AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google Investments In Airtel: ಏರ್​ಟೆಲ್​ನಲ್ಲಿ ಗೂಗಲ್​ನ 7500 ಕೋಟಿ ರೂಪಾಯಿ ಹೂಡಿಕೆಗೆ ಷೇರುದಾರರ ಒಪ್ಪಿಗೆ

ಏರ್​ಟೆಲ್​ನಲ್ಲಿ ಗೂಗಲ್​ನಿಂದ ನೂರು ಕೋಟಿ ಅಮೆರಿಕನ್ ಡಾಲರ್ ಹೂಡಿಕೆ ಮಾಡುವುದಕ್ಕೆ ಷೇರುದಾರರು ಅನುಮತಿ ನೀಡಿದ್ದಾರೆ. ಆ ಬಗ್ಗೆ ವಿವರ ಇಲ್ಲಿದೆ.

Google Investments In Airtel: ಏರ್​ಟೆಲ್​ನಲ್ಲಿ ಗೂಗಲ್​ನ 7500 ಕೋಟಿ ರೂಪಾಯಿ ಹೂಡಿಕೆಗೆ ಷೇರುದಾರರ ಒಪ್ಪಿಗೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 28, 2022 | 6:52 PM

Share

ಏರ್​ಟೆಲ್​ನ ಶೇ 1.28ರ ಪಾಲಿನ ಖರೀದಿಗೆ 7,500 ಕೋಟಿ ರೂಪಾಯಿ ಹೂಡಿಕೆ ಮಾಡಲು ಭಾರತೀಯ ಟೆಲಿಕಾಂ ಕಂಪೆನಿಯ ಷೇರುದಾರರು ಅನುಮತಿ ನೀಡಿದ್ದಾರೆ. ಗೂಗಲ್​ನಿಂದ (Google) ಹೂಡಿಕೆಗೆ ವಿಶೇಷ ನಿಲುವಳಿಯನ್ನು ಶೇ 99ರಷ್ಟು ಷೇರುದಾರರು ಅನುಮೋದಿಸಿದರು ಎಂದು ಫೆಬ್ರವರಿ 26ನೇ ತಾರೀಕಿನಂದು ನಡೆದ ವಿಶೇಷ ಸಾಮಾನ್ಯ ಸಭೆ (EGM) ಫಲಿತಾಂಶದ ಆಧಾರದಲ್ಲಿ ತಿಳಿಸಲಾಗಿದೆ. ಗೂಗಲ್​ನಿಂದ ಏರ್​ಟೆಲ್​ನಲ್ಲಿ 100 ಕೋಟಿ ಅಮೆರಿಕನ್ ಡಾಲರ್ ಅಥವಾ 7500 ಕೋಟಿ ರೂಪಾಯಿಯಷ್ಟು ಹೂಡಿಕೆ ಮಾಡುವುದಾಗಿ ಜನವರಿ 28ನೇ ತಾರೀಕು ಘೋಷಣೆ ಮಾಡಲಾಗಿತ್ತು. ಅದರಲ್ಲಿ ಈಕ್ವಿಟಿ ಹೂಡಿಕೆ ಮತ್ತು ವಾಣಿಜ್ಯ ಒಪ್ಪಂದ ಸಹ ಒಳಗೊಂಡಿತ್ತು.

ಪರಸ್ಪರ ಒಪ್ಪಿದ ನಿಬಂಧನೆಗಳ ಜತೆಗೆ ಮುಂದಿನ 5 ವರ್ಷಗಳಿಗೆ ಹಣಕಾಸು ಒದಗಿಸುವುದು ಸಹ ಸೇರಿತ್ತು. ಗೂಗಲ್ ಫಾರ್ ಇಂಡಿಯಾ ಡಿಜಿಟೈಸೇಷನ್ ಫಂಡ್ ಭಾಗವಾಗಿ ಏರ್​ಟೆಲ್​ ಸಹಭಾಗಿತ್ವದಲ್ಲಿ 100 ಕೋಟಿ ಅಮೆರಿಕನ್ ಡಾಲರ್​ ತನಕ ಹೂಡಿಕೆ ಮಾಡುವುದಾಗಿ ಗೂಗಲ್ ಹೇಳಿತ್ತು.

ಈ ಹೂಡಿಕೆಯಲ್ಲಿ 70 ಕೋಟಿ ಡಾಲರ್ ಅನ್ನು ಈಕ್ವಿಟಿ ರೂಪದಲ್ಲಿ ಏರ್​ಟೆಲ್​ನಲ್ಲಿ ಹೂಡಿಕೆ ಮಾಡುತ್ತದೆ. ಅಂದರೆ ಪ್ರತಿ ಷೇರಿಗೆ 734 ರೂಪಾಯಿಯಂತೆ ಖರೀದಿಸುತ್ತದೆ. ಇನ್ನು ಬಾಕಿ 30 ಕೋಟಿ ಡಾಲರ್ ವಾಣಿಜ್ಯ ಒಪ್ಪಂದಗಳ ಜಾರಿಗಾಗಿ ಹೂಡಿಕೆ ಮಾಡುತ್ತದೆ. ಅದರಲ್ಲಿ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಮೊಬೈಲ್ ಸಾಧನಗಳ ಉತ್ಪಾದನೆ, ಭಾರತದಾದ್ಯಂತ ಡಿಜಿಟಲ್ ಎಕೋಸಿಸ್ಟಮ್​ ಅಡಿಯಲ್ಲಿ ಡಿಜಿಟಲ್​ ಸಂಪರ್ಕಕ್ಕೆ ಪ್ರಯತ್ನಿಸುತ್ತದೆ.

ಇದರ ಜತೆಗೆ ಬಹುತೇಕ ಷೇರುದಾರರು ಏರ್​ಟೆಲ್​ನ ಪ್ರಸ್ತಾವ ಆದ 1.17 ಲಕ್ಷ ಕೋಟಿ ರೂಪಾಯಿಯನ್ನು ಅಂಗಸಂಸ್ಥೆಗಳಾದ ಇಂಡಸ್ ಟವರ್ಸ್, Nxtra ಮತ್ತು ಭಾರ್ತಿ ಹೆಕ್ಸಾಕಾಂಗಾಗಿ ವೆಚ್ಚ ಮಾಡುವುದಕ್ಕೆ ಅನುಮೋದನೆಯನ್ನು ನೀಡಿದರು.

ಇದನ್ನೂ ಓದಿ: Airtel Payments Bank: ಆರ್​ಬಿಐನಿಂದ ಶೆಡ್ಯೂಲ್ ಬ್ಯಾಂಕ್ ಸ್ಥಾನ ಪಡೆದ ಏರ್​ಟೆಲ್ ಪೇಮೆಂಟ್ಸ್ ಬ್ಯಾಂಕ್

Published On - 4:58 pm, Mon, 28 February 22

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು