AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rasna Founder: ರಸ್ನಾ ಸಂಸ್ಥಾಪಕ ಅರೀಜ್ ಫಿರೋಜ್​ಶಾ ಖಂಬಾಟ್ ನಿಧನ

Rasna Founder Areez Pirojshaw Khambatta: ಅರೀಜ್ ಅವರು ತಂಪು ಪಾನೀಯದ ಎಸೆನ್ಸ್ ರಸ್ನಾವನ್ನು ಮಾರುಕಟ್ಟೆಗೆ ಪರಿಚಯಿಸುವ ಮೂಲಕವೇ ಪ್ರಸಿದ್ಧರಾಗಿದ್ದರು. ಪ್ರಸ್ತುತ ದೇಶದ 18 ಲಕ್ಷ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ರಸ್ನಾ ಮಾರಾಟವಾಗುತ್ತಿದೆ.

Rasna Founder: ರಸ್ನಾ ಸಂಸ್ಥಾಪಕ ಅರೀಜ್ ಫಿರೋಜ್​ಶಾ ಖಂಬಾಟ್ ನಿಧನ
ರಸ್ನಾ ಬ್ರ್ಯಾಂಡ್ ಮತ್ತು ಅರೀಜ್ ಫಿರೋಜ್​ಶಾ ಖಂಬಾಟ್
TV9 Web
| Edited By: |

Updated on:Nov 21, 2022 | 4:26 PM

Share

ನವದೆಹಲಿ: ದೇಶದ ಖ್ಯಾತ ತಂಪು ಪಾನೀಯ (Soft Drink) ಬ್ರ್ಯಾಂಡ್ ರಸ್ನಾವನ್ನು (Rasna) ಜನರಿಗೆ ಪರಿಚಯಿಸಿದ್ದ ರಸ್ನಾ ಸಮೂಹದ (Rasna Group) ಸಂಸ್ಥಾಪಕ ಅರೀಜ್ ಫಿರೋಜ್​ಶಾ ಖಂಬಾಟ್ ಸೋಮವಾರ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಅವರು ‘ಅರೀಜ್ ಖಂಬಾಟ್ ಬೆನಿವೊಲೆಂಟ್​ ಟ್ರಸ್ಟ್’ನ ಅಧ್ಯಕ್ಷರೂ ಆಗಿದ್ದರು. ‘ಪಾರ್ಸಿ ಇರಾನಿ ಝಾರ್ಥೋಸ್ಟಿಸ್‌’ನ ವಿಶ್ವ ಒಕ್ಕೂಟದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

‘ಅರೀಜ್ ಫಿರೋಜ್​ಶಾ ಅವರು ಭಾರತೀಯ ಕೈಗಾರಿಕೆ, ಉದ್ಯಮ, ಸಾಮಾಜಿಕ ಅಭಿವೃದ್ಧಿಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಸಮಾಜ ಸೇವೆಯ ಮೂಲಕವೂ ಪ್ರಸಿದ್ಧರಾಗಿದ್ದರು’ ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.

ವಿಶ್ವದ ಪ್ರಮುಖ ಬ್ರ್ಯಾಂಡ್ ರಸ್ನಾ

ಅರೀಜ್ ಅವರು ತಂಪು ಪಾನೀಯದ ಎಸೆನ್ಸ್ ರಸ್ನಾವನ್ನು ಮಾರುಕಟ್ಟೆಗೆ ಪರಿಚಯಿಸುವ ಮೂಲಕವೇ ಪ್ರಸಿದ್ಧರಾಗಿದ್ದರು. ಪ್ರಸ್ತುತ ದೇಶದ 18 ಲಕ್ಷ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ರಸ್ನಾ ಮಾರಾಟವಾಗುತ್ತಿದೆ. ಪ್ರಸ್ತುತ ‘ರಸ್ನಾ’ ವಿಶ್ವದ ಅತಿದೊಡ್ಡ ತಂಪು ಪಾನೀಯ ಎಸೆನ್ಸ್ ತಯಾರಿಕಾ ಕಂಪನಿಯಾಗಿದೆ. ಸುಮಾರು 60 ದೇಶಗಳಲ್ಲಿ ರಸ್ನಾ ಮಾರಾಟವಾಗುತ್ತಿದೆ. ಪಾನೀಯ ತಯಾರಿಕೆ ಮತ್ತು ಮಾರಾಟ ಕ್ಷೇತ್ರದ ಬಹುರಾಷ್ಟ್ರೀಯ ಕಂಪನಿಗಳ ಪೈಕಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದೆ.

ಇತರ ತಂಪು ಪಾನೀಯಗಳ ದರ ಗಗನಕ್ಕೇರಿದ್ದ ಸಂದರ್ಭದಲ್ಲಿ, 1970ರಲ್ಲಿ ಕೈಗೆಟಕುವ ದರದಲ್ಲಿ ರಸ್ನಾ ತಂಪು ಪಾನೀಯವನ್ನು ಮಾರುಕಟ್ಟೆಗೆ ಪರಿಚಯಿಸಿದ್ದರು ಅರೀಜ್ ಫಿರೋಜ್​ಶಾ ಖಂಬಾಟ್. 5 ರೂ. ಮೊತ್ತದ ಒಂದು ಪ್ಯಾಕ್​ ರಸ್ನಾದಿಂದ ಸುಮಾರು 32 ಗ್ಲಾಸ್ ತಂಪು ಪಾನೀಯ ತಯಾರಿಸಬಹುದಾಗಿತ್ತು. ನಂತರ ‘ಐ ಲವ್ ಯೂ ರಸ್ನಾ’ ಎಂಬ ಧ್ಯೇಯದೊಂದಿಗೆ 80ರ ದಶಕದಲ್ಲಿ ಮಾರುಕಟ್ಟೆಯಲ್ಲಿ ದೊಡ್ಡ ಮಟ್ಟದ ಅಭಿಯಾನ ಆರಂಭಿಸಿದ್ದ ರಸ್ನಾ ಇಂದಿಗೂ ಮಾರುಕಟ್ಟೆಯಲ್ಲಿ ಜನಪ್ರಿಯತೆ ಉಳಿಸಿಕೊಂಡಿದೆ ಎಂದು ಕಂಪನಿ ತಿಳಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:14 pm, Mon, 21 November 22

Follow Us
Web contact
Web contact

TV9 Kannada

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ