AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಿಧ ಉದ್ಯೋಗಿ ಸಂಘಟನೆಗಳಿಂದ ಮಾರ್ಚ್​ 28, 29ಕ್ಕೆ ಮುಷ್ಕರ; ಸೇವೆ ವ್ಯತ್ಯಯದ ಬಗ್ಗೆ ಎಸ್​ಬಿಐ ಮಾಹಿತಿ

ಉದ್ಯೋಗಿಗಳ ವಿವಿಧ ಸಂಘಟನೆಗಳು ಮಾರ್ಚ್ 28, 29ರಂದು ಮುಷ್ಕರಕ್ಕೆ ಕರೆ ನೀಡಿರುವುದರಿಂದ ಬ್ಯಾಂಕ್​ ಸೇವೆಗಳಲ್ಲಿ ವ್ಯತ್ಯಯ ಆಗಬಹುದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ತಿಳಿಸಲಾಗಿದೆ.

ವಿವಿಧ ಉದ್ಯೋಗಿ ಸಂಘಟನೆಗಳಿಂದ ಮಾರ್ಚ್​ 28, 29ಕ್ಕೆ ಮುಷ್ಕರ; ಸೇವೆ ವ್ಯತ್ಯಯದ ಬಗ್ಗೆ ಎಸ್​ಬಿಐ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 22, 2022 | 11:55 PM

Share

ಭಾರತದ ಅತಿ ದೊಡ್ಡ ಬ್ಯಾಂಕ್ ಆದ ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾ (State Bank Of India) ಹೇಳಿರುವ ಪ್ರಕಾರ, ಉದ್ಯೋಗಿಗಳ ವಿವಿಧ ಸಂಘಟನೆಗಳು ಮಾರ್ಚ್ 28-29ರಂದು ಎರಡು ದಿನಗಳ ಮುಷ್ಕರಕ್ಕೆ ಕರೆ ನೀಡಿರುವುದರಿಂದ ಬ್ಯಾಂಕಿಂಗ್ ಸೇವೆಗಳು ಸ್ವಲ್ಪ ಮಟ್ಟಿಗೆ ಪರಿಣಾಮ ಬೀರಬಹುದು. ಈ ಬಗ್ಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಂಗಳವಾರ ಹೇಳಿದೆ. ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ (ಎಐಬಿಇಎ), ಬ್ಯಾಂಕ್ ಎಂಪ್ಲಾಯೀಸ್ ಫೆಡರೇಷನ್ ಆಫ್ ಇಂಡಿಯಾ (ಬಿಇಎಫ್‌ಐ) ಮತ್ತು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ (ಎಐಬಿಒಎ) ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ನಿರ್ಧಾರ ಮಾಡಿರುವ ಬಗ್ಗೆ ನೋಟಿಸ್ ನೀಡಿವೆ ಎಂದು ಭಾರತೀಯ ಬ್ಯಾಂಕ್‌ಗಳ ಒಕ್ಕೂಟ (ಐಬಿಎ) ಮಾಹಿತಿ ನೀಡಿದೆ ಎಂದು ಎಸ್‌ಬಿಐ ಹೇಳಿದೆ.

ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವ ಸರ್ಕಾರದ ಕ್ರಮ ಮತ್ತು ಬ್ಯಾಂಕಿಂಗ್ ಕಾನೂನುಗಳ ತಿದ್ದುಪಡಿ ಮಸೂದೆ 2021 ಅನ್ನು ವಿರೋಧಿಸಿ ಈ ಮುಷ್ಕರಕ್ಕೆ ಕರೆ ನೀಡಲಾಗಿದೆ. “ಮುಷ್ಕರದ ದಿನಗಳಲ್ಲಿ ಬ್ಯಾಂಕ್ ತನ್ನ ಶಾಖೆಗಳು ಮತ್ತು ಕಚೇರಿಗಳಲ್ಲಿ ಸಾಮಾನ್ಯ ಕಾರ್ಯ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ವ್ಯವಸ್ಥೆಗಳನ್ನು ಮಾಡಿದೆ. ಆದರೆ ಮುಷ್ಕರದಿಂದ ನಮ್ಮ ಬ್ಯಾಂಕಿನ ಕೆಲಸವು ಸೀಮಿತ ಪ್ರಮಾಣದಲ್ಲಿ ಪರಿಣಾಮ ಬೀರುವ ಸಾಧ್ಯತೆಯಿದೆ,” ಎಂದು ಎಸ್‌ಬಿಐ ನಿಯಂತ್ರಕ ಫೈಲಿಂಗ್​ನಲ್ಲಿ ತಿಳಿಸಿದೆ.

ಈಗ ಕೈಗೊಳ್ಳಲು ನಿರ್ಧರಿಸಿರುವ ಮುಷ್ಕರದಿಂದಾಗಿ ಉಂಟಾಗಲಿರುವ ಪರಿಣಾಮದಿಂದ ಆಗಬಹುದಾದ ನಷ್ಟವನ್ನು ಲೆಕ್ಕ ಹಾಕಲು ಸಾಧ್ಯವಿಲ್ಲ ಎಂದು ಸ್ಟೇಟ್​ ಬ್ಯಾಂಕ್ ಆಫ್ ಇಂಡಿಯಾ ಹೇಳಿದೆ. ಈ ಬಗ್ಗೆ ಎಕನಾಮಿಕ್ ಟೈಮ್ಸ್​ನಲ್ಲಿ ವರದಿಯನ್ನು ಮಾಡಲಾಗಿದೆ.

ಇದನ್ನೂ ಓದಿ: SBI Fixed Deposits: ಎಸ್​ಬಿಐ ಎಫ್​ಡಿ ದರದಲ್ಲಿ ಏರಿಕೆ; ಯಾವ ಅವಧಿಗೆ ಎಷ್ಟು ಎಂಬ ಮಾಹಿತಿ ಇಲ್ಲಿದೆ

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!