AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SpiceJet: ಸ್ಪೈಸ್​ಜೆಟ್ ವಿಮಾನ ಯಾನ ಪರವಾನಗಿ ಡಿಜಿಸಿಎಯಿಂದ 30 ದಿನಗಳ ಕಾಲ ತಾತ್ಕಾಲಿಕ ಅಮಾನತು

ಅಪಾಯಕಾರಿ ವಸ್ತುಗಳ ಸಾಗಣೆ ಮಾಡದಂತೆ ತಾತ್ಕಾಲಿಕವಾಗಿ 30 ದಿನಗಳ ಕಾಲ ಪರವಾನಗಿಯನ್ನು ಅಮಾನತು ಮಾಡಲಾಗಿದೆ. ಆ ಬಗ್ಗೆ ವಿವರ ಇಲ್ಲಿದೆ.

SpiceJet: ಸ್ಪೈಸ್​ಜೆಟ್ ವಿಮಾನ ಯಾನ ಪರವಾನಗಿ ಡಿಜಿಸಿಎಯಿಂದ 30 ದಿನಗಳ ಕಾಲ ತಾತ್ಕಾಲಿಕ ಅಮಾನತು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 16, 2021 | 6:51 PM

Share

ಅಪಾಯಕಾರಿ ವಸ್ತುಗಳನ್ನು ಸಾಗಾಣಿಕೆ ಮಾಡಿ, ನಿಯಮ ಉಲ್ಲಂಘಿಸಿದ ಆರೋಪದಲ್ಲಿ ಸ್ಪೈಸ್​ಜೆಟ್​ ಪರವಾನಗಿಯನ್ನು ವಿಮಾನಯಾನ ನಿಯಂತ್ರಕ ಸಂಸ್ಥೆಯಾದ ಡಿಜಿಸಿಎ ತಾತ್ಕಾಲಿಕವಾಗಿ ಅಮಾನತು ಮಾಡಿದೆ. ಮೂಲಗಳ ಪ್ರಕಾರ, ‘ಅಪಾಯಕಾರಿ ಸರಕುಗಳ’ ಸಾಗಾಣಿಕೆ ಮಾಡಿದ್ದಕ್ಕಾಗಿ ಸ್ಪೈಸ್ ಜೆಟ್ ಪರವಾನಗಿಯನ್ನು ವಾಯುಯಾನ ನಿಯಂತ್ರಕ ಡಿಜಿಸಿಎಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಈ ಅಮಾನತು 30 ದಿನಗಳ ಅವಧಿಯಾಗಿದ್ದು, ಈ ಸಮಯದಲ್ಲಿ ಸ್ಪೈಸ್ ಜೆಟ್ ತನ್ನ ದೇಶೀಯ ಹಾಗೂ ಅಂತರರಾಷ್ಟ್ರೀಯ ವಿಮಾನಗಳಲ್ಲಿ ಲಿಥಿಯಂ-ಐಯಾನ್ ಬ್ಯಾಟರಿಗಳು ಸೇರಿದಂತೆ ಅಪಾಯಕಾರಿ ಸರಕುಗಳನ್ನು ಸಾಗಿಸಲು ಅನುಮತಿಸುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಸಂಪರ್ಕಿಸಲು ಪ್ರಯತ್ನಿಸಿದಾಗ, ಸ್ಪೈಸ್ ಜೆಟ್ ವಕ್ತಾರರು ನೇರವಾಗಿ ಅಮಾನತು ಕುರಿತು ಉಲ್ಲೇಖಿಸಿಲ್ಲ. ವಿಮಾನಯಾನ ಸಂಸ್ಥೆಯು ತಿಳಿಸಿದಂತೆ, “ಸಣ್ಣ ಸಮಸ್ಯೆಯಿದೆ” ಎಂದು ಪ್ಯಾಕೇಜ್ ಅನ್ನು “ಅಪಾಯಕಾರಿ ಅಲ್ಲದ ಸರಕುಗಳು” ಎಂದು ಘೋಷಿಸಲಾಗಿದೆ. ರವಾನೆ ಮಾಡಿದವರನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ.

ಡೈರೆಕ್ಟೊರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ ​​(ಡಿಜಿಸಿಎ) ನಿಯಮಗಳ ಪ್ರಕಾರ, ಅಪಾಯಕಾರಿ ಸರಕುಗಳು ಅಂದರೆ ಆರೋಗ್ಯ, ಸುರಕ್ಷತೆ, ಆಸ್ತಿ ಅಥವಾ ಪರಿಸರಕ್ಕೆ ಅಪಾಯವನ್ನುಂಟು ಮಾಡುವಂತಹ ವಸ್ತುಗಳು ಅಥವಾ ಅಂಶಗಳು. “ಡಿಜಿಸಿಎಯಿಂದ 30 ದಿನಗಳವರೆಗೆ ಅಪಾಯಕಾರಿ ಸರಕುಗಳ ಸ್ಪೈಸ್ ಜೆಟ್ ಪರವಾನಗಿಯನ್ನು ಅಮಾನತುಗೊಳಿಸಿದೆ. ಅಂತಹ ಸರಕುಗಳ ನಿರ್ವಹಣೆಯಲ್ಲಿ ಒಳಗೊಂಡಿರುವ ನಿಯಮಾವಳಿಗಳನ್ನು ಉಲ್ಲಂಘಿಸಿದೆ,” ಎಂದು ಒಂದು ಮೂಲಗಳು ತಿಳಿಸಿವೆ.

ಇದರ ಪರಿಣಾಮವಾಗಿ, ಏರ್‌ಲೈನ್ ತನ್ನ ನೆಟ್‌ವರ್ಕ್‌ನಲ್ಲಿ ಅಂತಹ ಸರಕುಗಳನ್ನು ಸಾಗಿಸುವುದನ್ನು “ನಿರ್ಬಂಧಿಸಲಾಗಿದೆ” ಎಂದು ಅವರು ಹೇಳಿದರು. ನಾಗರಿಕ ವಿಮಾನಯಾನ ಮಹಾನಿರ್ದೇಶಕ ಅರುಣ್ ಕುಮಾರ್ ಅವರು ಪ್ರತಿಕ್ರಿಯೆಗೆ ಸಿಕ್ಕಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. “ಸಾಗಣೆದಾರರಿಂದ ಪ್ಯಾಕೇಜ್ ಅನ್ನು ‘ಅಪಾಯಕಾರಿಯಲ್ಲದ ಸರಕುಗಳು’ ಎಂದು ಘೋಷಿಸುವುದರಲ್ಲಿ ಒಂದು ಸಣ್ಣ ಸಮಸ್ಯೆಯಿತ್ತು ಮತ್ತು ಲೋಪಗಳು ಸಾಗಣೆದಾರರ ಕಡೆಯಿಂದ ಆಗಿದ್ದವು. ಡಿಜಿಸಿಎ ಸಲಹೆಯಂತೆ ಸ್ಪೈಸ್ ಜೆಟ್​ನಿಂದ ಇಂಥದ್ದನ್ನು ತಡೆಗಟ್ಟುವ ಮತ್ತು ಸರಿಪಡಿಸುವ ಕ್ರಮಗಳನ್ನು ಕೈಗೊಂಡಿದೆ,” ಎಂದು ಸಂಸ್ಥೆಯ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Domestic flights ಅಕ್ಟೋಬರ್ 18ರಿಂದ ದೇಶೀಯ ವಿಮಾನಗಳಲ್ಲಿ ಶೇ 100 ಸಾಮರ್ಥ್ಯಕ್ಕೆ ಅನುಮತಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?