AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಭಾರತ ಸಿಂಗಾಪುರ್ ಮಧ್ಯೆ ರಿಯಲ್ ಟೈಮ್ ಪೇಮೆಂಟ್ ಸಿಸ್ಟಂ ಹೊಂದಾಣಿಕೆ

UPI and PayNow: ಭಾರತದ ಯುಪಿಐ ಮತ್ತು ಸಿಂಗಾಪುರದ ಪೇನೌ ಎಂಬ ಎರಡು ಪೇಮೆಂಟ್ ವ್ಯವಸ್ಥೆಗಳ ಮಧ್ಯೆ ಹೊಂದಾಣಿಕೆಯ ಹೊಸ ವ್ಯವಸ್ಥೆ ತರಲಾಗಿದೆ. ಇದರಿಂದ ಎರಡೂ ದೇಶಗಳ ಜನರ ಮಧ್ಯೆ ಪೇಮೆಂಟ್ ಸಾಧ್ಯವಾಗಲಿದೆ.

ಸುಗ್ಗನಹಳ್ಳಿ ವಿಜಯಸಾರಥಿ
|

Updated on:Feb 21, 2023 | 12:07 PM

Share

ಭಾರತ ಮತ್ತು ಸಿಂಗಾಪುರ್ ಜನರು ಇನ್ಮುಂದೆ ಪರಸ್ಪರ ಹಣಕಾಸು ವಹಿವಾಟು ಸುಗಮವಾಗಿ ನಡೆಸಲು ಸಾಧ್ಯವಾಗಲಿದೆ. ಭಾರತದ ಯುಪಿಐ ಮತ್ತು ಸಿಂಗಾಪುರದ ಪೇನೌ ವ್ಯವಸ್ಥೆಯನ್ನು ಜೋಡಿಸಲಾಗಿದೆ. ಇದರಿಂದ ಒಂದು ದೇಶದಿಂದ ಇನ್ನೊಂದು ದೇಶಕ್ಕೆ ಜನರು ಈ ಹೊಸ ಹೊಂದಾಣಿಕೆ ವ್ಯವಸ್ಥೆ ಮೂಲಕ ಪಾವತಿ ಮಾಡಬಹುದಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಮತ್ತು ಸಿಂಗಾಪುರ ಹಣಕಾಸು ಪ್ರಾಧಿಕಾರ (Monetary Authority of Singapore) ನಿರ್ವಾಹಕ ನಿರ್ದೇಶಕ (MD) ರವಿ ಮೆನನ್ ಎರಡೂ ದೇಶಗಳ ಕ್ರಾಸ್ ಬಾರ್ಡರ್ ಕನೆಕ್ಟಿವಿಟಿ ವ್ಯವಸ್ಥೆಯನ್ನು ಅನಾವರಣಗೊಳಿಸಿದರು. ಭಾರತ ಮತ್ತು ಸಿಂಗಾಪುರದ ಪ್ರಧಾನಿಗಳಾದ ನರೇಂದ್ರ ಮೋದಿ ಮತ್ತು ಲೀ ಹ್ಸೀನ್ ಲೂಂಗ್ ಅವರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಣಕಾಸು ತಂತ್ರಜ್ಞಾನ ಕ್ಷೇತ್ರದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ದೇಶಗಳಲ್ಲಿ ಒಂದು. ಭಾರತದ ಡಿಜಿಟಲ್ ಪೇಮೆಂಟ್ ಸೌಕರ್ಯವನ್ನು ಜಾಗತಿಕ ಮಟ್ಟದಲ್ಲಿ ತಲುಪಿಸಲು ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಕಾರಣವಾಗಿದೆ. ಯುಪಿಐನ ಲಾಭ ಭಾರತಕ್ಕೆ ಮಾತ್ರವಲ್ಲ ಇತರ ದೇಶಗಳಿಗೂ ಸಿಗಲಿ ಎಂಬುದು ಪ್ರಧಾನಿಗಳ ಆಶಯ ಎಂದು ಕೇಂದ್ರ ಹಣಕಾಸು ಸಚಿವಾಲಯ ಇಂದು ಮಂಗಳವಾರ ಪತ್ರಿಕಾ ಹೇಳಿಕೆಯನ್ನೂ ಬಿಡುಗಡೆ ಮಾಡಿದೆ.

ಭಾರತದ ಯುಪಿಐ ಮತ್ತು ಸಿಂಗಾಪುರದ ಪೇನೌ ವ್ಯವಸ್ಥೆಗಳ ಮಧ್ಯೆ ಹೊಂದಾಣಿಕೆ ತಂದಿರುವುದು ಕ್ರಾಸ್​ಬಾರ್ಡರ್ ಪೇಮೆಂಟ್ ಸುಲಭವಾಗಲಿದೆ. ಅಂದರೆ ಸಿಂಗಾಪುರದಲ್ಲಿ ಕೆಲಸ ಮಾಡುವ ಭಾರತೀಯ ಮೂಲದ ಜನರು ತಮ್ಮ ಊರಿನ ಜನರೊಂದಿಗೆ ಪೇಮೆಂಟ್ ಮಾಡುವ ಕಾರ್ಯಕ್ಕೆ ಸಹಾಯಕವಾಗಲಿದೆ. ಈ ಮುಂಚೆಯಾದರೆ ಸಿಂಗಾಪುರದಿಂದ ಭಾರತಕ್ಕೆ ಜನರು ಹಣ ಕಳುಹಿಸಬೇಕಾದರೆ ರಿಮಿಟೆನ್ಸ್ ಶುಲ್ಕವಾಗಿ ಸಾಕಷ್ಟು ಹಣ ಕಟ್ಟಬೇಕಿತ್ತು. ಈಗ ಕಡಿಮೆ ವೆಚ್ಚದಲ್ಲಿ ಮನಿ ಟ್ರಾನ್ಸ್​ಫರ್ ಮಾಡಬಹುದಾಗಿದೆ.

Published On - 11:35 am, Tue, 21 February 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು