AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMPS Charges: ಎಸ್​ಬಿಐನಲ್ಲಿ 5 ಲಕ್ಷ ರೂಪಾಯಿ ತನಕ ಆನ್​ಲೈನ್ ಐಎಂಪಿಎಸ್​ ವಹಿವಾಟುಗಳಿಗೆ ಯಾವುದೇ ಶುಲ್ಕವಿಲ್ಲ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ರೂ. 5 ಲಕ್ಷದ ತನಕ ಐಎಂಪಿಎಸ್ ವಹಿವಾಟಿಗೆ ಯಾವುದೇ ಶುಲ್ಕವನ್ನು ವಿಧಿಸುವುದಿಲ್ಲ ಎಂದು ಎಸ್​ಬಿಐ ಘೋಷಣೆ ಮಾಡಿದೆ.

IMPS Charges: ಎಸ್​ಬಿಐನಲ್ಲಿ 5 ಲಕ್ಷ ರೂಪಾಯಿ ತನಕ ಆನ್​ಲೈನ್ ಐಎಂಪಿಎಸ್​ ವಹಿವಾಟುಗಳಿಗೆ ಯಾವುದೇ ಶುಲ್ಕವಿಲ್ಲ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 05, 2022 | 8:42 AM

Share

5 ಲಕ್ಷ ರೂಪಾಯಿವರೆಗಿನ ಆನ್‌ಲೈನ್ ಇನ್​ಸ್ಟಂಟ್ ಪೇಮೆಂಟ್ ಸರ್ವೀಸ್​ (IMPS) ವಹಿವಾಟುಗಳಿಗೆ ಯಾವುದೇ ಸೇವಾ ಶುಲ್ಕವನ್ನು ವಿಧಿಸುವುದಿಲ್ಲ ಎಂದು ಸಾರ್ವಜನಿಕ ವಲಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಜನವರಿ 4 ರಂದು ಘೋಷಣೆ ಮಾಡಿದೆ. ಈ ಹಿಂದೆ 2 ಲಕ್ಷ ರೂಪಾಯಿವರೆಗಿನ ಆನ್‌ಲೈನ್ ಐಎಂಪಿಎಸ್ ವಹಿವಾಟುಗಳಿಗೆ ಸೇವಾ ಶುಲ್ಕದಿಂದ ವಿನಾಯಿತಿ ನೀಡಲಾಗಿತ್ತು. “ಗ್ರಾಹಕರು ಡಿಜಿಟಲ್ ಬ್ಯಾಂಕಿಂಗ್ ಅಳವಡಿಸಿಕೊಳ್ಳಲು ಪ್ರೋತ್ಸಾಹಿಸುವ ಉದ್ದೇಶದಿಂದ ಎಸ್‌ಬಿಐ ಯೋನೋ ಸೇರಿದಂತೆ ಇಂಟರ್​ನೆಟ್ ಬ್ಯಾಂಕಿಂಗ್/ಮೊಬೈಲ್ ಬ್ಯಾಂಕಿಂಗ್ ಮೂಲಕ ಮಾಡುವ 5 ಲಕ್ಷ ರೂಪಾಯಿವರೆಗಿನ ಐಎಂಪಿಎಸ್ ವಹಿವಾಟುಗಳಿಗೆ ಯಾವುದೇ ಸೇವಾ ಶುಲ್ಕವನ್ನು ವಿಧಿಸುವುದಿಲ್ಲ,” ಎಂದು ಬ್ಯಾಂಕ್ ಹೇಳಿಕೆಯಲ್ಲಿ ತಿಳಿಸಿದೆ.

ಬ್ಯಾಂಕ್ ಶಾಖೆಗಳ ಮೂಲಕ ನಡೆಸುವ IMPS ವಹಿವಾಟುಗಳಿಗೆ ಸೇವಾ ಶುಲ್ಕವನ್ನು ವಿಧಿಸಲು 2 ಲಕ್ಷದಿಂದ 5 ಲಕ್ಷದವರೆಗೆ ಹೊಸ ಸ್ಲ್ಯಾಬ್ ಅನ್ನು ಸೇರಿಸಲಾಗಿದೆ. “ಈ ಸ್ಲ್ಯಾಬ್‌ಗೆ ಪ್ರಸ್ತಾವಿತ ಸೇವಾ ಶುಲ್ಕಗಳು ರೂ 20 + ಜಿಎಸ್‌ಟಿ,” ಈ ನಿರ್ದೇಶನವು ಫೆಬ್ರವರಿ 1, 2022ರಿಂದ ಜಾರಿಗೆ ಬರಲಿದೆ ಎಂದು ಎಸ್‌ಬಿಐ ಹೇಳಿದೆ. ಗಮನಾರ್ಹವಾಗಿ, ಬ್ಯಾಂಕ್ ಶಾಖೆಯಲ್ಲಿ ರೂ. 1,000ದಿಂದ ರೂ. 10,000 ವರೆಗಿನ ಮೊತ್ತದ IMPS ವಹಿವಾಟುಗಳಿಗೆ ರೂ. 2 + GST ​ಸೇವಾ ಶುಲ್ಕವನ್ನು ಪಡೆಯುತ್ತದೆ. ವಹಿವಾಟಿನ ಮೊತ್ತವು ರೂ. 10,000 ದಿಂದ ರೂ. 1,00,000ವರೆಗೆ ಇದ್ದರೆ ರೂ. 4 + ಜಿಎಸ್​ಟಿ ಶುಲ್ಕವನ್ನು ವಿಧಿಸಲಾಗುತ್ತದೆ. ರೂ. 1,00,000 ಮತ್ತು ರೂ. 2,00,000 ನಡುವಿನ ಮೊತ್ತದ ವಹಿವಾಟುಗಳ ಮೇಲೆ ರೂ. 12 + ಜಿಎಸ್​ಟಿ ವಿಧಿಸಲಾಗುತ್ತದೆ.

ಈ ಮೇಲಿನ ಸ್ಲ್ಯಾಬ್‌ಗಳ ಪ್ರಕಾರ, ಅದೇ ಸೇವಾ ಶುಲ್ಕವನ್ನು ಬ್ಯಾಂಕ್ ಶಾಖೆಯ ಮೂಲಕ NEFT/RTGS ವಹಿವಾಟುಗಳಿಗೆ ವಿಧಿಸಲಾಗುತ್ತದೆ. NEFT/RTGS ಗೆ ಹೋಲಿಸಿದರೆ, IMPS ಅದರ 24×7 ಲಭ್ಯತೆ ಮತ್ತು ಶೀಘ್ರ ದೇಶೀಯ ಹಣ ವರ್ಗಾವಣೆ ವೈಶಿಷ್ಟ್ಯದಿಂದಾಗಿ ನೆಟ್-ಬ್ಯಾಂಕಿಂಗ್ ಬಳಕೆದಾರರಲ್ಲಿ ಹೆಚ್ಚು ಜನಪ್ರಿಯವಾಗಿದೆ.

ಇದನ್ನೂ ಓದಿ: ಫೆಬ್ರವರಿ 1ರಿಂದ 2 ಲಕ್ಷದಿಂದ 5 ಲಕ್ಷದವರೆಗಿನ ಐಎಂಪಿಎಸ್ ವರ್ಗಾವಣೆಗೆ ಎಸ್‌ಬಿಐನಿಂದ ರೂ. 20 + ಜಿಎಸ್‌ಟಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್