AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rasna Founder: ರಸ್ನಾ ಸಂಸ್ಥಾಪಕ ಅರೀಜ್ ಫಿರೋಜ್​ಶಾ ಖಂಬಾಟ್ ನಿಧನ

Rasna Founder Areez Pirojshaw Khambatta: ಅರೀಜ್ ಅವರು ತಂಪು ಪಾನೀಯದ ಎಸೆನ್ಸ್ ರಸ್ನಾವನ್ನು ಮಾರುಕಟ್ಟೆಗೆ ಪರಿಚಯಿಸುವ ಮೂಲಕವೇ ಪ್ರಸಿದ್ಧರಾಗಿದ್ದರು. ಪ್ರಸ್ತುತ ದೇಶದ 18 ಲಕ್ಷ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ರಸ್ನಾ ಮಾರಾಟವಾಗುತ್ತಿದೆ.

Rasna Founder: ರಸ್ನಾ ಸಂಸ್ಥಾಪಕ ಅರೀಜ್ ಫಿರೋಜ್​ಶಾ ಖಂಬಾಟ್ ನಿಧನ
ರಸ್ನಾ ಬ್ರ್ಯಾಂಡ್ ಮತ್ತು ಅರೀಜ್ ಫಿರೋಜ್​ಶಾ ಖಂಬಾಟ್
TV9 Web
| Edited By: |

Updated on:Nov 21, 2022 | 4:26 PM

Share

ನವದೆಹಲಿ: ದೇಶದ ಖ್ಯಾತ ತಂಪು ಪಾನೀಯ (Soft Drink) ಬ್ರ್ಯಾಂಡ್ ರಸ್ನಾವನ್ನು (Rasna) ಜನರಿಗೆ ಪರಿಚಯಿಸಿದ್ದ ರಸ್ನಾ ಸಮೂಹದ (Rasna Group) ಸಂಸ್ಥಾಪಕ ಅರೀಜ್ ಫಿರೋಜ್​ಶಾ ಖಂಬಾಟ್ ಸೋಮವಾರ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಅವರು ‘ಅರೀಜ್ ಖಂಬಾಟ್ ಬೆನಿವೊಲೆಂಟ್​ ಟ್ರಸ್ಟ್’ನ ಅಧ್ಯಕ್ಷರೂ ಆಗಿದ್ದರು. ‘ಪಾರ್ಸಿ ಇರಾನಿ ಝಾರ್ಥೋಸ್ಟಿಸ್‌’ನ ವಿಶ್ವ ಒಕ್ಕೂಟದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

‘ಅರೀಜ್ ಫಿರೋಜ್​ಶಾ ಅವರು ಭಾರತೀಯ ಕೈಗಾರಿಕೆ, ಉದ್ಯಮ, ಸಾಮಾಜಿಕ ಅಭಿವೃದ್ಧಿಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಸಮಾಜ ಸೇವೆಯ ಮೂಲಕವೂ ಪ್ರಸಿದ್ಧರಾಗಿದ್ದರು’ ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.

ವಿಶ್ವದ ಪ್ರಮುಖ ಬ್ರ್ಯಾಂಡ್ ರಸ್ನಾ

ಅರೀಜ್ ಅವರು ತಂಪು ಪಾನೀಯದ ಎಸೆನ್ಸ್ ರಸ್ನಾವನ್ನು ಮಾರುಕಟ್ಟೆಗೆ ಪರಿಚಯಿಸುವ ಮೂಲಕವೇ ಪ್ರಸಿದ್ಧರಾಗಿದ್ದರು. ಪ್ರಸ್ತುತ ದೇಶದ 18 ಲಕ್ಷ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ರಸ್ನಾ ಮಾರಾಟವಾಗುತ್ತಿದೆ. ಪ್ರಸ್ತುತ ‘ರಸ್ನಾ’ ವಿಶ್ವದ ಅತಿದೊಡ್ಡ ತಂಪು ಪಾನೀಯ ಎಸೆನ್ಸ್ ತಯಾರಿಕಾ ಕಂಪನಿಯಾಗಿದೆ. ಸುಮಾರು 60 ದೇಶಗಳಲ್ಲಿ ರಸ್ನಾ ಮಾರಾಟವಾಗುತ್ತಿದೆ. ಪಾನೀಯ ತಯಾರಿಕೆ ಮತ್ತು ಮಾರಾಟ ಕ್ಷೇತ್ರದ ಬಹುರಾಷ್ಟ್ರೀಯ ಕಂಪನಿಗಳ ಪೈಕಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದೆ.

ಇತರ ತಂಪು ಪಾನೀಯಗಳ ದರ ಗಗನಕ್ಕೇರಿದ್ದ ಸಂದರ್ಭದಲ್ಲಿ, 1970ರಲ್ಲಿ ಕೈಗೆಟಕುವ ದರದಲ್ಲಿ ರಸ್ನಾ ತಂಪು ಪಾನೀಯವನ್ನು ಮಾರುಕಟ್ಟೆಗೆ ಪರಿಚಯಿಸಿದ್ದರು ಅರೀಜ್ ಫಿರೋಜ್​ಶಾ ಖಂಬಾಟ್. 5 ರೂ. ಮೊತ್ತದ ಒಂದು ಪ್ಯಾಕ್​ ರಸ್ನಾದಿಂದ ಸುಮಾರು 32 ಗ್ಲಾಸ್ ತಂಪು ಪಾನೀಯ ತಯಾರಿಸಬಹುದಾಗಿತ್ತು. ನಂತರ ‘ಐ ಲವ್ ಯೂ ರಸ್ನಾ’ ಎಂಬ ಧ್ಯೇಯದೊಂದಿಗೆ 80ರ ದಶಕದಲ್ಲಿ ಮಾರುಕಟ್ಟೆಯಲ್ಲಿ ದೊಡ್ಡ ಮಟ್ಟದ ಅಭಿಯಾನ ಆರಂಭಿಸಿದ್ದ ರಸ್ನಾ ಇಂದಿಗೂ ಮಾರುಕಟ್ಟೆಯಲ್ಲಿ ಜನಪ್ರಿಯತೆ ಉಳಿಸಿಕೊಂಡಿದೆ ಎಂದು ಕಂಪನಿ ತಿಳಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:14 pm, Mon, 21 November 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ