ಇಸ್ರೇಲ್-ಇರಾನ್ ಯುದ್ಧಭೀತಿ; ಭಾರತದ ಷೇರುಪೇಟೆಗೆ ಆರಂಭಿಕ ಪೆಟ್ಟು; 15 ನಿಮಿಷದಲ್ಲಿ 5 ಲಕ್ಷ ಕೋಟಿ ರೂ ನಷ್ಟ

Indian stock market shaked in morning: ಇಸ್ರೇಲ್ ಮತ್ತು ಇರಾನ್ ಮಧ್ಯೆ ಯುದ್ಧ ಸಂಭವ ಇರುವ ಹಿನ್ನೆಲೆಯಲ್ಲಿ ಭಾರತದ ಷೇರು ಮಾರುಕಟ್ಟೆಯಲ್ಲಿ ಸೋಮವಾರ ಪೂರ್ಣ ರಕ್ಷಣಾತ್ಮಕ ಆಟ ನಡೆಯುತ್ತಿದೆ. ಮಾರುಕಟ್ಟೆ ಆರಂಭವಾಗಿ ಕೇವಲ 30 ನಿಮಿಷದೊಳಗೆ ಹೂಡಿಕೆದಾರರ 5 ಲಕ್ಷ ಕೋಟಿ ರೂ ಹಣ ನಷ್ಟವಾಗಿದೆ. ಯುದ್ಧ ಭೀತಿಯ ಜೊತೆಗೆ, ಭಾರತ ಮಾರಿಷಸ್ ತೆರಿಗೆ ಒಪ್ಪಂದ, ಅಮೆರಿಕದ ಹಣದುಬ್ಬರ ದರದ ಅಂಶಗಳೂ ಕೂಡ ಷೇರು ಮಾರುಕಟ್ಟೆ ಮೇಲೆ ಋಣಾತ್ಮಕ ಪರಿಣಾಮ ಬೀರಿವೆ. ಈ ಮಧ್ಯೆ ಪೂರ್ಣಪ್ರಮಾಣದ ಯುದ್ಧ ನಡೆಯುವ ಸಾಧ್ಯತೆ ಇಲ್ಲ ಎಂದು ಸುಳಿವು ನೀಡುವ ಅಂಶಗಳೂ ವ್ಯಕ್ತವಾಗಿವೆ.

ಇಸ್ರೇಲ್-ಇರಾನ್ ಯುದ್ಧಭೀತಿ; ಭಾರತದ ಷೇರುಪೇಟೆಗೆ ಆರಂಭಿಕ ಪೆಟ್ಟು; 15 ನಿಮಿಷದಲ್ಲಿ 5 ಲಕ್ಷ ಕೋಟಿ ರೂ ನಷ್ಟ
ಷೇರು ಮಾರುಕಟ್ಟೆ
Follow us
|

Updated on: Apr 15, 2024 | 11:22 AM

ನವದೆಹಲಿ, ಏಪ್ರಿಲ್ 15: ಇರಾನ್ ಮತ್ತು ಇಸ್ರೇಲ್ ಮಧ್ಯೆ ಯಾವಾಗ ಬೇಕಾದರೂ ಪೂರ್ಣಪ್ರಮಾಣದಲ್ಲಿ ಯುದ್ಧ (Iran Israel conflict) ಹೊತ್ತಿಕೊಳ್ಳಬಹುದು. ಇಡೀ ಮಧ್ಯಪ್ರಾಚ್ಯ ಹೊತ್ತಿ ಉರಿಯಬಹುದು ಎನ್ನುವಂತಹ ವಾತಾವರಣ ಇದೆ. ಈ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಭಾರತದ ಷೇರು ಮಾರುಕಟ್ಟೆ (stock market) ನಲುಗಿ ಹೋಗಿದೆ. ಸೋಮವಾರ ಮಾರುಕಟ್ಟೆಯ ವಿವಿಧ ಸೂಚ್ಯಂಕಗಳು ಕುಸಿತ ಕಂಡಿವೆ. ಬಿಎಸ್​ಇ ಮತ್ತು ಎನ್​ಎಸ್​ಇಯ ಬಹುತೇಕ ಎಲ್ಲಾ ಸೂಚ್ಯಂಕಗಳು ಸೋಮವಾರ ಬೆಳಗಿನ ವಹಿವಾಟಿನಲ್ಲಿ ಕುಸಿದಿವೆ. ಷೇರು ಮಾರುಕಟ್ಟೆ ಆರಂಭಗೊಂಡ ಕೇವಲ 15ರಿಂದ 30 ನಿಮಿಷದಲ್ಲಿ ಬಿಎಸ್​ಇ ಸೆನ್ಸೆಕ್ಸ್ 888 ಅಂಕಗಳಷ್ಟು ಕುಸಿತ ಕಂಡಿದೆ. ನಿಫ್ಟಿ50 ಸೂಚ್ಯಂಕದಲ್ಲಿ 160 ಅಂಕಗಳಷ್ಟು ಕಡಿಮೆ ಆಗಿದೆ. ಹೂಡಿಕೆದಾರರು ಈ ಅವಧಿಯಲ್ಲಿ 5 ಲಕ್ಷ ಕೋಟಿ ರೂ ಬಂಡವಾಳ ನಷ್ಟ ಮಾಡಿಕೊಂಡಿದ್ದಾರೆ.

ಬೆಳಗ್ಗೆ 10 ಗಂಟೆಯ ಬಳಿಕ ಷೇರು ಮಾರುಕಟ್ಟೆ ಸೂಚ್ಯಂಕಗಳು ಒಂದಷ್ಟು ಚೇತರಿಕೆ ಕಾಣತೊಡಗಿದ್ದವು. ಬೆಳಗ್ಗೆ 11 ಗಂಟೆಯಲ್ಲಿ ನಿಫ್ಟಿ50 ಸೂಚ್ಯಂಕ ಶೇ. 0.43ರಷ್ಟು ಬಿದ್ದಿತ್ತು. ಬಿಎಸ್​ಇ ಸೆನ್ಸೆಕ್ಸ್30 ಸೂಚ್ಯಂಕ ಕುಸಿತ ಪ್ರಮಾಣ ಶೇ. 0.53ಕ್ಕೆ ತಗ್ಗಿದೆ. ಆರಂಭದಲ್ಲಿ 888 ಅಂಕಗಳನ್ನು ಕಳೆದುಕೊಂಡಿದ್ದ ಸೆನ್ಸೆಕ್ಸ್ 11 ಗಂಟೆಯ ವೇಳೆಗೆ 500 ಅಂಕಗಳನ್ನು ಗಳಿಸಿದಂತಾಗಿದೆ.

ಇದನ್ನೂ ಓದಿ: ಇಸ್ರೇಲ್-ಇರಾನ್ ಯುದ್ಧಭೀತಿ: ಭಾರತ ಹಾಗೂ ಜಾಗತಿಕ ಆರ್ಥಿಕತೆ ಮೇಲೇನು ಪರಿಣಾಮ?

ಷೇರುಪೇಟೆ ಮೇಲೆ ಋಣಾತ್ಮಕ ಪರಿಣಾಮ ಬೀರಿರುವ ಅಂಶಗಳಿವು…

  1. ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ
  2. ಭಾರತ ಮತ್ತು ಮಾರಿಷಸ್ ತೆರಿಗೆ ಒಪ್ಪಂದ
  3. ಅಮೆರಿಕದ ಹಣದುಬ್ಬರ ನಿರೀಕ್ಷೆಗಿಂತ ಮೇಲಿರುವುದು

ಷೇರುಪೇಟೆಗೆ ಸಕಾರಾತ್ಮಕವಾಗಿರುವ ಅಂಶಗಳಿವು…

  1. ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಹೆಚ್ಚು ವ್ಯತ್ಯಯ ಆಗಿಲ್ಲದಿರುವುದು
  2. ಇರಾನ್ ಮೇಲೆ ಇಸ್ರೇಲ್ ಮರುದಾಳಿ ನಡೆಸಿದರೆ ಅಮೆರಿಕ ಬೆಂಬಲ ನೀಡುವುದಿಲ್ಲ ಎಂದು ಜೋ ಬೈಡನ್ ನೀಡಿರುವ ಹೇಳಿಕೆ.

ಇದನ್ನೂಓದಿ: ಭಾರತದ ಹಣದುಬ್ಬರ ಐದು ತಿಂಗಳಲ್ಲೇ ಕನಿಷ್ಠ; ಆದರೂ ಸರ್ಕಾರಕ್ಕೆ ಆತಂಕ ತರಿಸಿದೆ ಇನ್​ಫ್ಲೇಶನ್ ಡಾಟಾ

ತೈಲ ಮಾರುಕಟ್ಟೆಯಲ್ಲಿ ಅಲುಗಾಟ ಆಗಿಲ್ಲದಿರುವುದು, ಇಸ್ರೇಲ್- ಇರಾನ್ ಯುದ್ಧ ಸಾಧ್ಯತೆ ಕಡಿಮೆ ಎಂಬುದನ್ನು ಸೂಚಿಸುತ್ತದೆ. ಹಾಗೆಯೇ, ಅಮೆರಿಕದ ಬೆಂಬಲ ಇರುವುದಿಲ್ಲ ಎನ್ನುವುದು ಖಾತ್ರಿಯಾದರೆ ಇಸ್ರೇಲ್ ಪ್ರತಿದಾಳಿ ನಡೆಸುವ ಸಾಧ್ಯತೆ ಕಡಿಮೆ ಇರುತ್ತದೆ.

ಇವತ್ತು ಮಧ್ಯಾಹ್ನದ ವೇಳೆ ಮಧ್ಯಪ್ರಾಚ್ಯ ಪ್ರದೇಶದಲ್ಲಿ ಯಾವುದೇ ಅತಿರೇಕ ಸಂಭವಿಸದೇ ಇದ್ದರೆ ಭಾರತದ ಷೇರು ಮಾರುಕಟ್ಟೆ ಹಸಿರು ಬಣ್ಣದೊಂದಿಗೆ ಅಂತ್ಯ ಕಾಣಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ