Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಾಲ್ ಸೇವಿಂಗ್ಸ್ ಸ್ಕೀಮ್​ಗಳಿಗೆ ಆಧಾರ್, ಪ್ಯಾನ್ ಲಿಂಕ್ ಮಾಡುವುದಕ್ಕೆ ಸೆಪ್ಟೆಂಬರ್ 30 ಡೆಡ್​ಲೈನ್

Deadline To Submit Aadhaar For Savings Schemes: ಸುಕನ್ಯ ಸಮೃದ್ಧಿ ಯೋಜನೆ, ಪಿಪಿಎಫ್, ನ್ಯಾಷನಲ್ ಸೇವಿಂಗ್ಸ್ ಸರ್ಟಿಫಿಕೇಟ್ ಇತ್ಯಾದಿ ಸಣ್ಣ ಉಳಿತಾಯ ಯೋಜನೆಗಳಿಗೆ ಆಧಾರ್ ಮತ್ತು ಪ್ಯಾನ್ ನಂಬರ್ ಸಲ್ಲಿಸುವುದನ್ನು ಕಡ್ಡಾಯ ಮಾಡಲಾಗಿದೆ. ಆಧಾರ್ ಸಲ್ಲಿಸದೇ ಈಗಾಗಲೇ ಯೋಜನೆ ಪಡೆದಿರುವವರು ಆಧಾರ್ ಸಲ್ಲಿಸಲು ಸೆಪ್ಟೆಂಬರ್ 30ರವರೆಗೆ ಕಾಲಾವಕಾಶ ಇದೆ. ಆ ಗಡುವು ಬಳಿಕ ಇನ್ನೂ ಯಾರಾದರೂ ಆಧಾರ್ ಸಲ್ಲಿಸಿಲ್ಲವಾದರೆ ಯೋಜನೆಯ ಹಣ ಫ್ರೀಜ್ ಆಗುತ್ತದೆ.

ಸ್ಮಾಲ್ ಸೇವಿಂಗ್ಸ್ ಸ್ಕೀಮ್​ಗಳಿಗೆ ಆಧಾರ್, ಪ್ಯಾನ್ ಲಿಂಕ್ ಮಾಡುವುದಕ್ಕೆ ಸೆಪ್ಟೆಂಬರ್ 30 ಡೆಡ್​ಲೈನ್
ಆಧಾರ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 20, 2023 | 4:41 PM

ನವದೆಹಲಿ, ಸೆಪ್ಟೆಂಬರ್ 20: ಪಬ್ಲಿಕ್ ಪ್ರಾವಿಡೆಂಟ್ ಫಂಡ್ (PPF), ನ್ಯಾಷನಲ್ ಸೇವಿಂಗ್ಸ್ ಸರ್ಟಿಫಿಕೇಟ್ (NSC), ಹಿರಿಯ ನಾಗರಿಕರ ಸೇವಿಂಗ್ಸ್ ಸ್ಕೀಮ್ (NCSS) ಇತ್ಯಾದಿ ಸಣ್ಣ ಉಳಿತಾಯ ಯೋಜನೆಗಳನ್ನು ಹೊಂದಿರುವವರ ಗಮನಕ್ಕೆ ಈ ಸುದ್ದಿ. ನೀವು ಯಾವುದಾದರೂ ಉಳಿತಾಯ ಯೋಜನೆಗಳನ್ನು ಮಾಡಿಸಿದ್ದರೆ, ಆದಷ್ಟೂ ಬೇಗ ಅವಕ್ಕೆ ನಿಮ್ಮ ಆಧಾರ್ ಮತ್ತು ಪ್ಯಾನ್ ನಂಬರ್ ಲಿಂಕ್ ಮಾಡಿ. ಸೆಪ್ಟೆಂಬರ್ 30ರವರೆಗೂ ಗಡುವು ಇದ್ದು ಕೇವಲ 9 ದಿನ ಮಾತ್ರ ಬಾಕಿ ಇದೆ.

ಕೇಂದ್ರ ಹಣಕಾಸು ಸಚಿವಾಲಯ 2023ರ ಮಾರ್ಚ್ 31ರಂದು ಹೊರಡಿಸಿದ ಅಧಿಸೂಚನೆ ಪ್ರಕಾರ ಪಿಪಿಎಫ್, ಎನ್​ಎಸ್​ಸಿ ಮತ್ತಿತರ ಸ್ಮಾಲ್ ಸೇವಿಂಗ್ ಸ್ಕೀಮ್​ಗಳಿಗೆ ಆಧಾರ್ ಮತ್ತು ಪ್ಯಾನ್ ಅನ್ನು ಸಲ್ಲಿಸುವುದು ಕಡ್ಡಾಯ. ಹೊಸದಾಗಿ ಸ್ಕೀಮ್ ಪಡೆಯುವವರು ಮಾತ್ರವಲ್ಲ, ಈಗಾಗಲೇ ಆ ಯೋಜನೆಗಳನ್ನು ಮಾಡಿಸಿದ್ದವರೂ ಕೂಡ ಆಧಾರ್ ಮತ್ತು ಪ್ಯಾನ್ ಅನ್ನು ಸಲ್ಲಿಸಬೇಕಾಗುತ್ತದೆ. ಸೆಪ್ಟೆಂಬರ್ 30ರೊಳಗೆ ನೀವು ಸ್ಕೀಮ್ ಪಡೆದಿರುವ ಅಂಚೆ ಕಚೇರಿ ಅಥವಾ ಬ್ಯಾಂಕ್ ಶಾಖಾ ಕಚೇರಿಗೆ ಹೋಗಿ ಆಧಾರ್ ನಂಬರ್ ಅನ್ನು ನೀಡಬೇಕಾಗುತ್ತದೆ.

ಇದನ್ನೂ ಓದಿ: World’s Best Hotel: ಇಟಲಿಯ ಪಸ್ಸಾಲಾಕ್ವ ವಿಶ್ವದ ಅತ್ಯುತ್ತಮ ಹೋಟೆಲ್; ಟಾಪ್ 50 ಪಟ್ಟಿಯಲ್ಲಿ ಭಾರತದ ಏಕೈಕ ಹೋಟೆಲ್

ಆಧಾರ್ ಸಲ್ಲಿಸದಿದ್ದರೆ ಏನಾಗುತ್ತದೆ?

ಸಣ್ಣ ಉಳಿತಾಯ ಯೋಜನೆಗಳಿಗೆ ಆಧಾರ್ ಮತ್ತು ಪ್ಯಾನ್ ನಂಬರ್ ಅನ್ನು ನೀಡದೇ ಇದ್ದರೆ ಹೂಡಿಕೆ ಸ್ಥಗಿತಗೊಳ್ಳುತ್ತದೆ. ಅಂದರೆ ಈ ಸ್ಕೀಮ್​ಗಳಲ್ಲಿ ತೊಡಗಿಸಿರುವ ನಿಮ್ಮ ಹಣ ಫ್ರೀಜ್ ಆಗುತ್ತದೆ. ಅದನ್ನು ನೀವು ವಿತ್​ಡ್ರಾ ಮಾಡಲು ಆಗುವುದಿಲ್ಲ. ಬಡ್ಡಿ ಹಣವೂ ಜಮೆ ಆಗುವುದಿಲ್ಲ. ನೀವು ಯೋಜನೆಯಲ್ಲಿ ಹಣ ಠೇವಣಿ ಇಡುವುದಕ್ಕೂ ನಿರ್ಬಂಧ ಇರುತ್ತದೆ.

ಸಣ್ಣ ಉಳಿತಾಯ ಯೋಜನೆಗಳು ಸಾಕಷ್ಟು ಜನಪ್ರಿಯವಾಗುತ್ತಿವೆ. ಈ ಹಿಂದೆ ಸ್ಕೀಮ್​ಗಳನ್ನು ಪಡೆಯಲು ಆಧಾರ್ ಕಡ್ಡಾಯ ಇರಲಿಲ್ಲ. ಬಹಳಷ್ಟು ಮಂದಿ ಆಧಾರ್ ಸಲ್ಲಿಸದೆಯೇ ಯೋಜನೆ ಆರಂಭಿಸಿರುವುದುಂಟು. ಇದೀಗ ಆಧಾರ್ ಮತ್ತು ಪ್ಯಾನ್ ಸಲ್ಲಿಸುವುದು ಕಡ್ಡಾಯಪಡಿಸಲಾಗಿದೆ.

ಇದನ್ನೂ ಓದಿ: ಪಿಎಂ ಕಿಸಾನ್ ರಿನ್ ಪೋರ್ಟಲ್​ಗೆ ಚಾಲನೆ; ಏನಿದು ರೈತರ ಹೊಸ ಪ್ಲಾಟ್​ಫಾರ್ಮ್?

ನಿಮ್ಮ ಆಧಾರ್​ಗೆ ಪ್ಯಾನ್ ನಂಬರ್ ಲಿಂಕ್ ಮಾಡಿದ್ದರೆ, ಕೇವಲ ಆಧಾರ್ ನಂಬರ್ ಮಾತ್ರವೇ ಕೊಟ್ಟರೂ ಆಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ