AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SpiceJet: ಸ್ಪೈಸ್​ಜೆಟ್ ವಿಮಾನ ಯಾನ ಪರವಾನಗಿ ಡಿಜಿಸಿಎಯಿಂದ 30 ದಿನಗಳ ಕಾಲ ತಾತ್ಕಾಲಿಕ ಅಮಾನತು

ಅಪಾಯಕಾರಿ ವಸ್ತುಗಳ ಸಾಗಣೆ ಮಾಡದಂತೆ ತಾತ್ಕಾಲಿಕವಾಗಿ 30 ದಿನಗಳ ಕಾಲ ಪರವಾನಗಿಯನ್ನು ಅಮಾನತು ಮಾಡಲಾಗಿದೆ. ಆ ಬಗ್ಗೆ ವಿವರ ಇಲ್ಲಿದೆ.

SpiceJet: ಸ್ಪೈಸ್​ಜೆಟ್ ವಿಮಾನ ಯಾನ ಪರವಾನಗಿ ಡಿಜಿಸಿಎಯಿಂದ 30 ದಿನಗಳ ಕಾಲ ತಾತ್ಕಾಲಿಕ ಅಮಾನತು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 16, 2021 | 6:51 PM

Share

ಅಪಾಯಕಾರಿ ವಸ್ತುಗಳನ್ನು ಸಾಗಾಣಿಕೆ ಮಾಡಿ, ನಿಯಮ ಉಲ್ಲಂಘಿಸಿದ ಆರೋಪದಲ್ಲಿ ಸ್ಪೈಸ್​ಜೆಟ್​ ಪರವಾನಗಿಯನ್ನು ವಿಮಾನಯಾನ ನಿಯಂತ್ರಕ ಸಂಸ್ಥೆಯಾದ ಡಿಜಿಸಿಎ ತಾತ್ಕಾಲಿಕವಾಗಿ ಅಮಾನತು ಮಾಡಿದೆ. ಮೂಲಗಳ ಪ್ರಕಾರ, ‘ಅಪಾಯಕಾರಿ ಸರಕುಗಳ’ ಸಾಗಾಣಿಕೆ ಮಾಡಿದ್ದಕ್ಕಾಗಿ ಸ್ಪೈಸ್ ಜೆಟ್ ಪರವಾನಗಿಯನ್ನು ವಾಯುಯಾನ ನಿಯಂತ್ರಕ ಡಿಜಿಸಿಎಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಈ ಅಮಾನತು 30 ದಿನಗಳ ಅವಧಿಯಾಗಿದ್ದು, ಈ ಸಮಯದಲ್ಲಿ ಸ್ಪೈಸ್ ಜೆಟ್ ತನ್ನ ದೇಶೀಯ ಹಾಗೂ ಅಂತರರಾಷ್ಟ್ರೀಯ ವಿಮಾನಗಳಲ್ಲಿ ಲಿಥಿಯಂ-ಐಯಾನ್ ಬ್ಯಾಟರಿಗಳು ಸೇರಿದಂತೆ ಅಪಾಯಕಾರಿ ಸರಕುಗಳನ್ನು ಸಾಗಿಸಲು ಅನುಮತಿಸುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಸಂಪರ್ಕಿಸಲು ಪ್ರಯತ್ನಿಸಿದಾಗ, ಸ್ಪೈಸ್ ಜೆಟ್ ವಕ್ತಾರರು ನೇರವಾಗಿ ಅಮಾನತು ಕುರಿತು ಉಲ್ಲೇಖಿಸಿಲ್ಲ. ವಿಮಾನಯಾನ ಸಂಸ್ಥೆಯು ತಿಳಿಸಿದಂತೆ, “ಸಣ್ಣ ಸಮಸ್ಯೆಯಿದೆ” ಎಂದು ಪ್ಯಾಕೇಜ್ ಅನ್ನು “ಅಪಾಯಕಾರಿ ಅಲ್ಲದ ಸರಕುಗಳು” ಎಂದು ಘೋಷಿಸಲಾಗಿದೆ. ರವಾನೆ ಮಾಡಿದವರನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ.

ಡೈರೆಕ್ಟೊರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ ​​(ಡಿಜಿಸಿಎ) ನಿಯಮಗಳ ಪ್ರಕಾರ, ಅಪಾಯಕಾರಿ ಸರಕುಗಳು ಅಂದರೆ ಆರೋಗ್ಯ, ಸುರಕ್ಷತೆ, ಆಸ್ತಿ ಅಥವಾ ಪರಿಸರಕ್ಕೆ ಅಪಾಯವನ್ನುಂಟು ಮಾಡುವಂತಹ ವಸ್ತುಗಳು ಅಥವಾ ಅಂಶಗಳು. “ಡಿಜಿಸಿಎಯಿಂದ 30 ದಿನಗಳವರೆಗೆ ಅಪಾಯಕಾರಿ ಸರಕುಗಳ ಸ್ಪೈಸ್ ಜೆಟ್ ಪರವಾನಗಿಯನ್ನು ಅಮಾನತುಗೊಳಿಸಿದೆ. ಅಂತಹ ಸರಕುಗಳ ನಿರ್ವಹಣೆಯಲ್ಲಿ ಒಳಗೊಂಡಿರುವ ನಿಯಮಾವಳಿಗಳನ್ನು ಉಲ್ಲಂಘಿಸಿದೆ,” ಎಂದು ಒಂದು ಮೂಲಗಳು ತಿಳಿಸಿವೆ.

ಇದರ ಪರಿಣಾಮವಾಗಿ, ಏರ್‌ಲೈನ್ ತನ್ನ ನೆಟ್‌ವರ್ಕ್‌ನಲ್ಲಿ ಅಂತಹ ಸರಕುಗಳನ್ನು ಸಾಗಿಸುವುದನ್ನು “ನಿರ್ಬಂಧಿಸಲಾಗಿದೆ” ಎಂದು ಅವರು ಹೇಳಿದರು. ನಾಗರಿಕ ವಿಮಾನಯಾನ ಮಹಾನಿರ್ದೇಶಕ ಅರುಣ್ ಕುಮಾರ್ ಅವರು ಪ್ರತಿಕ್ರಿಯೆಗೆ ಸಿಕ್ಕಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. “ಸಾಗಣೆದಾರರಿಂದ ಪ್ಯಾಕೇಜ್ ಅನ್ನು ‘ಅಪಾಯಕಾರಿಯಲ್ಲದ ಸರಕುಗಳು’ ಎಂದು ಘೋಷಿಸುವುದರಲ್ಲಿ ಒಂದು ಸಣ್ಣ ಸಮಸ್ಯೆಯಿತ್ತು ಮತ್ತು ಲೋಪಗಳು ಸಾಗಣೆದಾರರ ಕಡೆಯಿಂದ ಆಗಿದ್ದವು. ಡಿಜಿಸಿಎ ಸಲಹೆಯಂತೆ ಸ್ಪೈಸ್ ಜೆಟ್​ನಿಂದ ಇಂಥದ್ದನ್ನು ತಡೆಗಟ್ಟುವ ಮತ್ತು ಸರಿಪಡಿಸುವ ಕ್ರಮಗಳನ್ನು ಕೈಗೊಂಡಿದೆ,” ಎಂದು ಸಂಸ್ಥೆಯ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Domestic flights ಅಕ್ಟೋಬರ್ 18ರಿಂದ ದೇಶೀಯ ವಿಮಾನಗಳಲ್ಲಿ ಶೇ 100 ಸಾಮರ್ಥ್ಯಕ್ಕೆ ಅನುಮತಿ

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ