AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI Customer Alert: ನೀವು ಎಸ್​ಬಿಐ ಗ್ರಾಹಕರೇ? ಈ ತಪ್ಪು ಮಾಡಿದಲ್ಲಿ ಖಾತೆಯಲ್ಲಿನ ಹಣವೇ ಖಾಲಿಯಾದೀತು

ಸ್ಟೇಟ್​ ಬ್ಯಾಂಕ್ ಆಫ್ ಇಂಡಿಯಾದ ಗ್ರಾಹಕರಿಗೆ ಆನ್​ಲೈನ್​ ವಂಚಕರ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಒಂದು ವೇಳೆ ಮೈ ಮರೆತರೆ ಹಣವನ್ನು ಕಳೆದುಕೊಳ್ಳಬೇಕಾದೀತು ಎನ್ನಲಾಗಿದೆ.

SBI Customer Alert: ನೀವು ಎಸ್​ಬಿಐ ಗ್ರಾಹಕರೇ? ಈ ತಪ್ಪು ಮಾಡಿದಲ್ಲಿ ಖಾತೆಯಲ್ಲಿನ ಹಣವೇ ಖಾಲಿಯಾದೀತು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 22, 2022 | 12:56 PM

Share

ಡಿಜಿಟೈಸೇಷನ್ ಮತ್ತು ನೆಟ್ ಬ್ಯಾಂಕಿಂಗ್​ನಿಂದ ಜನರು ಅನುಕೂಲಕರವಾಗಿ ಬ್ಯಾಂಕಿಂಗ್ ವ್ಯವಹಾರಗಳನ್ನು ಮಾಡಲು ಸಹಾಯ ಮಾಡಿದೆ. ಆದರೂ ಆನ್‌ಲೈನ್ ಬ್ಯಾಂಕಿಂಗ್‌ನ ಹೆಚ್ಚುತ್ತಿರುವ ಬಳಕೆಯು ಆನ್‌ಲೈನ್ ವಂಚನೆ ಮತ್ತು ಸೈಬರ್ ಅಪರಾಧದ ಪ್ರಕರಣಗಳನ್ನು ಉಲ್ಬಣಗೊಳಿಸಿದೆ. ಇತ್ತೀಚೆಗೆ ವಂಚಕರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (State Bank Of India) ಖಾತೆದಾರರನ್ನು ವಂಚಿಸಲು ಹೊಸ ತಂತ್ರವನ್ನು ಅಳವಡಿಸಿಕೊಂಡಿದ್ದಾರೆ. ಈ ವಂಚನೆ ಬಗ್ಗೆ ಜಾಗೃತಿ ಮೂಡಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ 44 ಕೋಟಿ ಗ್ರಾಹಕರಿಗೆ ಎಚ್ಚರಿಕೆ ನೀಡಿದೆ. ಅಂದಹಾಗೆ ಈ ವಂಚನೆಯು ಸಾಮಾನ್ಯವಾಗಿ ಬಳಸುವ ಕ್ಯೂಆರ್​ ಕೋಡ್‌ಗೆ ಸಂಬಂಧಿಸಿದೆ. ಯಾವುದೇ ವ್ಯಕ್ತಿಯಿಂದ ಕ್ಯೂಆರ್ ಕೋಡ್ ಪಡೆದರೆ ಅವರು ಅದನ್ನು ತಪ್ಪಾಗಿ ಸ್ಕ್ಯಾನ್ ಮಾಡಬಾರದು ಎಂದು ತನ್ನ ಗ್ರಾಹಕರಿಗೆ ಎಚ್ಚರಿಕೆ ನೀಡಿದೆ. ಕ್ಯೂಆರ್ ಕೋಡ್ ಕಳುಹಿಸುವವರ ಬಗ್ಗೆ ವಿವರಗಳನ್ನು ತಿಳಿಯದೆ ನೀವು ಸ್ಕ್ಯಾನ್ ಮಾಡಿದರೆ ಖಾತೆಯಿಂದ ಹಣವನ್ನು ಕಳೆದುಕೊಳ್ಳಬಹುದು ಎಂದು ಟ್ವಿಟರ್ ಮೂಲಕ ಗ್ರಾಹಕರನ್ನು ಬ್ಯಾಂಕ್ ಎಚ್ಚರಿಸಿದೆ. ಅದರ ಪ್ರಕಾರವಾಗಿ, ಹಣವನ್ನು ಸ್ವೀಕರಿಸಲು ನೀವು ಕ್ಯೂಆರ್​ ಕೋಡ್ ಅನ್ನು ಸ್ಕ್ಯಾನ್ ಮಾಡುವ ಅಗತ್ಯವಿಲ್ಲ. ನೀವು ಪ್ರತಿ ಬಾರಿ ಯುಪಿಐ ಪಾವತಿಗಳನ್ನು ಮಾಡುವಾಗ ಸುರಕ್ಷತಾ ಸಲಹೆಗಳನ್ನು ನೆನಪಿನಲ್ಲಿ ಇಡಬೇಕು.

ಕ್ಯೂಆರ್​ ಕೋಡ್ ವಂಚನೆ ಹೇಗೆ?: ಕ್ಯೂಆರ್ ಕೋಡ್ ಅನ್ನು ಯಾವಾಗಲೂ ಪಾವತಿ ಮಾಡಲು ಬಳಸಲಾಗುತ್ತದೆ ವಿನಾ ಪಾವತಿಗಳನ್ನು ತೆಗೆದುಕೊಳ್ಳಲು ಅಲ್ಲ ಎಂದು ಎಸ್‌ಬಿಐ ಹೇಳಿದೆ. ಅಂತಹ ಪರಿಸ್ಥಿತಿಯಲ್ಲಿ ಪಾವತಿಯನ್ನು ಸ್ವೀಕರಿಸುವ ಹೆಸರಿನಲ್ಲಿ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಲು ನಿಮಗೆ ಸಂದೇಶ ಅಥವಾ ಮೇಲ್ ಬಂದರೆ ಅಪ್ಪಿತಪ್ಪಿಯೂ ಸ್ಕ್ಯಾನ್ ಮಾಡಬೇಡಿ. ಇದು ನಿಮ್ಮ ಖಾತೆಯನ್ನು ಖಾಲಿ ಮಾಡಬಹುದು. ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದಾಗ ನಿಮಗೆ ಹಣ ಸಿಗುವುದಿಲ್ಲ ಎಂದು ಬ್ಯಾಂಕ್ ಹೇಳಿದೆ. ಆದರೆ ಬ್ಯಾಂಕ್ ಖಾತೆಯಿಂದ ಹಣವನ್ನು ಹಿಂಪಡೆದಿರುವ ಸಂದೇಶ ಬರುತ್ತದೆ.

ಕ್ಯೂಆರ್​ ಕೋಡ್‌ ವಂಚನೆ ತಪ್ಪಿಸುವುದು ಹೇಗೆ?: ನೀವು ಅರ್ಥ ಮಾಡಿಕೊಳ್ಳಬೇಕಾದ ಕೆಲವು ಸುರಕ್ಷತಾ ಸಲಹೆಗಳನ್ನು ಬ್ಯಾಂಕ್ ನೀಡಿದೆ. ಒಂದೇ ಒಂದು ತಪ್ಪು ಮಾಡಿದರೆ ಹಣ ಕಳೆದುಕೊಳ್ಳ ಬೇಕಾಗಬಹುದು.

– ಯಾವುದೇ ಪಾವತಿ ಮಾಡುವ ಮೊದಲು ಯಾವಾಗಲೂ ಯುಪಿಐ ಐಡಿಯನ್ನು ಪರಿಶೀಲಿಸಿ.

– ಯುಪಿಐ ಐಡಿಯನ್ನು ಹೊರತುಪಡಿಸಿ ಹಣವನ್ನು ಕಳುಹಿಸುವ ಮೊದಲು ಯಾವಾಗಲೂ ಮೊಬೈಲ್ ಸಂಖ್ಯೆ ಮತ್ತು ಹೆಸರನ್ನು ಪರಿಶೀಲಿಸಿ.

– ನಿಮ್ಮ ಯುಪಿಐ ಪಿನ್ ಅನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ.

– ಯುಪಿಐ ಪಿನ್ ಅನ್ನು ತಪ್ಪಾಗಿಯೂ ಗೊಂದಲ ಮಾಡಿಕೊಳ್ಳಬೇಡಿ.

– ಹಣ ವರ್ಗಾವಣೆಗಾಗಿ ಸ್ಕ್ಯಾನರ್ ಅನ್ನು ಸರಿಯಾಗಿ ಬಳಸಿ.

– ಯಾವುದೇ ಸಂದರ್ಭದಲ್ಲಿ ಅಧಿಕೃತ ಅಲ್ಲದ ಮೂಲಗಳಿಂದ ಪರಿಹಾರಗಳನ್ನು ಹುಡುಕಬೇಡಿ. ಯಾವುದೇ ಪಾವತಿ ಅಥವಾ ತಾಂತ್ರಿಕ ಸಮಸ್ಯೆಗಳಿಗೆ ಎಸ್​ಬಿಐ ಅಪ್ಲಿಕೇಷನ್‌ನ ಸಹಾಯ ವಿಭಾಗವನ್ನು ಬಳಸಿ.

– ಯಾವುದೇ ವ್ಯತ್ಯಾಸ ಇದ್ದಲ್ಲಿ ಎಸ್​ಬಿಐ ಕುಂದುಕೊರತೆ ಪರಿಹಾರ ಪೋರ್ಟಲ್ https://crcf.sbi.co.in/ccf/ ಮೂಲಕ ಪರಿಹಾರವನ್ನು ಪಡೆದುಕೊಳ್ಳಿ.

ಇದನ್ನೂ ಓದಿ: SBI Fixed Deposits: ಎಸ್​ಬಿಐನಿಂದ ಫಿಕ್ಸೆಡ್​ ಡೆಪಾಸಿಟ್​ಗಳ ಬಡ್ಡಿ ದರ ಹೆಚ್ಚಳ; ಇಲ್ಲಿದೆ ಸಂಪೂರ್ಣ ಮಾಹಿತಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು