AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಭಾರತ ಸಿಂಗಾಪುರ್ ಮಧ್ಯೆ ರಿಯಲ್ ಟೈಮ್ ಪೇಮೆಂಟ್ ಸಿಸ್ಟಂ ಹೊಂದಾಣಿಕೆ

UPI and PayNow: ಭಾರತದ ಯುಪಿಐ ಮತ್ತು ಸಿಂಗಾಪುರದ ಪೇನೌ ಎಂಬ ಎರಡು ಪೇಮೆಂಟ್ ವ್ಯವಸ್ಥೆಗಳ ಮಧ್ಯೆ ಹೊಂದಾಣಿಕೆಯ ಹೊಸ ವ್ಯವಸ್ಥೆ ತರಲಾಗಿದೆ. ಇದರಿಂದ ಎರಡೂ ದೇಶಗಳ ಜನರ ಮಧ್ಯೆ ಪೇಮೆಂಟ್ ಸಾಧ್ಯವಾಗಲಿದೆ.

ಸುಗ್ಗನಹಳ್ಳಿ ವಿಜಯಸಾರಥಿ
|

Updated on:Feb 21, 2023 | 12:07 PM

Share

ಭಾರತ ಮತ್ತು ಸಿಂಗಾಪುರ್ ಜನರು ಇನ್ಮುಂದೆ ಪರಸ್ಪರ ಹಣಕಾಸು ವಹಿವಾಟು ಸುಗಮವಾಗಿ ನಡೆಸಲು ಸಾಧ್ಯವಾಗಲಿದೆ. ಭಾರತದ ಯುಪಿಐ ಮತ್ತು ಸಿಂಗಾಪುರದ ಪೇನೌ ವ್ಯವಸ್ಥೆಯನ್ನು ಜೋಡಿಸಲಾಗಿದೆ. ಇದರಿಂದ ಒಂದು ದೇಶದಿಂದ ಇನ್ನೊಂದು ದೇಶಕ್ಕೆ ಜನರು ಈ ಹೊಸ ಹೊಂದಾಣಿಕೆ ವ್ಯವಸ್ಥೆ ಮೂಲಕ ಪಾವತಿ ಮಾಡಬಹುದಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಮತ್ತು ಸಿಂಗಾಪುರ ಹಣಕಾಸು ಪ್ರಾಧಿಕಾರ (Monetary Authority of Singapore) ನಿರ್ವಾಹಕ ನಿರ್ದೇಶಕ (MD) ರವಿ ಮೆನನ್ ಎರಡೂ ದೇಶಗಳ ಕ್ರಾಸ್ ಬಾರ್ಡರ್ ಕನೆಕ್ಟಿವಿಟಿ ವ್ಯವಸ್ಥೆಯನ್ನು ಅನಾವರಣಗೊಳಿಸಿದರು. ಭಾರತ ಮತ್ತು ಸಿಂಗಾಪುರದ ಪ್ರಧಾನಿಗಳಾದ ನರೇಂದ್ರ ಮೋದಿ ಮತ್ತು ಲೀ ಹ್ಸೀನ್ ಲೂಂಗ್ ಅವರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಣಕಾಸು ತಂತ್ರಜ್ಞಾನ ಕ್ಷೇತ್ರದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ದೇಶಗಳಲ್ಲಿ ಒಂದು. ಭಾರತದ ಡಿಜಿಟಲ್ ಪೇಮೆಂಟ್ ಸೌಕರ್ಯವನ್ನು ಜಾಗತಿಕ ಮಟ್ಟದಲ್ಲಿ ತಲುಪಿಸಲು ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಕಾರಣವಾಗಿದೆ. ಯುಪಿಐನ ಲಾಭ ಭಾರತಕ್ಕೆ ಮಾತ್ರವಲ್ಲ ಇತರ ದೇಶಗಳಿಗೂ ಸಿಗಲಿ ಎಂಬುದು ಪ್ರಧಾನಿಗಳ ಆಶಯ ಎಂದು ಕೇಂದ್ರ ಹಣಕಾಸು ಸಚಿವಾಲಯ ಇಂದು ಮಂಗಳವಾರ ಪತ್ರಿಕಾ ಹೇಳಿಕೆಯನ್ನೂ ಬಿಡುಗಡೆ ಮಾಡಿದೆ.

ಭಾರತದ ಯುಪಿಐ ಮತ್ತು ಸಿಂಗಾಪುರದ ಪೇನೌ ವ್ಯವಸ್ಥೆಗಳ ಮಧ್ಯೆ ಹೊಂದಾಣಿಕೆ ತಂದಿರುವುದು ಕ್ರಾಸ್​ಬಾರ್ಡರ್ ಪೇಮೆಂಟ್ ಸುಲಭವಾಗಲಿದೆ. ಅಂದರೆ ಸಿಂಗಾಪುರದಲ್ಲಿ ಕೆಲಸ ಮಾಡುವ ಭಾರತೀಯ ಮೂಲದ ಜನರು ತಮ್ಮ ಊರಿನ ಜನರೊಂದಿಗೆ ಪೇಮೆಂಟ್ ಮಾಡುವ ಕಾರ್ಯಕ್ಕೆ ಸಹಾಯಕವಾಗಲಿದೆ. ಈ ಮುಂಚೆಯಾದರೆ ಸಿಂಗಾಪುರದಿಂದ ಭಾರತಕ್ಕೆ ಜನರು ಹಣ ಕಳುಹಿಸಬೇಕಾದರೆ ರಿಮಿಟೆನ್ಸ್ ಶುಲ್ಕವಾಗಿ ಸಾಕಷ್ಟು ಹಣ ಕಟ್ಟಬೇಕಿತ್ತು. ಈಗ ಕಡಿಮೆ ವೆಚ್ಚದಲ್ಲಿ ಮನಿ ಟ್ರಾನ್ಸ್​ಫರ್ ಮಾಡಬಹುದಾಗಿದೆ.

Published On - 11:35 am, Tue, 21 February 23

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​