AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಭಾರತ ಸಿಂಗಾಪುರ್ ಮಧ್ಯೆ ರಿಯಲ್ ಟೈಮ್ ಪೇಮೆಂಟ್ ಸಿಸ್ಟಂ ಹೊಂದಾಣಿಕೆ

UPI and PayNow: ಭಾರತದ ಯುಪಿಐ ಮತ್ತು ಸಿಂಗಾಪುರದ ಪೇನೌ ಎಂಬ ಎರಡು ಪೇಮೆಂಟ್ ವ್ಯವಸ್ಥೆಗಳ ಮಧ್ಯೆ ಹೊಂದಾಣಿಕೆಯ ಹೊಸ ವ್ಯವಸ್ಥೆ ತರಲಾಗಿದೆ. ಇದರಿಂದ ಎರಡೂ ದೇಶಗಳ ಜನರ ಮಧ್ಯೆ ಪೇಮೆಂಟ್ ಸಾಧ್ಯವಾಗಲಿದೆ.

ಸುಗ್ಗನಹಳ್ಳಿ ವಿಜಯಸಾರಥಿ
|

Updated on:Feb 21, 2023 | 12:07 PM

Share

ಭಾರತ ಮತ್ತು ಸಿಂಗಾಪುರ್ ಜನರು ಇನ್ಮುಂದೆ ಪರಸ್ಪರ ಹಣಕಾಸು ವಹಿವಾಟು ಸುಗಮವಾಗಿ ನಡೆಸಲು ಸಾಧ್ಯವಾಗಲಿದೆ. ಭಾರತದ ಯುಪಿಐ ಮತ್ತು ಸಿಂಗಾಪುರದ ಪೇನೌ ವ್ಯವಸ್ಥೆಯನ್ನು ಜೋಡಿಸಲಾಗಿದೆ. ಇದರಿಂದ ಒಂದು ದೇಶದಿಂದ ಇನ್ನೊಂದು ದೇಶಕ್ಕೆ ಜನರು ಈ ಹೊಸ ಹೊಂದಾಣಿಕೆ ವ್ಯವಸ್ಥೆ ಮೂಲಕ ಪಾವತಿ ಮಾಡಬಹುದಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಮತ್ತು ಸಿಂಗಾಪುರ ಹಣಕಾಸು ಪ್ರಾಧಿಕಾರ (Monetary Authority of Singapore) ನಿರ್ವಾಹಕ ನಿರ್ದೇಶಕ (MD) ರವಿ ಮೆನನ್ ಎರಡೂ ದೇಶಗಳ ಕ್ರಾಸ್ ಬಾರ್ಡರ್ ಕನೆಕ್ಟಿವಿಟಿ ವ್ಯವಸ್ಥೆಯನ್ನು ಅನಾವರಣಗೊಳಿಸಿದರು. ಭಾರತ ಮತ್ತು ಸಿಂಗಾಪುರದ ಪ್ರಧಾನಿಗಳಾದ ನರೇಂದ್ರ ಮೋದಿ ಮತ್ತು ಲೀ ಹ್ಸೀನ್ ಲೂಂಗ್ ಅವರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಣಕಾಸು ತಂತ್ರಜ್ಞಾನ ಕ್ಷೇತ್ರದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ದೇಶಗಳಲ್ಲಿ ಒಂದು. ಭಾರತದ ಡಿಜಿಟಲ್ ಪೇಮೆಂಟ್ ಸೌಕರ್ಯವನ್ನು ಜಾಗತಿಕ ಮಟ್ಟದಲ್ಲಿ ತಲುಪಿಸಲು ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಕಾರಣವಾಗಿದೆ. ಯುಪಿಐನ ಲಾಭ ಭಾರತಕ್ಕೆ ಮಾತ್ರವಲ್ಲ ಇತರ ದೇಶಗಳಿಗೂ ಸಿಗಲಿ ಎಂಬುದು ಪ್ರಧಾನಿಗಳ ಆಶಯ ಎಂದು ಕೇಂದ್ರ ಹಣಕಾಸು ಸಚಿವಾಲಯ ಇಂದು ಮಂಗಳವಾರ ಪತ್ರಿಕಾ ಹೇಳಿಕೆಯನ್ನೂ ಬಿಡುಗಡೆ ಮಾಡಿದೆ.

ಭಾರತದ ಯುಪಿಐ ಮತ್ತು ಸಿಂಗಾಪುರದ ಪೇನೌ ವ್ಯವಸ್ಥೆಗಳ ಮಧ್ಯೆ ಹೊಂದಾಣಿಕೆ ತಂದಿರುವುದು ಕ್ರಾಸ್​ಬಾರ್ಡರ್ ಪೇಮೆಂಟ್ ಸುಲಭವಾಗಲಿದೆ. ಅಂದರೆ ಸಿಂಗಾಪುರದಲ್ಲಿ ಕೆಲಸ ಮಾಡುವ ಭಾರತೀಯ ಮೂಲದ ಜನರು ತಮ್ಮ ಊರಿನ ಜನರೊಂದಿಗೆ ಪೇಮೆಂಟ್ ಮಾಡುವ ಕಾರ್ಯಕ್ಕೆ ಸಹಾಯಕವಾಗಲಿದೆ. ಈ ಮುಂಚೆಯಾದರೆ ಸಿಂಗಾಪುರದಿಂದ ಭಾರತಕ್ಕೆ ಜನರು ಹಣ ಕಳುಹಿಸಬೇಕಾದರೆ ರಿಮಿಟೆನ್ಸ್ ಶುಲ್ಕವಾಗಿ ಸಾಕಷ್ಟು ಹಣ ಕಟ್ಟಬೇಕಿತ್ತು. ಈಗ ಕಡಿಮೆ ವೆಚ್ಚದಲ್ಲಿ ಮನಿ ಟ್ರಾನ್ಸ್​ಫರ್ ಮಾಡಬಹುದಾಗಿದೆ.

Published On - 11:35 am, Tue, 21 February 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!