗೆ ವಹಿವಾಟು ಮುಗಿದಿದೆ. ಇನ್ನು ನಿಫ್ಟಿ 532.2 ಪಾಯಿಂಟ್ಸ್ ಅಥವಾ ಶೇ 3.65ರಷ್ಟು ಮೇಲೇರಿ 14,864.55 ಪಾಯಿಂಟ್ಸ್​ನೊಂದಿಗೆ ವ್ಯವಹಾರವನ್ನು ಚುಕ್ತಾ ಮಾಡಿದೆ. ಈ ಏರಿಕೆ ಕಾರಣಕ್ಕೆ ಮೂರು ದಿನಗಳಲ್ಲಿ ಬಿಎಸ್​ಇ- ಲಿಸ್ಟೆಡ್ ಕಂಪೆನಿಗಳ ಮಾರುಕಟ್ಟೆ ಬಂಡವಾಳ ಮೌಲ್ಯವು 6.39 ಲಕ್ಷ ಕೋಟಿ ರೂಪಾಯಿ ಏರಿಕೆಯಾಗಿ, 208.76 ಲಕ್ಷ ಕೋಟಿ ರೂಪಾಯಿಯನ್ನು ಮುಟ್ಟಿದೆ.

“ಸತತ ಮೂರು ಸೆಷನ್​ಗಳ ಏರಿಕೆಯಿಂದಾಗಿ ಮಾರುಕಟ್ಟೆಯು ಗಳಿಕೆ ವಿಸ್ತರಿಸಿಕೊಂಡಿದೆ. ಇದು ಕಂಪೆನಿಗಳ ಆದಾಯಗಳ ಫಲಿತಾಂಶ ಘೋಷಣೆ ಋತುವಾದ್ದರಿಂದ ಅದರ ಬೆಂಬಲ ಸಿಕ್ಕಿದೆ. ಜಾಗತಿಕ ಮಾರ್ಕೆಟ್​ಗಳು ಎಚ್ಚರಿಕೆ ಹೆಜ್ಜೆಯ ಹೊರತಾಗಿ ಫೆಡರಲ್ ಓಪನ್ ಮಾರ್ಕೆಟ್ ಕಮಿಟಿ (FOMC)ಸಭೆಯ ಪೂರ್ವಭಾವಿಯಾಗಿ ಬೆಂಚ್​ಮಾರ್ಕ್ ಸೂಚ್ಯಂಕ ಏರಿಕೆಯೊಂದಿಗೆ ದಿನದ ಆರಂಭ ಮಾಡಿದೆ ಮತ್ತು ಅದೇ ಹೆಚ್ಚಳ ಮುಂದುವರಿದಿದೆ. ಗುರುವಾರದಂದು ಮೊದಲಿಗೆ ಮಾರುಕಟ್ಟೆಯು FOMC ಸಭೆಗೆ ಪ್ರತಿಕ್ರಿಯಿಸಲಿದೆ. ಆ ನಂತರ ತಿಂಗಳ ಡೆರಿವೇಟಿವ್ಸ್ ಎಕ್ಸ್​ಪೈರಿ (ಅವಧಿ ಮುಕ್ತಾಯ) ಮತ್ತು ಗಳಿಕೆಗೆ ಪ್ರತಿಕ್ರಿಯಿಸಲು ಬದಲಾಗಲಿದೆ,” ಎಂದು ರೆಲಿಗೇರ್ ಬ್ರೋಕಿಂಗ್ ಲಿ. ಹೇಳಿದೆ.

ಸೆನ್ಸೆಕ್ಸ್​ನಲ್ಲಿ ಬಜಾಜ್ ಫೈನಾನ್ಸ್ ಪ್ರಮುಖ ಗೇಯ್ನರ್ ಆಗಿತ್ತು. ಶೇ 8.32ರಷ್ಟು ಏರಿಕೆ ಕಂಡಿತು. ಇಂಡಸ್ ಇಂಡ್​ ಬ್ಯಾಂಕ್ ಶೇ 5.08, ಬಜಾಜ್ ಫಿನ್​ಸರ್ವ್ (ಶೇ 4.03), ಐಸಿಐಸಿಐ ಬ್ಯಾಂಕ್ (ಶೇ 3.72) ಹಾಗೂ ಕೊಟಕ್ ಮಹೀಂದ್ರಾ ಬ್ಯಾಂಕ್ (ಶೇ 3.52) ಕಂಪೆನಿ ಷೇರುಗಳು ಏರಿಕೆ ಕಂಡವು. ಮತ್ತೊಂದು ಕಡೆ ನೆಸ್ಟ್ಲೆ ಇಂಡಿಯಾ, ಎಚ್​ಸಿಎಲ್ ಟೆಕ್, ಲಾರ್ಸನ್ ಅಂಡ್ ಟೂಬ್ರೋ, ಟಿಸಿಎಸ್, ಡಾ ರೆಡ್ಡೀಸ್ ಮತ್ತು ಐಟಿಸಿ ಇಳಿಕೆ ಕಂಡಿವೆ. ಬಿಎಸ್​ಇ ಮಿಡ್​ಕ್ಯಾಪ್ ಮತ್ತು ಸ್ಮಾಲ್​ಕ್ಯಾಪ್ ಕ್ರಮವಾಗಿ ಶೇ 0.99 ಮತ್ತು ಶೇ 0.71ರಷ್ಟು ಇಳಿಕೆಯಾಗಿವೆ.

ಇದನ್ನೂ ಓದಿ: ಷೇರು ಮಾರ್ಕೆಟ್​ನಲ್ಲಿ ಹಣ ಮಾಡುವುದು ಹೇಗೆ ಎಂಬುದಕ್ಕೆ ಇಲ್ಲಿವೆ 10 ಸಿಂಪಲ್ ಟಿಪ್ಸ್

(Indian stock market investors wealth increased by Rs 6.39 lakh crore in 3 days)

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್