AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rasna Founder: ರಸ್ನಾ ಸಂಸ್ಥಾಪಕ ಅರೀಜ್ ಫಿರೋಜ್​ಶಾ ಖಂಬಾಟ್ ನಿಧನ

Rasna Founder Areez Pirojshaw Khambatta: ಅರೀಜ್ ಅವರು ತಂಪು ಪಾನೀಯದ ಎಸೆನ್ಸ್ ರಸ್ನಾವನ್ನು ಮಾರುಕಟ್ಟೆಗೆ ಪರಿಚಯಿಸುವ ಮೂಲಕವೇ ಪ್ರಸಿದ್ಧರಾಗಿದ್ದರು. ಪ್ರಸ್ತುತ ದೇಶದ 18 ಲಕ್ಷ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ರಸ್ನಾ ಮಾರಾಟವಾಗುತ್ತಿದೆ.

Rasna Founder: ರಸ್ನಾ ಸಂಸ್ಥಾಪಕ ಅರೀಜ್ ಫಿರೋಜ್​ಶಾ ಖಂಬಾಟ್ ನಿಧನ
ರಸ್ನಾ ಬ್ರ್ಯಾಂಡ್ ಮತ್ತು ಅರೀಜ್ ಫಿರೋಜ್​ಶಾ ಖಂಬಾಟ್
TV9 Web
| Edited By: |

Updated on:Nov 21, 2022 | 4:26 PM

Share

ನವದೆಹಲಿ: ದೇಶದ ಖ್ಯಾತ ತಂಪು ಪಾನೀಯ (Soft Drink) ಬ್ರ್ಯಾಂಡ್ ರಸ್ನಾವನ್ನು (Rasna) ಜನರಿಗೆ ಪರಿಚಯಿಸಿದ್ದ ರಸ್ನಾ ಸಮೂಹದ (Rasna Group) ಸಂಸ್ಥಾಪಕ ಅರೀಜ್ ಫಿರೋಜ್​ಶಾ ಖಂಬಾಟ್ ಸೋಮವಾರ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಅವರು ‘ಅರೀಜ್ ಖಂಬಾಟ್ ಬೆನಿವೊಲೆಂಟ್​ ಟ್ರಸ್ಟ್’ನ ಅಧ್ಯಕ್ಷರೂ ಆಗಿದ್ದರು. ‘ಪಾರ್ಸಿ ಇರಾನಿ ಝಾರ್ಥೋಸ್ಟಿಸ್‌’ನ ವಿಶ್ವ ಒಕ್ಕೂಟದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

‘ಅರೀಜ್ ಫಿರೋಜ್​ಶಾ ಅವರು ಭಾರತೀಯ ಕೈಗಾರಿಕೆ, ಉದ್ಯಮ, ಸಾಮಾಜಿಕ ಅಭಿವೃದ್ಧಿಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಸಮಾಜ ಸೇವೆಯ ಮೂಲಕವೂ ಪ್ರಸಿದ್ಧರಾಗಿದ್ದರು’ ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.

ವಿಶ್ವದ ಪ್ರಮುಖ ಬ್ರ್ಯಾಂಡ್ ರಸ್ನಾ

ಅರೀಜ್ ಅವರು ತಂಪು ಪಾನೀಯದ ಎಸೆನ್ಸ್ ರಸ್ನಾವನ್ನು ಮಾರುಕಟ್ಟೆಗೆ ಪರಿಚಯಿಸುವ ಮೂಲಕವೇ ಪ್ರಸಿದ್ಧರಾಗಿದ್ದರು. ಪ್ರಸ್ತುತ ದೇಶದ 18 ಲಕ್ಷ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ರಸ್ನಾ ಮಾರಾಟವಾಗುತ್ತಿದೆ. ಪ್ರಸ್ತುತ ‘ರಸ್ನಾ’ ವಿಶ್ವದ ಅತಿದೊಡ್ಡ ತಂಪು ಪಾನೀಯ ಎಸೆನ್ಸ್ ತಯಾರಿಕಾ ಕಂಪನಿಯಾಗಿದೆ. ಸುಮಾರು 60 ದೇಶಗಳಲ್ಲಿ ರಸ್ನಾ ಮಾರಾಟವಾಗುತ್ತಿದೆ. ಪಾನೀಯ ತಯಾರಿಕೆ ಮತ್ತು ಮಾರಾಟ ಕ್ಷೇತ್ರದ ಬಹುರಾಷ್ಟ್ರೀಯ ಕಂಪನಿಗಳ ಪೈಕಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದೆ.

ಇತರ ತಂಪು ಪಾನೀಯಗಳ ದರ ಗಗನಕ್ಕೇರಿದ್ದ ಸಂದರ್ಭದಲ್ಲಿ, 1970ರಲ್ಲಿ ಕೈಗೆಟಕುವ ದರದಲ್ಲಿ ರಸ್ನಾ ತಂಪು ಪಾನೀಯವನ್ನು ಮಾರುಕಟ್ಟೆಗೆ ಪರಿಚಯಿಸಿದ್ದರು ಅರೀಜ್ ಫಿರೋಜ್​ಶಾ ಖಂಬಾಟ್. 5 ರೂ. ಮೊತ್ತದ ಒಂದು ಪ್ಯಾಕ್​ ರಸ್ನಾದಿಂದ ಸುಮಾರು 32 ಗ್ಲಾಸ್ ತಂಪು ಪಾನೀಯ ತಯಾರಿಸಬಹುದಾಗಿತ್ತು. ನಂತರ ‘ಐ ಲವ್ ಯೂ ರಸ್ನಾ’ ಎಂಬ ಧ್ಯೇಯದೊಂದಿಗೆ 80ರ ದಶಕದಲ್ಲಿ ಮಾರುಕಟ್ಟೆಯಲ್ಲಿ ದೊಡ್ಡ ಮಟ್ಟದ ಅಭಿಯಾನ ಆರಂಭಿಸಿದ್ದ ರಸ್ನಾ ಇಂದಿಗೂ ಮಾರುಕಟ್ಟೆಯಲ್ಲಿ ಜನಪ್ರಿಯತೆ ಉಳಿಸಿಕೊಂಡಿದೆ ಎಂದು ಕಂಪನಿ ತಿಳಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:14 pm, Mon, 21 November 22

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು