AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shree Cements: ಶ್ರೀ ಸಿಮೆಂಟ್ಸ್ ವಿರುದ್ಧ 23,000 ಕೋಟಿ ತೆರಿಗೆ ವಂಚನೆ ಆರೋಪ; ಕುಸಿಯುತ್ತಿರುವ ಷೇರುಬೆಲೆ

Tax Evasion By Shree Cements: ಉತ್ತರಭಾರತದ ಅತಿದೊಡ್ಡ ಸಿಮೆಂಟ್ ಕಂಪನಿ ಶ್ರೀ ಸಿಮೆಂಟ್ಸ್ ಕೆಲವಾರು ವರ್ಷಗಳಿಂದ ಒಟ್ಟು 23,000 ಕೋಟಿ ರೂನಷ್ಟು ತೆರಿಗೆ ವಂಚನೆ ಎಸಗಿದೆ ಎಂದು ಎನ್​ಡಿಟಿವಿ ವರದಿಯೊಂದರಲ್ಲಿ ಆರೋಪಿಸಲಾಗಿದೆ.

Shree Cements: ಶ್ರೀ ಸಿಮೆಂಟ್ಸ್ ವಿರುದ್ಧ 23,000 ಕೋಟಿ ತೆರಿಗೆ ವಂಚನೆ ಆರೋಪ; ಕುಸಿಯುತ್ತಿರುವ ಷೇರುಬೆಲೆ
ಸಿಮೆಂಟ್ ಗೋಡೌನ್, ಸಾಂದರ್ಭಿಕ ಚಿತ್ರ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 26, 2023 | 12:53 PM

Share

ನವದೆಹಲಿ: ಉತ್ತರ ಭಾರತದ ಅತಿದೊಡ್ಡ ಸಿಮೆಂಟ್ ಕಂಪನಿ ಎನಿಸಿದ ಶ್ರೀ ಸಿಮೆಂಟ್ಸ್ (Shree Cements) ವಿರುದ್ಧ ಬಹಳ ಗಂಭೀರವೆನಿಸುವ ತೆರಿಗೆ ವಂಚನೆ ಆರೋಪ ಕೇಳಿಬಂದಿದೆ. ರಾಜಸ್ಥಾನ ಮೂಲದ ಶ್ರೀ ಸಿಮೆಂಟ್ ಸಾವಿರಾರು ಕೋಟಿ ರೂ ಮೊತ್ತದ ತೆರಿಗೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ರಾಜಸ್ಥಾನದ ಬೀವಾರ್, ಜೈಪುರ್, ಚಿತ್ತೋರಗಡ್ ಮತ್ತು ಅಜ್ಮೆರ್​ನಲ್ಲಿರುವ ಶ್ರೀ ಸಿಮೆಂಟ್ಸ್ ಸಂಸ್ಥೆಯ ಕಚೇರಿಗಳಲ್ಲಿ ತೆರಿಗೆ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಈ ಹಗರಣ ಬೆಳಕಿಗೆ ಬಂದಿದೆ. ಒಟ್ಟು 23,000 ಕೋಟಿ ರೂನಷ್ಟು ತೆರಿಗೆ ವಂಚನೆ ನಡೆಸಲಾಗಿದೆ ಎಂದು ಎನ್​ಡಿಟಿವಿ ವರದಿ ಪ್ರಕಟಿಸಿದೆ. ಇದು ನಿಜವೇ ಆಗಿದ್ದಲ್ಲಿ ಸಿಮೆಂಟ್ ಕಂಪನಿಯೊಂದು ಇಷ್ಟೊಂದು ಮೊತ್ತದ ತೆರಿಗೆ ವಂಚನೆ ಮಾಡಿ ಸಿಕ್ಕಿಬಿದ್ದಿರುವುದು ಇದೇ ಮೊದಲಾಗುತ್ತದೆ.

ಶ್ರೀ ಸಿಮೆಂಟ್ಸ್​ನ ಕಚೇರಿಗಳ ಮೇಲೆ ತೆರಿಗೆ ಶೋಧ ಕಾರ್ಯಾಚರಣೆ ನಡೆದ ಬೆನ್ನಲ್ಲೇ ಷೇರುಪೇಟೆಯಲ್ಲಿ ಶ್ರೀ ಸಿಮೆಂಟ್ಸ್ ಕಂಪನಿಯ ಷೇರುಗಳು ಕುಸಿಯತೊಡಗಿವೆ. ಜೂನ್ 26, ಬೆಳಗ್ಗೆ 25,145.25 ರುಪಾಯಿ ಬೆಲೆಯೊಂದಿಗೆ ಆರಂಭಗೊಂಡ ಶ್ರೀ ಸಿಮೆಂಟ್ಸ್ ಷೇರು ಒಂದು ಹಂತದಲ್ಲಿ 22,630.75 ರೂಗೆ ಕುಸಿದುಹೋಗಿತ್ತು. 2900 ರೂಗಿಂತ ಹೆಚ್ಚು ಮೊತ್ತದ ಕುಸಿತವಾಗಿತ್ತು. ಈ ವರದಿ ಪ್ರಕಟಿಸುವ ಹೊತ್ತಿನಲ್ಲಿ ಎನ್​ಎಸ್​ಇನಲ್ಲಿ ಶ್ರೀ ಸಿಮೆಂಟ್ಸ್​ನ ಷೇರುಬೆಲೆ 23,050 ರೂನಲ್ಲಿತ್ತು. ಮಾಮೂಲಿಯ ದಿನಗಳಲ್ಲಿ ದಿನವೊಂದಕ್ಕೆ ಸರಾಸರಿ 46,000 ಷೇರುಗಳು ಕೈಬದಲಾಯಿಸುತ್ತಿದ್ದವು. ಇವತ್ತು ಸೋಮವಾರ 85,000ಕ್ಕೂ ಹೆಚ್ಚು ಷೇರುಗಳ ವಹಿವಾಟು ನಡೆದಿದೆ.

ಇದನ್ನೂ ಓದಿGo First: ಮುಳುಗುತ್ತಿದ್ದವನಿಗೆ ಹುಲ್ಲುಕಡ್ಡಿ ಆಸರೆ; ಗೋಫಸ್ಟ್ ಏರ್​ಲೈನ್ಸ್ ನೆರವಿಗೆ ಬಂದ ಬ್ಯಾಂಕುಗಳು; 400 ಕೋಟಿ ರೂನಷ್ಟು ಹೊಸ ಸಾಲಕ್ಕೆ ಒಪ್ಪಿಗೆ

ಶ್ರೀ ಸಿಮೆಂಟ್ಸ್ ತೆರಿಗೆ ವಂಚನೆ ಏನು?

ನಕಲಿ ಒಪ್ಪಂದಗಳ ಮೂಲಕ ಶ್ರೀ ಸಿಮೆಂಟ್ಸ್ ಸಂಸ್ಥೆ ಪ್ರತೀ ವರ್ಷವೂ 1,200 ರಿಂದ 1,400 ಕೋಟಿ ರೂನಷ್ಟು ತೆರಿಗೆ ಹಣ ವಂಚಿಸುತ್ತಾ ಬಂದಿದೆ. ಇದರಿಂದ ಕೇಂದ್ರ ಸರ್ಕಾರ ಮತ್ತು ರಾಜಸ್ಥಾನ ಸರ್ಕಾರದ ಆದಾಯಕ್ಕೆ ಕೊಕ್ಕೆ ಬಿದ್ದಿದೆ ಎಂದು ಎನ್​ಡಿಟಿವಿ ವರದಿಗಾರ ತನ್ನ ಮೂಲವೊಂದನ್ನು ಉಲ್ಲೇಖಿಸುತ್ತಾ ಬರೆದಿದ್ದಾರೆ. ಆದರೆ, ತೆರಿಗೆ ಇಲಾಖೆಯಿಂದಾಗಲೀ, ರಾಜಸ್ಥಾನ ಸರ್ಕಾರದಿಂದಲಾಗಲೇ, ಕೇಂದ್ರದಿಂದಾಗಲೀ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

1979ರಲ್ಲಿ ರಾಜಸ್ಥಾನದಲ್ಲಿ ಆರಂಭಗೊಂಡ ಶ್ರೀ ಸಿಮೆಂಟ್ಸ್ ಕಂಪನಿ ಸದ್ಯ ಕೋಲ್ಕತಾದಲ್ಲಿ ಪ್ರಧಾನ ಕಚೇರಿ ಹೊಂದಿದೆ. ರಾಜಸ್ಥಾನ, ಉತ್ತರಾಖಂಡ್, ಹರ್ಯಾಣ, ಉತ್ತರಪ್ರದೇಶ, ಛತ್ತೀಸ್​ಗಡ ಮತ್ತು ಬಿಹಾರ ರಾಜ್ಯಗಳಲ್ಲಿ ಒಟ್ಟು 10ಕ್ಕೂ ಹೆಚ್ಚು ಸಿಮೆಂಟ್ ಉತ್ಪಾದಕ ಘಟಕಗಳನ್ನು ಹೊಂದಿದೆ. ವಿದ್ಯುತ್ ಘಟಕಗಳನ್ನೂ ಅದು ಹೊಂದಿದೆ.

ಇದನ್ನೂ ಓದಿFilm Scam: ನಕಲಿ ಸಿನಿಮಾ, ನಕಲಿ ವಿತರಕರ ಹೆಸರಲ್ಲಿ 1,500 ಕೋಟಿ ರೂ ಲಪಟಾಯಿಸಿಕೊಂಡಿತಾ ಎರೋಸ್? ಸೆಬಿ ತನಿಖೆಯಲ್ಲಿ ಕರ್ಮಕಾಂಡ ಬಯಲು

ಈಗ ಬಂದಿರುವ ತೆರಿಗೆ ವಂಚನೆ ಆರೋಪಗಳನ್ನು ಶ್ರೀ ಸಿಮೆಂಟ್ಸ್ ಸಂಸ್ಥೆ ತಳ್ಳಿಹಾಕಿದೆ. ತಮ್ಮ ಕಚೇರಿಗಳಲ್ಲಿ ತೆರಿಗೆ ಸಮೀಕ್ಷೆ ನಡೆಯುತ್ತಿರುವುದು ಒಪ್ಪಿಕೊಂಡ ಅವರು, ಸರ್ವೆ ಇನ್ನೂ ನಡೆಯುತ್ತಿದೆ. ಪೂರ್ಣಗೊಂಡಿಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವ ವರದಿಯಲ್ಲಿರುವ ಅಂಶಗಳು ಸತ್ಯಕ್ಕೆ ದೂರವಾದುದು ಎಂದು ಸಂಸ್ಥೆಯ ಆಡಳಿತ ಮಂಡಳಿ ಹೇಳಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?