AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೊಹೊ ಮುಖ್ಯ ವಿಜ್ಞಾನಿ ಶ್ರೀಧರ್ ವೆಂಬು ಅವರ ಕರುವಿಯಿಂದ ಚೀನೀ ಪವರ್ ಟೂಲ್ಸ್​ಗೆ ಪೈಪೋಟಿ

Zoho Co-founder Revolutionizes India's Power Tool Manufacturing: ಜೊಹೊ ಸಹ-ಸಂಸ್ಥಾಪಕ ಶ್ರೀಧರ್ ವೆಂಬು, ತಮ್ಮ ಹೊಸ ಸಾಹಸ 'ಕರುವಿ' ಮೂಲಕ ಭಾರತದ ಉತ್ಪಾದನಾ ಕ್ಷೇತ್ರದಲ್ಲಿ ಕ್ರಾಂತಿ ಮೂಡಿಸುತ್ತಿದ್ದಾರೆ. ಚೀನೀ ಪವರ್ ಟೂಲ್ಸ್ ಪ್ರಾಬಲ್ಯಕ್ಕೆ ಸವಾಲಾಗಿ, ಕರುವಿ ಜಾಗತಿಕ ಗುಣಮಟ್ಟದ ಉತ್ಪನ್ನಗಳನ್ನು ಕೈಗೆಟುಕುವ ಬೆಲೆಯಲ್ಲಿ ನೀಡುತ್ತಿದೆ. ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿ ಇದರ ಮತ್ತೊಂದು ಮುಖ್ಯ ಉದ್ದೇಶವಾಗಿದ್ದು, ಮೇಕ್ ಇನ್ ಇಂಡಿಯಾ ದೃಷ್ಟಿಕೋನಕ್ಕೆ ಬಲ ತುಂಬಿದೆ. ಇದು ಹಾರ್ಡ್‌ವೇರ್ ಕ್ಷೇತ್ರದಲ್ಲಿ ಭಾರತದ ಸಾಮರ್ಥ್ಯವನ್ನು ತೋರಿಸುತ್ತದೆ.

ಜೊಹೊ ಮುಖ್ಯ ವಿಜ್ಞಾನಿ ಶ್ರೀಧರ್ ವೆಂಬು ಅವರ ಕರುವಿಯಿಂದ ಚೀನೀ ಪವರ್ ಟೂಲ್ಸ್​ಗೆ ಪೈಪೋಟಿ
ಕರುವಿ ಪವರ್ ಟೂಲ್ಸ್Image Credit source: X @svembu
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 03, 2026 | 6:10 PM

Share

ಚೆನ್ನೈ, ಜೂನ್ 3: ಸಾಫ್ಟ್‌ವೇರ್ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಕ್ರಾಂತಿ ಮಾಡಿರುವ ಭಾರತದ ಪ್ರಮುಖ ಸಾಸ್ (SaaS) ಯೂನಿಕಾರ್ನ್ ಸಂಸ್ಥೆ ‘ಜೊಹೊ’ನ (Zoho) ಸಹ-ಸಂಸ್ಥಾಪಕ ಮತ್ತು ಮುಖ್ಯ ವಿಜ್ಞಾನಿ ಹಾಗು ಮಾಜಿ ಸಿಇಒ ಶ್ರೀಧರ್ ವೆಂಬು, ಈಗ ಉತ್ಪಾದನಾ (Manufacturing) ಕ್ಷೇತ್ರದಲ್ಲೂ ಭಾರತದ ಹೆಜ್ಜೆಯನ್ನು ಗಟ್ಟಿಗೊಳಿಸಲು ಮುಂದಾಗಿದ್ದಾರೆ. ಇವರ ಕರುವಿ ಎನ್ನುವ ಪವರ್ ಟೂಲ್ಸ್ ಉತ್ಪಾದನಾ ಸಂಸ್ಥೆ ಸದ್ದು ಮಾಡತೊಡಗಿದೆ. ಚೀನೀ ಕಂಪನಿಗಳ ಪ್ರಾಬಲ್ಯ ಇರುವ ಪವರ್ ಟೂಲ್ಸ್ ಕ್ಷೇತ್ರದಲ್ಲಿ ಕರುವಿ (Karuvi) ಗಟ್ಟಿ ಹೆಜ್ಜೆ ಊರಲು ಅಣಿಯಾಗಿದೆ. ಈ ಬಗ್ಗೆ ಶ್ರೀಧರ್ ವೆಂಬು ಅವರು ಒಂದಷ್ಟು ಮಾಹಿತಿ ಹಂಚಿಕೊಂಡಿದ್ದಾರೆ.

ಮೆಕಾಟ್ರಾನಿಕ್ಸ್ ಸ್ಟಾರ್ಟಪ್ ಆದ ಕರುವಿಯ ಮೊದಲ ಉತ್ಪನ್ನ ತಯಾರಾಗಿ ಪ್ರಾಯೋಗಿಕವಾಗಿ ಗ್ರಾಹಕರಿಗೆ ತಲುಪಿಸಲಾಗಿರುವ ವಿಚಾರವನ್ನು ವೆಂಬು ಹಂಚಿಕೊಂಡಿದ್ದಾರೆ. ಚೀನಾ ಉತ್ಪನ್ನಗಳನ್ನು ಎದುರಿಸಬೇಕಾದರೆ ಕೇವಲ ಬೆಲೆ ಮಾತ್ರವಲ್ಲ, ಜಾಗತಿಕ ಗುಣಮಟ್ಟವನ್ನು ಸರಿಗಟ್ಟುವುದು (Matching Global Quality) ಅತ್ಯಂತ ಪ್ರಮುಖ ಸವಾಲಾಗಿತ್ತು ಎಂದು ಅವರು ವಿವರಿಸಿದ್ದಾರೆ.

Karuvi ಸ್ಟಾರ್ಟ್-ಅಪ್‌ನ ಉಗಮ ಮತ್ತು ತಂತ್ರಜ್ಞಾನ

ತಮಿಳು ಭಾಷೆಯಲ್ಲಿ ‘ಕರುವಿ’ ಎಂದರೆ ಉಪಕರಣ ಅಥವಾ ಸಾಧನ (Instrument/Tool) ಎಂದರ್ಥ. ಸುಮಾರು ಎರಡು ವರ್ಷಗಳ ಹಿಂದೆ ತಮಿಳುನಾಡಿನ ಗ್ರಾಮೀಣ ಪ್ರದೇಶವಾದ ತೆನ್ಕಾಸಿಯಲ್ಲಿ ಒಂದು ಸಣ್ಣ ಇಂಜಿನಿಯರಿಂಗ್ ತಂಡದೊಂದಿಗೆ ಈ ಸಾಹಸವನ್ನು ಪ್ರಾರಂಭಿಸಲಾಯಿತು. ಶ್ರೀಧರ್ ವೆಂಬು ಮತ್ತು ಟೋನಿ ಥಾಮಾಸ್ ಇದರ ಸಹ-ಸಂಸ್ಥಾಪಕರು.

ಕರುವಿ ಉತ್ಪನ್ನಗಳ ಶ್ರೇಣಿ

‘ಕರುವಿ’ ಬ್ರ್ಯಾಂಡ್ ಅಡಿಯಲ್ಲಿ ಕೈಗಾರಿಕಾ ಮತ್ತು ಗ್ರಾಹಕ ಬಳಕೆಯ ರೋಟರಿ ಡ್ರಿಲ್ಸ್, ಹ್ಯಾಮರ್ ಡ್ರಿಲ್ಸ್, ಆಂಗಲ್ ಗ್ರೈಂಡರ್ಸ್, ಡೆಮೋಲಿಷನ್ ಹ್ಯಾಮರ್ಸ್ ಮತ್ತು ಗರಗಸಗಳಂತಹ (Saws) ಪ್ರಮುಖ ಪವರ್ ಟೂಲ್‌ಗಳನ್ನು ವಾಣಿಜ್ಯ ಉತ್ಪಾದನೆಗೆ ಸಿದ್ಧಪಡಿಸಲಾಗಿದೆ.

ಈ ಉಪಕರಣಗಳನ್ನು ಕೇವಲ ಸಾಮಾನ್ಯ ಯಂತ್ರಗಳಾಗಿ ಮಾಡದೆ, ಮೋಟಾರ್ ತಂತ್ರಜ್ಞಾನ (Motor Technology), ಮೆಟೀರಿಯಲ್ ಸೈನ್ಸ್ (ವಸ್ತು ವಿಜ್ಞಾನ) ಮತ್ತು ಎಲೆಕ್ಟ್ರಾನಿಕ್ಸ್ ವಲಯದ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿ ಅತ್ಯಂತ ನಿಖರವಾಗಿ (Precise) ವಿನ್ಯಾಸಗೊಳಿಸಲಾಗಿದೆ.

ಇದನ್ನೂ ಓದಿ: ಚೀನಾ ಔಟ್, ಭಾರತ ಇನ್: ಜಾಗತಿಕ ಮಾರುಕಟ್ಟೆಯಲ್ಲಿ ಜಪಾನ್ ಹೂಡಿಕೆದಾರರ ಭರ್ಜರಿ ದಿಕ್ಕು ಬದಲಾವಣೆ

ಚೀನಾ ಆಮದುಗಳ ವಿರುದ್ಧ ವೆಂಬು ಕಾರ್ಯತಂತ್ರಗಳು

ಭಾರತೀಯ ಪವರ್ ಟೂಲ್ಸ್ ಮಾರುಕಟ್ಟೆಯಲ್ಲಿ ಸದ್ಯ ಚೀನಾ ಉತ್ಪನ್ನಗಳದ್ದೇ ಮೇಲುಗೈಯಾಗಿದೆ. ಇದನ್ನು ಮೆಟ್ಟಿನಿಲ್ಲಲು ಶ್ರೀಧರ್ ವೆಂಬು ಮೂರು ಪ್ರಮುಖ ಸೂತ್ರಗಳನ್ನು ಮುಂದಿಟ್ಟಿದ್ದಾರೆ:

  • ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ: ಭಾರತೀಯ ಗ್ರಾಹಕರು ಕೇವಲ ಕಡಿಮೆ ಬೆಲೆಯ ವಸ್ತುಗಳನ್ನು ಹುಡುಕುವುದಿಲ್ಲ, ಬದಲಿಗೆ ಬಾಳಿಕೆ ಬರುವ ಗುಣಮಟ್ಟವನ್ನು ಬಯಸುತ್ತಾರೆ. ಚೀನಾದ ಅಗ್ಗದ ಆಮದುಗಳಿಗೆ ತಕ್ಕ ಟಕ್ಕರ್ ನೀಡಬೇಕಾದರೆ ಜಾಗತಿಕ ಗುಣಮಟ್ಟದ ಮಾನದಂಡಗಳಿಗೆ ಸರಿಸಮಾನವಾದ ಅತ್ಯುತ್ತಮ ಫಿನಿಷಿಂಗ್, ವಿನ್ಯಾಸ ಮತ್ತು ದಕ್ಷತೆಯನ್ನು ಕರುವಿ ಉತ್ಪನ್ನಗಳಲ್ಲಿ ತರಲಾಗಿದೆ.
  • ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿ: ಜೊಹೊ ಸಂಸ್ಥೆಯಂತೆಯೇ ‘ಕರುವಿ’ ಉತ್ಪಾದನಾ ಘಟಕವನ್ನೂ ಗ್ರಾಮೀಣ ಭಾಗದಲ್ಲೇ (ತೆನ್ಕಾಸಿ) ಸ್ಥಾಪಿಸಲಾಗುತ್ತಿದೆ. ಚೀನಾ ಆಮದಿನ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವುದರ ಜೊತೆಗೆ, ಭಾರತದ ಗ್ರಾಮೀಣ ಯುವಕರಿಗೆ ಅತ್ಯಾಧುನಿಕ ಹಾರ್ಡ್‌ವೇರ್ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಉದ್ಯೋಗ ನೀಡುವುದು ಇದರ ಮುಖ್ಯ ಉದ್ದೇಶವಾಗಿದೆ.
  • ಕೈಗೆಟುಕುವ ಬೆಲೆ: ಜಾಗತಿಕ ಗುಣಮಟ್ಟವನ್ನು ಹೊಂದಿದ್ದರೂ, ಈ ಉತ್ಪನ್ನಗಳನ್ನು ಮಧ್ಯಮ ವರ್ಗದ ಕಾರ್ಮಿಕರು ಮತ್ತು ಕೈಗಾರಿಕೆಗಳಿಗೆ ಸುಲಭವಾಗಿ ಸಿಗುವಂತಹ ಕೈಗೆಟುಕುವ ಬೆಲೆಯಲ್ಲಿ ಮಾರುಕಟ್ಟೆಗೆ ತರಲು ಯೋಜನೆ ರೂಪಿಸಲಾಗಿದೆ.

ಇದನ್ನೂ ಓದಿ: ಭಾರತದ ಸೇವಾ ಕ್ಷೇತ್ರದಲ್ಲಿ ಹೊಸ ಹುರುಪು; ಮೇ ತಿಂಗಳ ಸರ್ವಿಸ್ ಸೆಕ್ಟರ್ ಪಿಎಂಐ 6 ತಿಂಗಳ ಗರಿಷ್ಠ ಮಟ್ಟಕ್ಕೆ

ವೆಂಬು ಈ ಕ್ಷೇತ್ರಕ್ಕೆ ಬಂದಿದ್ದು ಹೇಗೆ?

ಟ್ವಿಟರ್ (X) ನಲ್ಲಿ ಈ ಕುರಿತು ಬರೆದುಕೊಂಡಿದ್ದ ಶ್ರೀಧರ್ ವೆಂಬು, “ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಮಿಡಲ್ ಈಸ್ಟ್‌ನ ಪ್ರಮುಖ ಎಲೆಕ್ಟ್ರಾನಿಕ್ಸ್ ವಿತರಕರಾದ ಅಬ್ದುಲ್ ಗಫೂರ್ ಅವರು ನನ್ನನ್ನು ಭೇಟಿಯಾಗಿ, ಹ್ಯಾಂಡ್ ಟೂಲ್‌ಗಳ ಬಾಕ್ಸ್ ತೋರಿಸಿ ಇವುಗಳನ್ನು ಜೊಹೊ ತಯಾರಿಸಬೇಕು, ನಾನು ಜಾಗತಿಕವಾಗಿ ವಿತರಣೆ ಮಾಡುತ್ತೇನೆ ಎಂದಿದ್ದರು. ಆಗ ನಮಗೆ ಇದರ ಬಗ್ಗೆ ಏನೂ ತಿಳಿದಿರಲಿಲ್ಲ. ಆದರೆ ಇದು ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿಸುತ್ತದೆ ಎಂದು ಅವರು ಹೇಳಿದಾಗ ನಾನು ಈ ಸವಾಲನ್ನು ಸ್ವೀಕರಿಸಿದೆ,” ಎಂದು ಕರುವಿ ಹುಟ್ಟಿನ ಹಿಂದಿನ ಸ್ವಾರಸ್ಯಕರ ಕಥೆಯನ್ನು ಹಂಚಿಕೊಂಡಿದ್ದಾರೆ.

ಭಾರತವು ಸಾಫ್ಟ್‌ವೇರ್‌ನಲ್ಲಿ ಸಾಧಿಸಿರುವ ಯಶಸ್ಸನ್ನು ಈಗ ಹಾರ್ಡ್‌ವೇರ್ ಮತ್ತು ಮೆಕ್ಯಾನಿಕಲ್ ಉತ್ಪಾದನಾ ವಲಯದಲ್ಲೂ ಸಾಧಿಸಬಹುದು ಎಂಬುದಕ್ಕೆ ಶ್ರೀಧರ್ ವೆಂಬು ಅವರ ಈ ‘ಕರುವಿ’ ಪ್ರಮುಖ ಉದಾಹರಣೆಯಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ