AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಿಧ ಉದ್ಯೋಗಿ ಸಂಘಟನೆಗಳಿಂದ ಮಾರ್ಚ್​ 28, 29ಕ್ಕೆ ಮುಷ್ಕರ; ಸೇವೆ ವ್ಯತ್ಯಯದ ಬಗ್ಗೆ ಎಸ್​ಬಿಐ ಮಾಹಿತಿ

ಉದ್ಯೋಗಿಗಳ ವಿವಿಧ ಸಂಘಟನೆಗಳು ಮಾರ್ಚ್ 28, 29ರಂದು ಮುಷ್ಕರಕ್ಕೆ ಕರೆ ನೀಡಿರುವುದರಿಂದ ಬ್ಯಾಂಕ್​ ಸೇವೆಗಳಲ್ಲಿ ವ್ಯತ್ಯಯ ಆಗಬಹುದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ತಿಳಿಸಲಾಗಿದೆ.

ವಿವಿಧ ಉದ್ಯೋಗಿ ಸಂಘಟನೆಗಳಿಂದ ಮಾರ್ಚ್​ 28, 29ಕ್ಕೆ ಮುಷ್ಕರ; ಸೇವೆ ವ್ಯತ್ಯಯದ ಬಗ್ಗೆ ಎಸ್​ಬಿಐ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on: Mar 22, 2022 | 11:55 PM

Share

ಭಾರತದ ಅತಿ ದೊಡ್ಡ ಬ್ಯಾಂಕ್ ಆದ ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾ (State Bank Of India) ಹೇಳಿರುವ ಪ್ರಕಾರ, ಉದ್ಯೋಗಿಗಳ ವಿವಿಧ ಸಂಘಟನೆಗಳು ಮಾರ್ಚ್ 28-29ರಂದು ಎರಡು ದಿನಗಳ ಮುಷ್ಕರಕ್ಕೆ ಕರೆ ನೀಡಿರುವುದರಿಂದ ಬ್ಯಾಂಕಿಂಗ್ ಸೇವೆಗಳು ಸ್ವಲ್ಪ ಮಟ್ಟಿಗೆ ಪರಿಣಾಮ ಬೀರಬಹುದು. ಈ ಬಗ್ಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಂಗಳವಾರ ಹೇಳಿದೆ. ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ (ಎಐಬಿಇಎ), ಬ್ಯಾಂಕ್ ಎಂಪ್ಲಾಯೀಸ್ ಫೆಡರೇಷನ್ ಆಫ್ ಇಂಡಿಯಾ (ಬಿಇಎಫ್‌ಐ) ಮತ್ತು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ (ಎಐಬಿಒಎ) ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ನಿರ್ಧಾರ ಮಾಡಿರುವ ಬಗ್ಗೆ ನೋಟಿಸ್ ನೀಡಿವೆ ಎಂದು ಭಾರತೀಯ ಬ್ಯಾಂಕ್‌ಗಳ ಒಕ್ಕೂಟ (ಐಬಿಎ) ಮಾಹಿತಿ ನೀಡಿದೆ ಎಂದು ಎಸ್‌ಬಿಐ ಹೇಳಿದೆ.

ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವ ಸರ್ಕಾರದ ಕ್ರಮ ಮತ್ತು ಬ್ಯಾಂಕಿಂಗ್ ಕಾನೂನುಗಳ ತಿದ್ದುಪಡಿ ಮಸೂದೆ 2021 ಅನ್ನು ವಿರೋಧಿಸಿ ಈ ಮುಷ್ಕರಕ್ಕೆ ಕರೆ ನೀಡಲಾಗಿದೆ. “ಮುಷ್ಕರದ ದಿನಗಳಲ್ಲಿ ಬ್ಯಾಂಕ್ ತನ್ನ ಶಾಖೆಗಳು ಮತ್ತು ಕಚೇರಿಗಳಲ್ಲಿ ಸಾಮಾನ್ಯ ಕಾರ್ಯ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ವ್ಯವಸ್ಥೆಗಳನ್ನು ಮಾಡಿದೆ. ಆದರೆ ಮುಷ್ಕರದಿಂದ ನಮ್ಮ ಬ್ಯಾಂಕಿನ ಕೆಲಸವು ಸೀಮಿತ ಪ್ರಮಾಣದಲ್ಲಿ ಪರಿಣಾಮ ಬೀರುವ ಸಾಧ್ಯತೆಯಿದೆ,” ಎಂದು ಎಸ್‌ಬಿಐ ನಿಯಂತ್ರಕ ಫೈಲಿಂಗ್​ನಲ್ಲಿ ತಿಳಿಸಿದೆ.

ಈಗ ಕೈಗೊಳ್ಳಲು ನಿರ್ಧರಿಸಿರುವ ಮುಷ್ಕರದಿಂದಾಗಿ ಉಂಟಾಗಲಿರುವ ಪರಿಣಾಮದಿಂದ ಆಗಬಹುದಾದ ನಷ್ಟವನ್ನು ಲೆಕ್ಕ ಹಾಕಲು ಸಾಧ್ಯವಿಲ್ಲ ಎಂದು ಸ್ಟೇಟ್​ ಬ್ಯಾಂಕ್ ಆಫ್ ಇಂಡಿಯಾ ಹೇಳಿದೆ. ಈ ಬಗ್ಗೆ ಎಕನಾಮಿಕ್ ಟೈಮ್ಸ್​ನಲ್ಲಿ ವರದಿಯನ್ನು ಮಾಡಲಾಗಿದೆ.

ಇದನ್ನೂ ಓದಿ: SBI Fixed Deposits: ಎಸ್​ಬಿಐ ಎಫ್​ಡಿ ದರದಲ್ಲಿ ಏರಿಕೆ; ಯಾವ ಅವಧಿಗೆ ಎಷ್ಟು ಎಂಬ ಮಾಹಿತಿ ಇಲ್ಲಿದೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!