AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rasna Founder: ರಸ್ನಾ ಸಂಸ್ಥಾಪಕ ಅರೀಜ್ ಫಿರೋಜ್​ಶಾ ಖಂಬಾಟ್ ನಿಧನ

Rasna Founder Areez Pirojshaw Khambatta: ಅರೀಜ್ ಅವರು ತಂಪು ಪಾನೀಯದ ಎಸೆನ್ಸ್ ರಸ್ನಾವನ್ನು ಮಾರುಕಟ್ಟೆಗೆ ಪರಿಚಯಿಸುವ ಮೂಲಕವೇ ಪ್ರಸಿದ್ಧರಾಗಿದ್ದರು. ಪ್ರಸ್ತುತ ದೇಶದ 18 ಲಕ್ಷ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ರಸ್ನಾ ಮಾರಾಟವಾಗುತ್ತಿದೆ.

Rasna Founder: ರಸ್ನಾ ಸಂಸ್ಥಾಪಕ ಅರೀಜ್ ಫಿರೋಜ್​ಶಾ ಖಂಬಾಟ್ ನಿಧನ
ರಸ್ನಾ ಬ್ರ್ಯಾಂಡ್ ಮತ್ತು ಅರೀಜ್ ಫಿರೋಜ್​ಶಾ ಖಂಬಾಟ್
TV9 Web
| Updated By: Digi Tech Desk|

Updated on:Nov 21, 2022 | 4:26 PM

Share

ನವದೆಹಲಿ: ದೇಶದ ಖ್ಯಾತ ತಂಪು ಪಾನೀಯ (Soft Drink) ಬ್ರ್ಯಾಂಡ್ ರಸ್ನಾವನ್ನು (Rasna) ಜನರಿಗೆ ಪರಿಚಯಿಸಿದ್ದ ರಸ್ನಾ ಸಮೂಹದ (Rasna Group) ಸಂಸ್ಥಾಪಕ ಅರೀಜ್ ಫಿರೋಜ್​ಶಾ ಖಂಬಾಟ್ ಸೋಮವಾರ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಅವರು ‘ಅರೀಜ್ ಖಂಬಾಟ್ ಬೆನಿವೊಲೆಂಟ್​ ಟ್ರಸ್ಟ್’ನ ಅಧ್ಯಕ್ಷರೂ ಆಗಿದ್ದರು. ‘ಪಾರ್ಸಿ ಇರಾನಿ ಝಾರ್ಥೋಸ್ಟಿಸ್‌’ನ ವಿಶ್ವ ಒಕ್ಕೂಟದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

‘ಅರೀಜ್ ಫಿರೋಜ್​ಶಾ ಅವರು ಭಾರತೀಯ ಕೈಗಾರಿಕೆ, ಉದ್ಯಮ, ಸಾಮಾಜಿಕ ಅಭಿವೃದ್ಧಿಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಸಮಾಜ ಸೇವೆಯ ಮೂಲಕವೂ ಪ್ರಸಿದ್ಧರಾಗಿದ್ದರು’ ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.

ವಿಶ್ವದ ಪ್ರಮುಖ ಬ್ರ್ಯಾಂಡ್ ರಸ್ನಾ

ಅರೀಜ್ ಅವರು ತಂಪು ಪಾನೀಯದ ಎಸೆನ್ಸ್ ರಸ್ನಾವನ್ನು ಮಾರುಕಟ್ಟೆಗೆ ಪರಿಚಯಿಸುವ ಮೂಲಕವೇ ಪ್ರಸಿದ್ಧರಾಗಿದ್ದರು. ಪ್ರಸ್ತುತ ದೇಶದ 18 ಲಕ್ಷ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ರಸ್ನಾ ಮಾರಾಟವಾಗುತ್ತಿದೆ. ಪ್ರಸ್ತುತ ‘ರಸ್ನಾ’ ವಿಶ್ವದ ಅತಿದೊಡ್ಡ ತಂಪು ಪಾನೀಯ ಎಸೆನ್ಸ್ ತಯಾರಿಕಾ ಕಂಪನಿಯಾಗಿದೆ. ಸುಮಾರು 60 ದೇಶಗಳಲ್ಲಿ ರಸ್ನಾ ಮಾರಾಟವಾಗುತ್ತಿದೆ. ಪಾನೀಯ ತಯಾರಿಕೆ ಮತ್ತು ಮಾರಾಟ ಕ್ಷೇತ್ರದ ಬಹುರಾಷ್ಟ್ರೀಯ ಕಂಪನಿಗಳ ಪೈಕಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದೆ.

ಇತರ ತಂಪು ಪಾನೀಯಗಳ ದರ ಗಗನಕ್ಕೇರಿದ್ದ ಸಂದರ್ಭದಲ್ಲಿ, 1970ರಲ್ಲಿ ಕೈಗೆಟಕುವ ದರದಲ್ಲಿ ರಸ್ನಾ ತಂಪು ಪಾನೀಯವನ್ನು ಮಾರುಕಟ್ಟೆಗೆ ಪರಿಚಯಿಸಿದ್ದರು ಅರೀಜ್ ಫಿರೋಜ್​ಶಾ ಖಂಬಾಟ್. 5 ರೂ. ಮೊತ್ತದ ಒಂದು ಪ್ಯಾಕ್​ ರಸ್ನಾದಿಂದ ಸುಮಾರು 32 ಗ್ಲಾಸ್ ತಂಪು ಪಾನೀಯ ತಯಾರಿಸಬಹುದಾಗಿತ್ತು. ನಂತರ ‘ಐ ಲವ್ ಯೂ ರಸ್ನಾ’ ಎಂಬ ಧ್ಯೇಯದೊಂದಿಗೆ 80ರ ದಶಕದಲ್ಲಿ ಮಾರುಕಟ್ಟೆಯಲ್ಲಿ ದೊಡ್ಡ ಮಟ್ಟದ ಅಭಿಯಾನ ಆರಂಭಿಸಿದ್ದ ರಸ್ನಾ ಇಂದಿಗೂ ಮಾರುಕಟ್ಟೆಯಲ್ಲಿ ಜನಪ್ರಿಯತೆ ಉಳಿಸಿಕೊಂಡಿದೆ ಎಂದು ಕಂಪನಿ ತಿಳಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:14 pm, Mon, 21 November 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!