AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sovereign Gold Bond Series VIII: ಸವರನ್ ಗೋಲ್ಡ್​ ಬಾಂಡ್​​ಗೆ ಪ್ರತಿ ಗ್ರಾಮ್​ ಚಿನ್ನ 4791 ರೂ.

ಸವರನ್ ಗೋಲ್ಡ್ ಬಾಂಡ್ 2021-22ನೇ ಸಾಲಿನ VIII ಸರಣಿಯ ಚಂದಾದಾರಿಕೆ ಸೋಮವಾರದಿಂದ ಆರಂಭವಾಗಲಿದೆ. ಪ್ರತಿ ಗ್ರಾಮ್​ಗೆ 4791 ರೂಪಾಯಿ ದರ ನಿಗದಿ ಮಾಡಲಾಗಿದೆ.

Sovereign Gold Bond Series VIII: ಸವರನ್ ಗೋಲ್ಡ್​ ಬಾಂಡ್​​ಗೆ ಪ್ರತಿ ಗ್ರಾಮ್​ ಚಿನ್ನ 4791 ರೂ.
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 27, 2021 | 8:05 AM

Share

ಭಾರತ ಸರ್ಕಾರವು 2021-22ನೇ ಸಾಲಿನ (ಸರಣಿ VIII) ಚಂದಾದಾರಿಕೆಗಾಗಿ ಸವರನ್ ಗೋಲ್ಡ್ ಬಾಂಡ್‌ಗಳನ್ನು ತೆರೆಯುವ ದಿನಾಂಕಗಳನ್ನು ಪ್ರಕಟಿಸಿದೆ. ನವೆಂಬರ್ 29ರಿಂದ ಡಿಸೆಂಬರ್ 3ರ ಅವಧಿಯಲ್ಲಿ ಐದು ದಿನಗಳ ಚಂದಾದಾರಿಕೆಗಾಗಿ ಸರಣಿಯು ತೆರೆದಿರುತ್ತದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು (RBI) ಭಾರತ ಸರ್ಕಾರದ ಪರವಾಗಿ ಬಾಂಡ್‌ಗಳನ್ನು ವಿತರಿಸುತ್ತದೆ. ಚಂದಾದಾರಿಕೆಯ ಅವಧಿಯಲ್ಲಿ ಬಾಂಡ್‌ನ ವಿತರಣೆಯ ಬೆಲೆ ಆರ್​ಬಿಐನ ಸೂಚನೆಯಂತೆ ಪ್ರತಿ ಗ್ರಾಂಗೆ 4,791 ರೂಪಾಯಿಗೆ ನಿಗದಿಪಡಿಸಲಾಗಿದೆ. ಆರ್‌ಬಿಐ ಜೊತೆಗಿನ ಸಮಾಲೋಚನೆ ನಂತರ ಸರ್ಕಾರವು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಹೂಡಿಕೆದಾರರಿಗೆ ವಿತರಿಸುವ ಬೆಲೆಯಿಂದ ಪ್ರತಿ ಗ್ರಾಂಗೆ 50 ರಿಯಾಯಿತಿ ನೀಡಲು ನಿರ್ಧರಿಸಿದೆ ಮತ್ತು ಪಾವತಿಯನ್ನು ಡಿಜಿಟಲ್ ವಿಧಾನದ ಮೂಲಕ ಮಾಡಬೇಕಾಗುತ್ತದೆ.

ಅಂತಹ ಹೂಡಿಕೆದಾರರಿಗೆ ಗೋಲ್ಡ್ ಬಾಂಡ್‌ನ ವಿತರಣೆಯ ಬೆಲೆ ಪ್ರತಿ ಗ್ರಾಂ ಚಿನ್ನಕ್ಕೆ 4,741 ರೂಪಾಯಿ ಆಗಿರುತ್ತದೆ. ಚಿನ್ನದ ಬಾಂಡ್‌ಗಳು ಎಂಟು ವರ್ಷಗಳ ಅವಧಿಯನ್ನು ಹೊಂದಿದ್ದು, ಐದನೇ ವರ್ಷದ ನಂತರ ನಿರ್ಗಮನ ಆಯ್ಕೆಯನ್ನು ಮುಂದಿನ ಬಡ್ಡಿ ಪಾವತಿ ದಿನಾಂಕಗಳಲ್ಲಿ ಚಲಾಯಿಸಬಹುದು. ಹೂಡಿಕೆದಾರರಿಗೆ ನಾಮಿನಲ್ ಮೌಲ್ಯದ ಮೇಲೆ ಅರೆ-ವಾರ್ಷಿಕವಾಗಿ ಪಾವತಿಸಬಹುದಾದ ವಾರ್ಷಿಕ ಶೇ 2.50ರಷ್ಟು ನಿಗದಿತ ದರದಲ್ಲಿ ಪರಿಹಾರವನ್ನು ನೀಡಲಾಗುತ್ತದೆ ಮತ್ತು ಕನಿಷ್ಠ ಅನುಮತಿಸುವ ಹೂಡಿಕೆಯು 1 ಗ್ರಾಂ ಚಿನ್ನವಾಗಿರುತ್ತದೆ.

ಭೌತಿಕ ಚಿನ್ನದ ಬೇಡಿಕೆಯನ್ನು ಕಡಿಮೆ ಮಾಡಲು ಮತ್ತು ಚಿನ್ನದ ಖರೀದಿಗೆ ಬಳಸುವ ದೇಶೀಯ ಉಳಿತಾಯದ ಒಂದು ಭಾಗವನ್ನು ಆರ್ಥಿಕ ಉಳಿತಾಯಕ್ಕೆ ಬದಲಾಯಿಸುವ ಉದ್ದೇಶದಿಂದ ಸವರನ್ ಗೋಲ್ಡ್ ಬಾಂಡ್ ಯೋಜನೆಯನ್ನು 2015ರ ನವೆಂಬರ್​ನಲ್ಲಿ ಪ್ರಾರಂಭಿಸಲಾಯಿತು.

MCXನಲ್ಲಿ ಡಿಸೆಂಬರ್ ಚಿನ್ನದ ಫ್ಯೂಚರ್ಸ್ 10 ಗ್ರಾಂಗೆ ₹47,728 ಕ್ಕೆ ಏರಿದೆ. ಏರಿಕೆಯ ಹೊರತಾಗಿಯೂ, ಅಮೆರಿಕ ವಿತ್ತೀಯ ನೀತಿಯ ನಿರೀಕ್ಷೆಗಿಂತ ಮುಂಚೆಯೇ ಬಿಗಿಯಾಗುವ ಭಯವು ಬೆಲೆಬಾಳುವ ಲೋಹದ ಮೇಲೆ ತೂಗುವುದರಿಂದ ಈ ತಿಂಗಳ ಗರಿಷ್ಠ ಮಟ್ಟದಿಂದ ಪ್ರತಿ 10 ಗ್ರಾಂ ಚಿನ್ನ 1,000ಕ್ಕಿಂತ ಕಡಿಮೆಯಿದೆ.

ಇದನ್ನೂ ಓದಿ: ತೆರಿಗೆಯ ಹೊರೆ ಇಲ್ಲದೆ ಎಷ್ಟು ಪ್ರಮಾಣದಲ್ಲಿ ಚಿನ್ನವನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದು?

Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ