AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMPS Charges: ಎಸ್​ಬಿಐನಲ್ಲಿ 5 ಲಕ್ಷ ರೂಪಾಯಿ ತನಕ ಆನ್​ಲೈನ್ ಐಎಂಪಿಎಸ್​ ವಹಿವಾಟುಗಳಿಗೆ ಯಾವುದೇ ಶುಲ್ಕವಿಲ್ಲ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ರೂ. 5 ಲಕ್ಷದ ತನಕ ಐಎಂಪಿಎಸ್ ವಹಿವಾಟಿಗೆ ಯಾವುದೇ ಶುಲ್ಕವನ್ನು ವಿಧಿಸುವುದಿಲ್ಲ ಎಂದು ಎಸ್​ಬಿಐ ಘೋಷಣೆ ಮಾಡಿದೆ.

IMPS Charges: ಎಸ್​ಬಿಐನಲ್ಲಿ 5 ಲಕ್ಷ ರೂಪಾಯಿ ತನಕ ಆನ್​ಲೈನ್ ಐಎಂಪಿಎಸ್​ ವಹಿವಾಟುಗಳಿಗೆ ಯಾವುದೇ ಶುಲ್ಕವಿಲ್ಲ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 05, 2022 | 8:42 AM

Share

5 ಲಕ್ಷ ರೂಪಾಯಿವರೆಗಿನ ಆನ್‌ಲೈನ್ ಇನ್​ಸ್ಟಂಟ್ ಪೇಮೆಂಟ್ ಸರ್ವೀಸ್​ (IMPS) ವಹಿವಾಟುಗಳಿಗೆ ಯಾವುದೇ ಸೇವಾ ಶುಲ್ಕವನ್ನು ವಿಧಿಸುವುದಿಲ್ಲ ಎಂದು ಸಾರ್ವಜನಿಕ ವಲಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಜನವರಿ 4 ರಂದು ಘೋಷಣೆ ಮಾಡಿದೆ. ಈ ಹಿಂದೆ 2 ಲಕ್ಷ ರೂಪಾಯಿವರೆಗಿನ ಆನ್‌ಲೈನ್ ಐಎಂಪಿಎಸ್ ವಹಿವಾಟುಗಳಿಗೆ ಸೇವಾ ಶುಲ್ಕದಿಂದ ವಿನಾಯಿತಿ ನೀಡಲಾಗಿತ್ತು. “ಗ್ರಾಹಕರು ಡಿಜಿಟಲ್ ಬ್ಯಾಂಕಿಂಗ್ ಅಳವಡಿಸಿಕೊಳ್ಳಲು ಪ್ರೋತ್ಸಾಹಿಸುವ ಉದ್ದೇಶದಿಂದ ಎಸ್‌ಬಿಐ ಯೋನೋ ಸೇರಿದಂತೆ ಇಂಟರ್​ನೆಟ್ ಬ್ಯಾಂಕಿಂಗ್/ಮೊಬೈಲ್ ಬ್ಯಾಂಕಿಂಗ್ ಮೂಲಕ ಮಾಡುವ 5 ಲಕ್ಷ ರೂಪಾಯಿವರೆಗಿನ ಐಎಂಪಿಎಸ್ ವಹಿವಾಟುಗಳಿಗೆ ಯಾವುದೇ ಸೇವಾ ಶುಲ್ಕವನ್ನು ವಿಧಿಸುವುದಿಲ್ಲ,” ಎಂದು ಬ್ಯಾಂಕ್ ಹೇಳಿಕೆಯಲ್ಲಿ ತಿಳಿಸಿದೆ.

ಬ್ಯಾಂಕ್ ಶಾಖೆಗಳ ಮೂಲಕ ನಡೆಸುವ IMPS ವಹಿವಾಟುಗಳಿಗೆ ಸೇವಾ ಶುಲ್ಕವನ್ನು ವಿಧಿಸಲು 2 ಲಕ್ಷದಿಂದ 5 ಲಕ್ಷದವರೆಗೆ ಹೊಸ ಸ್ಲ್ಯಾಬ್ ಅನ್ನು ಸೇರಿಸಲಾಗಿದೆ. “ಈ ಸ್ಲ್ಯಾಬ್‌ಗೆ ಪ್ರಸ್ತಾವಿತ ಸೇವಾ ಶುಲ್ಕಗಳು ರೂ 20 + ಜಿಎಸ್‌ಟಿ,” ಈ ನಿರ್ದೇಶನವು ಫೆಬ್ರವರಿ 1, 2022ರಿಂದ ಜಾರಿಗೆ ಬರಲಿದೆ ಎಂದು ಎಸ್‌ಬಿಐ ಹೇಳಿದೆ. ಗಮನಾರ್ಹವಾಗಿ, ಬ್ಯಾಂಕ್ ಶಾಖೆಯಲ್ಲಿ ರೂ. 1,000ದಿಂದ ರೂ. 10,000 ವರೆಗಿನ ಮೊತ್ತದ IMPS ವಹಿವಾಟುಗಳಿಗೆ ರೂ. 2 + GST ​ಸೇವಾ ಶುಲ್ಕವನ್ನು ಪಡೆಯುತ್ತದೆ. ವಹಿವಾಟಿನ ಮೊತ್ತವು ರೂ. 10,000 ದಿಂದ ರೂ. 1,00,000ವರೆಗೆ ಇದ್ದರೆ ರೂ. 4 + ಜಿಎಸ್​ಟಿ ಶುಲ್ಕವನ್ನು ವಿಧಿಸಲಾಗುತ್ತದೆ. ರೂ. 1,00,000 ಮತ್ತು ರೂ. 2,00,000 ನಡುವಿನ ಮೊತ್ತದ ವಹಿವಾಟುಗಳ ಮೇಲೆ ರೂ. 12 + ಜಿಎಸ್​ಟಿ ವಿಧಿಸಲಾಗುತ್ತದೆ.

ಈ ಮೇಲಿನ ಸ್ಲ್ಯಾಬ್‌ಗಳ ಪ್ರಕಾರ, ಅದೇ ಸೇವಾ ಶುಲ್ಕವನ್ನು ಬ್ಯಾಂಕ್ ಶಾಖೆಯ ಮೂಲಕ NEFT/RTGS ವಹಿವಾಟುಗಳಿಗೆ ವಿಧಿಸಲಾಗುತ್ತದೆ. NEFT/RTGS ಗೆ ಹೋಲಿಸಿದರೆ, IMPS ಅದರ 24×7 ಲಭ್ಯತೆ ಮತ್ತು ಶೀಘ್ರ ದೇಶೀಯ ಹಣ ವರ್ಗಾವಣೆ ವೈಶಿಷ್ಟ್ಯದಿಂದಾಗಿ ನೆಟ್-ಬ್ಯಾಂಕಿಂಗ್ ಬಳಕೆದಾರರಲ್ಲಿ ಹೆಚ್ಚು ಜನಪ್ರಿಯವಾಗಿದೆ.

ಇದನ್ನೂ ಓದಿ: ಫೆಬ್ರವರಿ 1ರಿಂದ 2 ಲಕ್ಷದಿಂದ 5 ಲಕ್ಷದವರೆಗಿನ ಐಎಂಪಿಎಸ್ ವರ್ಗಾವಣೆಗೆ ಎಸ್‌ಬಿಐನಿಂದ ರೂ. 20 + ಜಿಎಸ್‌ಟಿ

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?